Andolana originals

ಬೈಲಕುಪ್ಪೆ-ಆಲನಹಳ್ಳಿ ರಸ್ತೆ ದುರಸ್ಥಿಗೆ ಆಗ್ರಹ

ಬೈಲಕುಪ್ಪೆ: ಬೈಲಕುಪ್ಪೆ-ಆಲನಹಳ್ಳಿ ಮುಖ್ಯ ರಸ್ತೆಯ ಡಾಂಬರು ಕಿತ್ತು ಬಂದು, ವಾಹನ ಸವಾರರು ಪ್ರತಿನಿತ್ಯ ಸಂಚರಿಸಲು ಹರಸಾಹಸ ಪಡುತ್ತಿದ್ದಾರೆ.

ಪಿರಿಯಾಪಟ್ಟಣ ತಾಲ್ಲೂಕಿನ ಆಲನಹಳ್ಳಿ, ಹಕ್ಕೆಮಾಳದಿಂದ ಟಿಡಿಎಲ್ ಕ್ಯಾಂಪ್‌ತನಕ ಸಂಪೂರ್ಣವಾಗಿ ಡಾಂಬರು ಕಿತ್ತುಬಂದಿದ್ದು ರಸ್ತೆ ತೀರಾ ಹಾಳಾಗಿದೆ.

ಆಲನಹಳ್ಳಿ, ನವಿಲೂರು, ಹಕ್ಕೆಮಾಳ, ಗಿರಿಜನರ ಹಾಡಿ, ರೈತರ ಜಮೀನುಗಳಿಗೆ ತೆರಳಲು ಇದೇ ರಸ್ತೆಯಲ್ಲಿ ಓಡಾಡಬೇಕಿದೆ. ಅಲ್ಲದೆ, ಶಾಲಾ ಮಕ್ಕಳು ಕುಶಾಲ ನಗರ, ಕೊಪ್ಪ ಬೈಲಕುಪ್ಪೆಗೆ ಇದೇ ಮಾರ್ಗದಲ್ಲಿ ಬಂದು ಹೋಗಬೇಕಾಗಿದೆ. ಗುಂಡಿಮಯವಾದ ಈ ರಸ್ತೆಯಲ್ಲಿ ಈಗಾಗಲೇ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯ ಗೊಂಡಿರುವ ಉದಾಹರಣೆಗಳಿವೆ.

ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ರಸ್ತೆಯನ್ನು ದುರಸ್ತಿ ಮಾಡಬೇಕೆಂದು  ಸ್ಥಳೀಯರು ಒತ್ತಾಯಿಸಿದ್ದಾರೆ. ಆಲನಹಳ್ಳಿ, ಹಕ್ಕೆಮಾಳದಿಂದ ಟಿಡಿಎಲ್ ಕ್ಯಾಂಪ್ ಮುಖ್ಯರಸ್ತೆ ವರೆಗೂ ಸಂಪೂರ್ಣ ಹದಗೆಟ್ಟಿದೆ.

ಈ ಭಾಗದ ರೈತರು ಜಮೀನು ಚಟುವಟಿಕೆಗಳಿಗೆ ತೆರಳಲು, ವಾಹನ ಸವಾರರು ಸಂಚರಿಸಲು ಪರದಾಡುತ್ತಿದ್ದಾರೆ. ಅಧಿಕಾರಿಗಳು ಕೂಡಲೇ ಈ ರಸ್ತೆಯನ್ನು ದುರಸ್ತಿಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಹುಣಸೇವಾಡಿ ಗ್ರಾಪಂ ಮಾಜಿ ಅಧ್ಯಕ್ಷ ರಾಜಣ್ಣ ಒತ್ತಾಯಿಸಿದ್ದಾರೆ.

” ನಂದಿನಾಥಪುರ, ಬೂತನಹಳ್ಳಿ, ಆಲನಹಳ್ಳಿ ಮುಖ್ಯರಸ್ತೆ ಲೋಕೋಪಯೋಗಿ ಇಲಾಖೆಗೆ ಸೇರಿದೆ. ಈ ರಸ್ತೆಯಲ್ಲಿ ನಂದಿನಾಥಪುರ, ಬೂತನಹಳ್ಳಿ, ಆಲನಹಳ್ಳಿ ತನಕ ಗುಂಡಿಗಳಿಗೆ ತೇಪೆ ಹಾಕಲಾಗಿದೆ. ಹಕ್ಕೆಮಾಳದಿಂದ ಟಿಡಿಎಲ್ ಕ್ಯಾಂಪ್ ತನಕ ರಸ್ತೆ ದುರಸ್ತಿಗೆ ಈಗಾಗಲೇ ಹಣ ಮಂಜೂರಾಗಿದ್ದು, ಟೆಂಡರ್ ಪ್ರಕ್ರಿಯೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಸಚಿವರಾದ ಕೆ.ವೆಂಕಟೇಶ್ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ.”

-ಎಂ.ಆರ್.ವೆಂಕಟೇಶ್, ಎಇಇ, ಲೋಕೋಪಯೋಗಿ ಇಲಾಖೆ, ಪಿರಿಯಾಪಟ್ಟಣ

ಆಂದೋಲನ ಡೆಸ್ಕ್

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

5 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

5 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

5 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

5 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

6 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

6 hours ago