Andolana originals

ಅಕ್ರಮ ಚಟುವಟಿಕೆಗಳ ಕಡಿವಾಣಕ್ಕೆ ಆಗ್ರಹ

ಕೋಟೆಯ ವಿವಿಧೆಡೆ ಕಳವು ಪ್ರಕರಣ: ಪತ್ತೆಯಾಗದ ಆರೋಪಿಗಳ ಸುಳಿವು; ಜನರಲ್ಲಿ ಭೀತಿ 

ಎಚ್.ಡಿ.ಕೋಟೆ: ಪಟ್ಟಣದಲ್ಲಿ ನಡೆಯುತ್ತಿರುವ ಗಾಂಜಾ, ಇತರ ಮಾದಕ ವಸ್ತುಗಳ ಮಾರಾಟ ಹಾವಳಿಯಿಂದಾಗಿ ಯುವ ಸಮುದಾಯ ಬಲಿಯಾಗುತ್ತಿದೆ. ಎಗ್ಗಿಲ್ಲದೆ ನಡೆಯುತ್ತಿರುವ ಸರಣಿ ಕಳ್ಳತನ ಮತ್ತು ಅಕ್ರಮ ಚಟುವಟಿಕೆಗಳು ದಿನೇದಿನೇ ಹೆಚ್ಚಾಗುತ್ತಿರುವುದು ಜನಸಾಮಾನ್ಯರಲ್ಲಿ ಆತಂಕ ಉಂಟುಮಾಡಿದೆ.

ಕಳೆದೆರಡು ವರ್ಷಗಳಿಂದ ಪಟ್ಟಣ ವ್ಯಾಪ್ತಿಯಲ್ಲಿ ರಾತ್ರಿ, ಹಾಡಹಗಲಲ್ಲೇ ಕಳ್ಳತನ ನಡೆಯುತ್ತಿದ್ದು, ಮೂರು ತಿಂಗಳಿನಿಂದ ದೇವಸ್ಥಾನ ಮತ್ತು ಮನೆಗಳಲ್ಲಿ ಸರಣಿ ಕಳವು ನಿರಂತರವಾಗಿ ನಡೆಯುತ್ತಿದ್ದು ಖದೀಮರು ಲಕ್ಷಾಂತರ ರೂ. ಬೆಲೆಬಾಳುವ ಚಿನ್ನ -ಬೆಳ್ಳಿ ಆಭರಣಗಳು ಹಾಗೂ ನಗದನ್ನು ದೋಚಿದ್ದಾರೆ.

ಒಂದು ವಾರದಲ್ಲೇ ಪಟ್ಟಣದ ೧ನೇ ಮುಖ್ಯರಸ್ತೆಯ ವಾರಾಹಿ ಮಾರಮ್ಮ ದೇವಸ್ಥಾನ, ಪೇಪರ್ ಶೇಷಾದ್ರಿ, ವಿಶ್ವನಾಥ ಕಾಲೋನಿಯ ಗೋಬಿ ಕೃಷ್ಣ, ಸ್ಟೇಡಿಯಂ ಬಡಾವಣೆಯ ಎಎಸ್‌ಐ ಕೆ.ಕೆ.ಮಹದೇವ್ ಎಂಬವರ ಮನೆಗಳಲ್ಲಿ ೫೫ ಲಕ್ಷ ರೂ. ವೆಚ್ಚದ ಚಿನ್ನ, ಬೆಳ್ಳಿ ಆಭರಣ ಹಾಗೂ ನಗದನ್ನು ಕಳ್ಳರು ದೋಚಿರುವುದು ತಾಲ್ಲೂಕಿನ ಜನರನ್ನು ಬೆಚ್ಚಿಬೀಳಿಸಿದೆ.

ಇದನ್ನು ಓದಿ: ಮೈಸೂರಲ್ಲಿ ಸ್ಥಾಪನೆಯಾಗಲಿದೆ ನಿರಾಶ್ರಿತ ಮಾನಸಿಕ ಅಸ್ವಸ್ಥರ ಕೇಂದ್ರ 

ಪಟ್ಟಣ ಮತ್ತು ತಾಲ್ಲೂಕಿನಾದ್ಯಂತ ಎರಡು ವರ್ಷಗಳಿಂದ ನಡೆಯುತ್ತಿರುವ ಕಳ್ಳತನ ಪ್ರಕರಣಗಳ ಬಗ್ಗೆ ಪೊಲೀಸರು ಎಚ್ಚರಿಕೆ ವಹಿಸಿದರೂ ಕಳ್ಳರ ಸುಳಿವು, ಕಳವಾದ ವಸ್ತುಗಳು ಮಾಲೀಕರ ವಶವಾಗದಿರುವುದರಿಂದ ಪೊಲೀಸರ ಕಾರ್ಯವೈಖರಿ ಬಗ್ಗೆ ಜನತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಾಲ್ಲೂಕಿನಾದ್ಯಂತ ಅಲ್ಲಲ್ಲಿ ಕಳವು, ಅಕ್ರಮ ಚಟುವಟಿಕೆಗಳು, ದಂಧೆಗಳು ನಡೆಯುತ್ತಿದ್ದರೂ ಪೊಲೀಸ್ ಇಲಾಖೆಯವರು ಕಂಡರೂ ಕಾಣದಂತೆ ಇರುವುದರಿಂದಲೇ ದಿನದಿಂದ ದಿನಕ್ಕೆ ಸರಣಿ ಕಳ್ಳತನ ಹೆಚ್ಚಾಗಲು ಕಾರಣವಾಗಿದೆ ಎಂದು ಮಹಿಳೆಯರು ಮತ್ತು ಪ್ರಜ್ಞಾವಂತರು ಆರೋಪಿಸಿದ್ದಾರೆ. ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗುವ ಅನೇಕ ಯುವಕರು ಹಣಕಾಸು ಮುಗ್ಗಟ್ಟು ಎದುರಾದಾಗ ಮನೆಗಳವು ಮಾಡುತ್ತಾರೆ. ಬೀಗ ಹಾಕಿರುವ ಮನೆಗಳು, ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ಗುಂಪು ಕಳ್ಳತನ ನಡೆಸುತ್ತಿದ್ದಾರೆ.

ಪೊಲೀಸರು ಪಟ್ಟಣ ಮತ್ತು ತಾಲ್ಲೂಕಿನಾದ್ಯಂತ ಗಾಂಜಾ, ಅಕ್ರಮ ಮದ್ಯ ಮಾರಾಟ, ಜೂಜಾಟ, ಸರಣಿ ಕಳ್ಳತನಕ್ಕೆ ಕಡಿವಾಣ ಹಾಕುವ ಕೆಲಸಕ್ಕೆ ಮುಂದಾಗಬೇಕಿದೆ. ಕಳ್ಳರನ್ನು ಸೆದೆಬಡಿಯದಿದ್ದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಪೊಲೀಸರು ಈ ಬಗ್ಗೆ ಹದ್ದಿನ ಕಣ್ಣು ಇಡಬೇಕಿದೆ ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.

” ಎಚ್.ಡಿ.ಕೋಟೆ ಪಟ್ಟಣದಲ್ಲಿ ನಡೆಯುತ್ತಿರುವ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕಲು ಪೊಲೀಸರಿಗೆ ಕಟ್ಟಿನಿಟ್ಟಿನ ಸೂಚನೆ ನೀಡಲಾಗಿದೆ. ಸ್ಥಳೀಯರೇ ಅಥವಾ ಹೊರಗಿನಿಂದ ಬಂದ ಕಳ್ಳರೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಎಲ್ಲ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಎಎಸ್‌ಪಿ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ.”
-ವಿಷ್ಣುವರ್ಧನ್, ಪೊಲೀಸ್ ವರಿಷ್ಠಾಧಿಕಾರಿ

ಮಂಜು ಕೋಟೆ

ಆಂದೋಲನ ಡೆಸ್ಕ್

Recent Posts

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ | ರಾಮಮಂದಿರ ಅಕ್ರಮ ಮಂಕಾಗಿಸಿದ ಬಿಜೆಪಿ ಭವಿಷ್ಯ

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…

2 hours ago

ಭಾನುವಾರದ ಹಾಡುಪಾಡು | ಈಗ ಕೇರಳದಲ್ಲೂ ಫ್ರೀ ಬಸ್ ಪ್ರಿಯದರ್ಶಿನಿ

ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…

3 hours ago

ಭಾನುವಾರದ ಹಾಡುಪಾಡು | ಕೊಡಗು ಕಾಡಿನ ಆ ಕಾಲದ ಮಳೆಗಾಲ ವೈಭವ

ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…

3 hours ago

ಭಾನುವಾರದ ಹಾಡುಪಾಡು | ಹತ್ತನೆಯ ಸಾಹಿತ್ಯ ಸಂಭ್ರಮದ ಹೊತ್ತಲ್ಲಿ ಹದಿನಾರರ ಹರಯದ ಬುಕ್ ಕ್ಲಬ್ ಕುರಿತು

ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್‌ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…

4 hours ago

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

20 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

22 hours ago