Andolana originals

ಬೈಲಕುಪ್ಪೆ-ಆಲನಹಳ್ಳಿ ರಸ್ತೆ ದುರಸ್ಥಿಗೆ ಆಗ್ರಹ

ಬೈಲಕುಪ್ಪೆ: ಬೈಲಕುಪ್ಪೆ-ಆಲನಹಳ್ಳಿ ಮುಖ್ಯ ರಸ್ತೆಯ ಡಾಂಬರು ಕಿತ್ತು ಬಂದು, ವಾಹನ ಸವಾರರು ಪ್ರತಿನಿತ್ಯ ಸಂಚರಿಸಲು ಹರಸಾಹಸ ಪಡುತ್ತಿದ್ದಾರೆ.

ಪಿರಿಯಾಪಟ್ಟಣ ತಾಲ್ಲೂಕಿನ ಆಲನಹಳ್ಳಿ, ಹಕ್ಕೆಮಾಳದಿಂದ ಟಿಡಿಎಲ್ ಕ್ಯಾಂಪ್‌ತನಕ ಸಂಪೂರ್ಣವಾಗಿ ಡಾಂಬರು ಕಿತ್ತುಬಂದಿದ್ದು ರಸ್ತೆ ತೀರಾ ಹಾಳಾಗಿದೆ.

ಆಲನಹಳ್ಳಿ, ನವಿಲೂರು, ಹಕ್ಕೆಮಾಳ, ಗಿರಿಜನರ ಹಾಡಿ, ರೈತರ ಜಮೀನುಗಳಿಗೆ ತೆರಳಲು ಇದೇ ರಸ್ತೆಯಲ್ಲಿ ಓಡಾಡಬೇಕಿದೆ. ಅಲ್ಲದೆ, ಶಾಲಾ ಮಕ್ಕಳು ಕುಶಾಲ ನಗರ, ಕೊಪ್ಪ ಬೈಲಕುಪ್ಪೆಗೆ ಇದೇ ಮಾರ್ಗದಲ್ಲಿ ಬಂದು ಹೋಗಬೇಕಾಗಿದೆ. ಗುಂಡಿಮಯವಾದ ಈ ರಸ್ತೆಯಲ್ಲಿ ಈಗಾಗಲೇ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯ ಗೊಂಡಿರುವ ಉದಾಹರಣೆಗಳಿವೆ.

ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ರಸ್ತೆಯನ್ನು ದುರಸ್ತಿ ಮಾಡಬೇಕೆಂದು  ಸ್ಥಳೀಯರು ಒತ್ತಾಯಿಸಿದ್ದಾರೆ. ಆಲನಹಳ್ಳಿ, ಹಕ್ಕೆಮಾಳದಿಂದ ಟಿಡಿಎಲ್ ಕ್ಯಾಂಪ್ ಮುಖ್ಯರಸ್ತೆ ವರೆಗೂ ಸಂಪೂರ್ಣ ಹದಗೆಟ್ಟಿದೆ.

ಈ ಭಾಗದ ರೈತರು ಜಮೀನು ಚಟುವಟಿಕೆಗಳಿಗೆ ತೆರಳಲು, ವಾಹನ ಸವಾರರು ಸಂಚರಿಸಲು ಪರದಾಡುತ್ತಿದ್ದಾರೆ. ಅಧಿಕಾರಿಗಳು ಕೂಡಲೇ ಈ ರಸ್ತೆಯನ್ನು ದುರಸ್ತಿಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಹುಣಸೇವಾಡಿ ಗ್ರಾಪಂ ಮಾಜಿ ಅಧ್ಯಕ್ಷ ರಾಜಣ್ಣ ಒತ್ತಾಯಿಸಿದ್ದಾರೆ.

” ನಂದಿನಾಥಪುರ, ಬೂತನಹಳ್ಳಿ, ಆಲನಹಳ್ಳಿ ಮುಖ್ಯರಸ್ತೆ ಲೋಕೋಪಯೋಗಿ ಇಲಾಖೆಗೆ ಸೇರಿದೆ. ಈ ರಸ್ತೆಯಲ್ಲಿ ನಂದಿನಾಥಪುರ, ಬೂತನಹಳ್ಳಿ, ಆಲನಹಳ್ಳಿ ತನಕ ಗುಂಡಿಗಳಿಗೆ ತೇಪೆ ಹಾಕಲಾಗಿದೆ. ಹಕ್ಕೆಮಾಳದಿಂದ ಟಿಡಿಎಲ್ ಕ್ಯಾಂಪ್ ತನಕ ರಸ್ತೆ ದುರಸ್ತಿಗೆ ಈಗಾಗಲೇ ಹಣ ಮಂಜೂರಾಗಿದ್ದು, ಟೆಂಡರ್ ಪ್ರಕ್ರಿಯೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಸಚಿವರಾದ ಕೆ.ವೆಂಕಟೇಶ್ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ.”

-ಎಂ.ಆರ್.ವೆಂಕಟೇಶ್, ಎಇಇ, ಲೋಕೋಪಯೋಗಿ ಇಲಾಖೆ, ಪಿರಿಯಾಪಟ್ಟಣ

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

6 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

6 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

7 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

7 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

8 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

8 hours ago