Andolana originals

ತಾಳಬೆಟ್ಟ-ಮ.ಬೆಟ್ಟ ರಸ್ತೆ ಅಭಿವೃದ್ಧಿಗೆ ಆಗ್ರಹ

೯ ಕಿ.ಮೀ.ನಷ್ಟು ರಸ್ತೆ ಸಂಪೂರ್ಣ ಹದಗೆಟ್ಟು ವಾಹನ ಸಂಚಾರಕ್ಕೆ ತೀವ್ರ ಅಡಚಣೆ

ಮಹಾದೇಶ್ ಎಂ.ಗೌಡ

ಹನೂರು: ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ತೀವ್ರ ಹದಗೆಟ್ಟಿರುವುದರಿಂದ ವಾಹನಗಳ ಸಂಚಾರ ದುಸ್ತರವಾಗಿದೆ.

೨ ವರ್ಷಗಳ ಹಿಂದೆ ಹನೂರು ಪಟ್ಟಣದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಮಹದೇಶ್ವರ ಬೆಟ್ಟದ ರಸ್ತೆಗೆ ೧೦೦ ಕೋಟಿ ರೂ. ಅನುದಾನ ನೀಡುವುದಾಗಿ ಘೋಷಣೆ ಮಾಡಿದ್ದರು. ಇದು ಕೇವಲ ಭರವಸೆಗೆ ಮಾತ್ರ ಸೀಮಿತವಾಯಿತು.

ಇದಾದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ೧೯ ತಿಂಗಳುಗಳು ಕಳೆದಿದ್ದರೂ ಇದುವರೆಗೂ ಈ ರಸ್ತೆ ಅಭಿವೃದ್ಧಿಗೆ ಅನುದಾನ ನೀಡಿಲ್ಲ.

ರಸ್ತೆಯುದ್ದಕ್ಕೂ ಗುಂಡಿಗಳಾಗಿ ಪ್ರತಿನಿತ್ಯ ಒಂದಲ್ಲ ಒಂದು ಅಪಘಾತಗಳು ಸಂಭವಿಸುತ್ತಿವೆ. ತಾಳಬೆಟ್ಟದಿಂದ ಮ.ಬೆಟ್ಟದ ವರೆಗಿನ ೯ ಕಿ.ಮೀ. ರಸ್ತೆ ಸಂಪೂರ್ಣ ಹಾಳಾಗಿದ್ದು ಮಳೆಗಾಲದ ಸಂದರ್ಭದಲ್ಲಿ ವಾಹನಗಳು ಸಂಚರಿಸುವುದೇ ಕಷ್ಟವಾಗಿದೆ.

ಅರಣ್ಯ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಸಾಧ್ಯವಾಗದೇ ಇರುವುದರಿಂದ ಕೆಲವು ಕಡೆ ಮಳೆಯಿಂದ ರಸ್ತೆಯ ಇಕ್ಕೆಲಗಳಲ್ಲಿ ಮಣ್ಣು ಕೊಚ್ಚಿಕೊಂಡು ಹೋಗಿದ್ದು, ಒಂದು ವಾಹನ ಮುಂದೆ ಹೋದ ನಂತರವಷ್ಟೇ ಇನ್ನೊಂದು ವಾಹನ ಸಂಚರಿಸಬೇಕಾಗಿದೆ. ಇದರಿಂದ ಜಾತ್ರಾ ಸಂದರ್ಭಗಳಲ್ಲಿ ಅಧಿಕ ಸಂಚಾರ ಸಮಸ್ಯೆ ಉಂಟಾಗಿ ಭಕ್ತರು ಪರದಾಡುತ್ತಿದ್ದಾರೆ. ಅದರಲ್ಲೂ ಹಬ್ಬ, ಅಮಾವಾಸ್ಯೆ ಜಾತ್ರೆ ಸಂದರ್ಭಗಳಲ್ಲಿ ಸಮಸ್ಯೆ ಹೆಚ್ಚಾಗಿದೆ.

ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಮುಖ್ಯಮಂತ್ರಿ ಸಿದ್ದರಾಮಯ್ಯರವರೇ ಆಗಿದ್ದಾರೆ. ಜತೆಗೆ ಮುಂಬರುವ ಜನವರಿ ತಿಂಗಳಿನಲ್ಲಿ ಮ.ಬೆಟ್ಟದಲ್ಲಿಯೇ ಸಂಪುಟ ಸಭೆ ನಡೆಸುವುದಾಗಿ ಸಿದ್ದರಾಮಯ್ಯ ಈಗಾಗಲೇ ಘೋಷಣೆ ಮಾಡಿರುವುದರಿಂದ ಕ್ಷೇತ್ರದ ಗ್ರಾಮೀಣ ಭಾಗದ ರಸ್ತೆಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಕ್ಷೇತ್ರದ ಮತದಾರರು ಮನವಿ ಮಾಡಿದ್ದಾರೆ.

ಮಹದೇಶ್ವರ ಬೆಟ್ಟಕ್ಕೆ ಪ್ರತಿನಿತ್ಯ ಭಕ್ತರು ಆಗಮಿಸುತ್ತಿದ್ದಾರೆ. ಅವರಿಗೆ ಅವಶ್ಯವಿರುವ ರಸ್ತೆಯನ್ನು ಅಭಿವೃದ್ಧಿಪಡಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಇದರಿಂದ ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತಿವೆ. ಶೀಘ್ರವಾಗಿ ಮಹದೇಶ್ವರ ಬೆಟ್ಟದವರೆಗಿನ ರಸ್ತೆ ಅಭಿವೃದ್ಧಿಪಡಿಸಬೇಕು.

-ಚೇತನ್, ಬಂಡಳ್ಳಿ ನಿವಾಸಿ

ಹನೂರಿನಿಂದ ಪಾಲಾರ್ ಗ್ರಾಮದವರೆಗೆ ಕೆ-ಶಿಪ್ ಯೋಜನೆಯಡಿ ರಸ್ತೆ ಅಭಿವೃದ್ಧಿಪಡಿಸಲು ಈಗಾಗಲೇ ಕ್ರಿಯಾಯೋಜನೆ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲಾಗಿದೆ. ತಾತ್ಕಾಲಿಕವಾಗಿ ಹನೂರಿನಿಂದ ಮ.ಬೆಟ್ಟದವರೆಗಿನ ೪೨ ಕಿ.ಮೀ. ರಸ್ತೆಗೆ ಡಾಂಬರು ಹಾಕಲು ೧೫ ಕೋಟಿ ರೂ. ಅನುದಾನ ಮಂಜೂರಾಗಿದ್ದು ಮಳೆ ನಿಂತ ತಕ್ಷಣ ಕಾಮಗಾರಿ ಪ್ರಾರಂಭಿಸಲಾಗುವುದು.

-ಚಿನ್ನಣ್ಣ, ಎಇಇ, ಲೋಕೋಪಯೋಗಿ ಇಲಾಖೆ

 

ಆಂದೋಲನ ಡೆಸ್ಕ್

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

4 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

6 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

6 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

6 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

6 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

6 hours ago