೯ ಕಿ.ಮೀ.ನಷ್ಟು ರಸ್ತೆ ಸಂಪೂರ್ಣ ಹದಗೆಟ್ಟು ವಾಹನ ಸಂಚಾರಕ್ಕೆ ತೀವ್ರ ಅಡಚಣೆ
ಮಹಾದೇಶ್ ಎಂ.ಗೌಡ
ಹನೂರು: ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ತೀವ್ರ ಹದಗೆಟ್ಟಿರುವುದರಿಂದ ವಾಹನಗಳ ಸಂಚಾರ ದುಸ್ತರವಾಗಿದೆ.
೨ ವರ್ಷಗಳ ಹಿಂದೆ ಹನೂರು ಪಟ್ಟಣದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಮಹದೇಶ್ವರ ಬೆಟ್ಟದ ರಸ್ತೆಗೆ ೧೦೦ ಕೋಟಿ ರೂ. ಅನುದಾನ ನೀಡುವುದಾಗಿ ಘೋಷಣೆ ಮಾಡಿದ್ದರು. ಇದು ಕೇವಲ ಭರವಸೆಗೆ ಮಾತ್ರ ಸೀಮಿತವಾಯಿತು.
ಇದಾದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ೧೯ ತಿಂಗಳುಗಳು ಕಳೆದಿದ್ದರೂ ಇದುವರೆಗೂ ಈ ರಸ್ತೆ ಅಭಿವೃದ್ಧಿಗೆ ಅನುದಾನ ನೀಡಿಲ್ಲ.
ರಸ್ತೆಯುದ್ದಕ್ಕೂ ಗುಂಡಿಗಳಾಗಿ ಪ್ರತಿನಿತ್ಯ ಒಂದಲ್ಲ ಒಂದು ಅಪಘಾತಗಳು ಸಂಭವಿಸುತ್ತಿವೆ. ತಾಳಬೆಟ್ಟದಿಂದ ಮ.ಬೆಟ್ಟದ ವರೆಗಿನ ೯ ಕಿ.ಮೀ. ರಸ್ತೆ ಸಂಪೂರ್ಣ ಹಾಳಾಗಿದ್ದು ಮಳೆಗಾಲದ ಸಂದರ್ಭದಲ್ಲಿ ವಾಹನಗಳು ಸಂಚರಿಸುವುದೇ ಕಷ್ಟವಾಗಿದೆ.
ಅರಣ್ಯ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಸಾಧ್ಯವಾಗದೇ ಇರುವುದರಿಂದ ಕೆಲವು ಕಡೆ ಮಳೆಯಿಂದ ರಸ್ತೆಯ ಇಕ್ಕೆಲಗಳಲ್ಲಿ ಮಣ್ಣು ಕೊಚ್ಚಿಕೊಂಡು ಹೋಗಿದ್ದು, ಒಂದು ವಾಹನ ಮುಂದೆ ಹೋದ ನಂತರವಷ್ಟೇ ಇನ್ನೊಂದು ವಾಹನ ಸಂಚರಿಸಬೇಕಾಗಿದೆ. ಇದರಿಂದ ಜಾತ್ರಾ ಸಂದರ್ಭಗಳಲ್ಲಿ ಅಧಿಕ ಸಂಚಾರ ಸಮಸ್ಯೆ ಉಂಟಾಗಿ ಭಕ್ತರು ಪರದಾಡುತ್ತಿದ್ದಾರೆ. ಅದರಲ್ಲೂ ಹಬ್ಬ, ಅಮಾವಾಸ್ಯೆ ಜಾತ್ರೆ ಸಂದರ್ಭಗಳಲ್ಲಿ ಸಮಸ್ಯೆ ಹೆಚ್ಚಾಗಿದೆ.
ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಮುಖ್ಯಮಂತ್ರಿ ಸಿದ್ದರಾಮಯ್ಯರವರೇ ಆಗಿದ್ದಾರೆ. ಜತೆಗೆ ಮುಂಬರುವ ಜನವರಿ ತಿಂಗಳಿನಲ್ಲಿ ಮ.ಬೆಟ್ಟದಲ್ಲಿಯೇ ಸಂಪುಟ ಸಭೆ ನಡೆಸುವುದಾಗಿ ಸಿದ್ದರಾಮಯ್ಯ ಈಗಾಗಲೇ ಘೋಷಣೆ ಮಾಡಿರುವುದರಿಂದ ಕ್ಷೇತ್ರದ ಗ್ರಾಮೀಣ ಭಾಗದ ರಸ್ತೆಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಕ್ಷೇತ್ರದ ಮತದಾರರು ಮನವಿ ಮಾಡಿದ್ದಾರೆ.
ಮಹದೇಶ್ವರ ಬೆಟ್ಟಕ್ಕೆ ಪ್ರತಿನಿತ್ಯ ಭಕ್ತರು ಆಗಮಿಸುತ್ತಿದ್ದಾರೆ. ಅವರಿಗೆ ಅವಶ್ಯವಿರುವ ರಸ್ತೆಯನ್ನು ಅಭಿವೃದ್ಧಿಪಡಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಇದರಿಂದ ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತಿವೆ. ಶೀಘ್ರವಾಗಿ ಮಹದೇಶ್ವರ ಬೆಟ್ಟದವರೆಗಿನ ರಸ್ತೆ ಅಭಿವೃದ್ಧಿಪಡಿಸಬೇಕು.
-ಚೇತನ್, ಬಂಡಳ್ಳಿ ನಿವಾಸಿ
ಹನೂರಿನಿಂದ ಪಾಲಾರ್ ಗ್ರಾಮದವರೆಗೆ ಕೆ-ಶಿಪ್ ಯೋಜನೆಯಡಿ ರಸ್ತೆ ಅಭಿವೃದ್ಧಿಪಡಿಸಲು ಈಗಾಗಲೇ ಕ್ರಿಯಾಯೋಜನೆ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲಾಗಿದೆ. ತಾತ್ಕಾಲಿಕವಾಗಿ ಹನೂರಿನಿಂದ ಮ.ಬೆಟ್ಟದವರೆಗಿನ ೪೨ ಕಿ.ಮೀ. ರಸ್ತೆಗೆ ಡಾಂಬರು ಹಾಕಲು ೧೫ ಕೋಟಿ ರೂ. ಅನುದಾನ ಮಂಜೂರಾಗಿದ್ದು ಮಳೆ ನಿಂತ ತಕ್ಷಣ ಕಾಮಗಾರಿ ಪ್ರಾರಂಭಿಸಲಾಗುವುದು.
-ಚಿನ್ನಣ್ಣ, ಎಇಇ, ಲೋಕೋಪಯೋಗಿ ಇಲಾಖೆ
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…