ಕೋಟೆಯ ವಿವಿಧೆಡೆ ಕಳವು ಪ್ರಕರಣ: ಪತ್ತೆಯಾಗದ ಆರೋಪಿಗಳ ಸುಳಿವು; ಜನರಲ್ಲಿ ಭೀತಿ
ಎಚ್.ಡಿ.ಕೋಟೆ: ಪಟ್ಟಣದಲ್ಲಿ ನಡೆಯುತ್ತಿರುವ ಗಾಂಜಾ, ಇತರ ಮಾದಕ ವಸ್ತುಗಳ ಮಾರಾಟ ಹಾವಳಿಯಿಂದಾಗಿ ಯುವ ಸಮುದಾಯ ಬಲಿಯಾಗುತ್ತಿದೆ. ಎಗ್ಗಿಲ್ಲದೆ ನಡೆಯುತ್ತಿರುವ ಸರಣಿ ಕಳ್ಳತನ ಮತ್ತು ಅಕ್ರಮ ಚಟುವಟಿಕೆಗಳು ದಿನೇದಿನೇ ಹೆಚ್ಚಾಗುತ್ತಿರುವುದು ಜನಸಾಮಾನ್ಯರಲ್ಲಿ ಆತಂಕ ಉಂಟುಮಾಡಿದೆ.
ಕಳೆದೆರಡು ವರ್ಷಗಳಿಂದ ಪಟ್ಟಣ ವ್ಯಾಪ್ತಿಯಲ್ಲಿ ರಾತ್ರಿ, ಹಾಡಹಗಲಲ್ಲೇ ಕಳ್ಳತನ ನಡೆಯುತ್ತಿದ್ದು, ಮೂರು ತಿಂಗಳಿನಿಂದ ದೇವಸ್ಥಾನ ಮತ್ತು ಮನೆಗಳಲ್ಲಿ ಸರಣಿ ಕಳವು ನಿರಂತರವಾಗಿ ನಡೆಯುತ್ತಿದ್ದು ಖದೀಮರು ಲಕ್ಷಾಂತರ ರೂ. ಬೆಲೆಬಾಳುವ ಚಿನ್ನ -ಬೆಳ್ಳಿ ಆಭರಣಗಳು ಹಾಗೂ ನಗದನ್ನು ದೋಚಿದ್ದಾರೆ.
ಒಂದು ವಾರದಲ್ಲೇ ಪಟ್ಟಣದ ೧ನೇ ಮುಖ್ಯರಸ್ತೆಯ ವಾರಾಹಿ ಮಾರಮ್ಮ ದೇವಸ್ಥಾನ, ಪೇಪರ್ ಶೇಷಾದ್ರಿ, ವಿಶ್ವನಾಥ ಕಾಲೋನಿಯ ಗೋಬಿ ಕೃಷ್ಣ, ಸ್ಟೇಡಿಯಂ ಬಡಾವಣೆಯ ಎಎಸ್ಐ ಕೆ.ಕೆ.ಮಹದೇವ್ ಎಂಬವರ ಮನೆಗಳಲ್ಲಿ ೫೫ ಲಕ್ಷ ರೂ. ವೆಚ್ಚದ ಚಿನ್ನ, ಬೆಳ್ಳಿ ಆಭರಣ ಹಾಗೂ ನಗದನ್ನು ಕಳ್ಳರು ದೋಚಿರುವುದು ತಾಲ್ಲೂಕಿನ ಜನರನ್ನು ಬೆಚ್ಚಿಬೀಳಿಸಿದೆ.
ಇದನ್ನು ಓದಿ: ಮೈಸೂರಲ್ಲಿ ಸ್ಥಾಪನೆಯಾಗಲಿದೆ ನಿರಾಶ್ರಿತ ಮಾನಸಿಕ ಅಸ್ವಸ್ಥರ ಕೇಂದ್ರ
ಪಟ್ಟಣ ಮತ್ತು ತಾಲ್ಲೂಕಿನಾದ್ಯಂತ ಎರಡು ವರ್ಷಗಳಿಂದ ನಡೆಯುತ್ತಿರುವ ಕಳ್ಳತನ ಪ್ರಕರಣಗಳ ಬಗ್ಗೆ ಪೊಲೀಸರು ಎಚ್ಚರಿಕೆ ವಹಿಸಿದರೂ ಕಳ್ಳರ ಸುಳಿವು, ಕಳವಾದ ವಸ್ತುಗಳು ಮಾಲೀಕರ ವಶವಾಗದಿರುವುದರಿಂದ ಪೊಲೀಸರ ಕಾರ್ಯವೈಖರಿ ಬಗ್ಗೆ ಜನತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಾಲ್ಲೂಕಿನಾದ್ಯಂತ ಅಲ್ಲಲ್ಲಿ ಕಳವು, ಅಕ್ರಮ ಚಟುವಟಿಕೆಗಳು, ದಂಧೆಗಳು ನಡೆಯುತ್ತಿದ್ದರೂ ಪೊಲೀಸ್ ಇಲಾಖೆಯವರು ಕಂಡರೂ ಕಾಣದಂತೆ ಇರುವುದರಿಂದಲೇ ದಿನದಿಂದ ದಿನಕ್ಕೆ ಸರಣಿ ಕಳ್ಳತನ ಹೆಚ್ಚಾಗಲು ಕಾರಣವಾಗಿದೆ ಎಂದು ಮಹಿಳೆಯರು ಮತ್ತು ಪ್ರಜ್ಞಾವಂತರು ಆರೋಪಿಸಿದ್ದಾರೆ. ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗುವ ಅನೇಕ ಯುವಕರು ಹಣಕಾಸು ಮುಗ್ಗಟ್ಟು ಎದುರಾದಾಗ ಮನೆಗಳವು ಮಾಡುತ್ತಾರೆ. ಬೀಗ ಹಾಕಿರುವ ಮನೆಗಳು, ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ಗುಂಪು ಕಳ್ಳತನ ನಡೆಸುತ್ತಿದ್ದಾರೆ.
ಪೊಲೀಸರು ಪಟ್ಟಣ ಮತ್ತು ತಾಲ್ಲೂಕಿನಾದ್ಯಂತ ಗಾಂಜಾ, ಅಕ್ರಮ ಮದ್ಯ ಮಾರಾಟ, ಜೂಜಾಟ, ಸರಣಿ ಕಳ್ಳತನಕ್ಕೆ ಕಡಿವಾಣ ಹಾಕುವ ಕೆಲಸಕ್ಕೆ ಮುಂದಾಗಬೇಕಿದೆ. ಕಳ್ಳರನ್ನು ಸೆದೆಬಡಿಯದಿದ್ದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಪೊಲೀಸರು ಈ ಬಗ್ಗೆ ಹದ್ದಿನ ಕಣ್ಣು ಇಡಬೇಕಿದೆ ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.
” ಎಚ್.ಡಿ.ಕೋಟೆ ಪಟ್ಟಣದಲ್ಲಿ ನಡೆಯುತ್ತಿರುವ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕಲು ಪೊಲೀಸರಿಗೆ ಕಟ್ಟಿನಿಟ್ಟಿನ ಸೂಚನೆ ನೀಡಲಾಗಿದೆ. ಸ್ಥಳೀಯರೇ ಅಥವಾ ಹೊರಗಿನಿಂದ ಬಂದ ಕಳ್ಳರೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಎಲ್ಲ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಎಎಸ್ಪಿ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ.”
-ವಿಷ್ಣುವರ್ಧನ್, ಪೊಲೀಸ್ ವರಿಷ್ಠಾಧಿಕಾರಿ
–ಮಂಜು ಕೋಟೆ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…