Andolana originals

ಬೈಲಕುಪ್ಪೆ-ಆಲನಹಳ್ಳಿ ರಸ್ತೆ ದುರಸ್ಥಿಗೆ ಆಗ್ರಹ

ಬೈಲಕುಪ್ಪೆ: ಬೈಲಕುಪ್ಪೆ-ಆಲನಹಳ್ಳಿ ಮುಖ್ಯ ರಸ್ತೆಯ ಡಾಂಬರು ಕಿತ್ತು ಬಂದು, ವಾಹನ ಸವಾರರು ಪ್ರತಿನಿತ್ಯ ಸಂಚರಿಸಲು ಹರಸಾಹಸ ಪಡುತ್ತಿದ್ದಾರೆ.

ಪಿರಿಯಾಪಟ್ಟಣ ತಾಲ್ಲೂಕಿನ ಆಲನಹಳ್ಳಿ, ಹಕ್ಕೆಮಾಳದಿಂದ ಟಿಡಿಎಲ್ ಕ್ಯಾಂಪ್‌ತನಕ ಸಂಪೂರ್ಣವಾಗಿ ಡಾಂಬರು ಕಿತ್ತುಬಂದಿದ್ದು ರಸ್ತೆ ತೀರಾ ಹಾಳಾಗಿದೆ.

ಆಲನಹಳ್ಳಿ, ನವಿಲೂರು, ಹಕ್ಕೆಮಾಳ, ಗಿರಿಜನರ ಹಾಡಿ, ರೈತರ ಜಮೀನುಗಳಿಗೆ ತೆರಳಲು ಇದೇ ರಸ್ತೆಯಲ್ಲಿ ಓಡಾಡಬೇಕಿದೆ. ಅಲ್ಲದೆ, ಶಾಲಾ ಮಕ್ಕಳು ಕುಶಾಲ ನಗರ, ಕೊಪ್ಪ ಬೈಲಕುಪ್ಪೆಗೆ ಇದೇ ಮಾರ್ಗದಲ್ಲಿ ಬಂದು ಹೋಗಬೇಕಾಗಿದೆ. ಗುಂಡಿಮಯವಾದ ಈ ರಸ್ತೆಯಲ್ಲಿ ಈಗಾಗಲೇ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯ ಗೊಂಡಿರುವ ಉದಾಹರಣೆಗಳಿವೆ.

ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ರಸ್ತೆಯನ್ನು ದುರಸ್ತಿ ಮಾಡಬೇಕೆಂದು  ಸ್ಥಳೀಯರು ಒತ್ತಾಯಿಸಿದ್ದಾರೆ. ಆಲನಹಳ್ಳಿ, ಹಕ್ಕೆಮಾಳದಿಂದ ಟಿಡಿಎಲ್ ಕ್ಯಾಂಪ್ ಮುಖ್ಯರಸ್ತೆ ವರೆಗೂ ಸಂಪೂರ್ಣ ಹದಗೆಟ್ಟಿದೆ.

ಈ ಭಾಗದ ರೈತರು ಜಮೀನು ಚಟುವಟಿಕೆಗಳಿಗೆ ತೆರಳಲು, ವಾಹನ ಸವಾರರು ಸಂಚರಿಸಲು ಪರದಾಡುತ್ತಿದ್ದಾರೆ. ಅಧಿಕಾರಿಗಳು ಕೂಡಲೇ ಈ ರಸ್ತೆಯನ್ನು ದುರಸ್ತಿಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಹುಣಸೇವಾಡಿ ಗ್ರಾಪಂ ಮಾಜಿ ಅಧ್ಯಕ್ಷ ರಾಜಣ್ಣ ಒತ್ತಾಯಿಸಿದ್ದಾರೆ.

” ನಂದಿನಾಥಪುರ, ಬೂತನಹಳ್ಳಿ, ಆಲನಹಳ್ಳಿ ಮುಖ್ಯರಸ್ತೆ ಲೋಕೋಪಯೋಗಿ ಇಲಾಖೆಗೆ ಸೇರಿದೆ. ಈ ರಸ್ತೆಯಲ್ಲಿ ನಂದಿನಾಥಪುರ, ಬೂತನಹಳ್ಳಿ, ಆಲನಹಳ್ಳಿ ತನಕ ಗುಂಡಿಗಳಿಗೆ ತೇಪೆ ಹಾಕಲಾಗಿದೆ. ಹಕ್ಕೆಮಾಳದಿಂದ ಟಿಡಿಎಲ್ ಕ್ಯಾಂಪ್ ತನಕ ರಸ್ತೆ ದುರಸ್ತಿಗೆ ಈಗಾಗಲೇ ಹಣ ಮಂಜೂರಾಗಿದ್ದು, ಟೆಂಡರ್ ಪ್ರಕ್ರಿಯೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಸಚಿವರಾದ ಕೆ.ವೆಂಕಟೇಶ್ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ.”

-ಎಂ.ಆರ್.ವೆಂಕಟೇಶ್, ಎಇಇ, ಲೋಕೋಪಯೋಗಿ ಇಲಾಖೆ, ಪಿರಿಯಾಪಟ್ಟಣ

ಆಂದೋಲನ ಡೆಸ್ಕ್

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

24 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

9 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

9 hours ago