Andolana originals

ಅಕ್ರಮ ಚಟುವಟಿಕೆಗಳ ಕಡಿವಾಣಕ್ಕೆ ಆಗ್ರಹ

ಕೋಟೆಯ ವಿವಿಧೆಡೆ ಕಳವು ಪ್ರಕರಣ: ಪತ್ತೆಯಾಗದ ಆರೋಪಿಗಳ ಸುಳಿವು; ಜನರಲ್ಲಿ ಭೀತಿ 

ಎಚ್.ಡಿ.ಕೋಟೆ: ಪಟ್ಟಣದಲ್ಲಿ ನಡೆಯುತ್ತಿರುವ ಗಾಂಜಾ, ಇತರ ಮಾದಕ ವಸ್ತುಗಳ ಮಾರಾಟ ಹಾವಳಿಯಿಂದಾಗಿ ಯುವ ಸಮುದಾಯ ಬಲಿಯಾಗುತ್ತಿದೆ. ಎಗ್ಗಿಲ್ಲದೆ ನಡೆಯುತ್ತಿರುವ ಸರಣಿ ಕಳ್ಳತನ ಮತ್ತು ಅಕ್ರಮ ಚಟುವಟಿಕೆಗಳು ದಿನೇದಿನೇ ಹೆಚ್ಚಾಗುತ್ತಿರುವುದು ಜನಸಾಮಾನ್ಯರಲ್ಲಿ ಆತಂಕ ಉಂಟುಮಾಡಿದೆ.

ಕಳೆದೆರಡು ವರ್ಷಗಳಿಂದ ಪಟ್ಟಣ ವ್ಯಾಪ್ತಿಯಲ್ಲಿ ರಾತ್ರಿ, ಹಾಡಹಗಲಲ್ಲೇ ಕಳ್ಳತನ ನಡೆಯುತ್ತಿದ್ದು, ಮೂರು ತಿಂಗಳಿನಿಂದ ದೇವಸ್ಥಾನ ಮತ್ತು ಮನೆಗಳಲ್ಲಿ ಸರಣಿ ಕಳವು ನಿರಂತರವಾಗಿ ನಡೆಯುತ್ತಿದ್ದು ಖದೀಮರು ಲಕ್ಷಾಂತರ ರೂ. ಬೆಲೆಬಾಳುವ ಚಿನ್ನ -ಬೆಳ್ಳಿ ಆಭರಣಗಳು ಹಾಗೂ ನಗದನ್ನು ದೋಚಿದ್ದಾರೆ.

ಒಂದು ವಾರದಲ್ಲೇ ಪಟ್ಟಣದ ೧ನೇ ಮುಖ್ಯರಸ್ತೆಯ ವಾರಾಹಿ ಮಾರಮ್ಮ ದೇವಸ್ಥಾನ, ಪೇಪರ್ ಶೇಷಾದ್ರಿ, ವಿಶ್ವನಾಥ ಕಾಲೋನಿಯ ಗೋಬಿ ಕೃಷ್ಣ, ಸ್ಟೇಡಿಯಂ ಬಡಾವಣೆಯ ಎಎಸ್‌ಐ ಕೆ.ಕೆ.ಮಹದೇವ್ ಎಂಬವರ ಮನೆಗಳಲ್ಲಿ ೫೫ ಲಕ್ಷ ರೂ. ವೆಚ್ಚದ ಚಿನ್ನ, ಬೆಳ್ಳಿ ಆಭರಣ ಹಾಗೂ ನಗದನ್ನು ಕಳ್ಳರು ದೋಚಿರುವುದು ತಾಲ್ಲೂಕಿನ ಜನರನ್ನು ಬೆಚ್ಚಿಬೀಳಿಸಿದೆ.

ಇದನ್ನು ಓದಿ: ಮೈಸೂರಲ್ಲಿ ಸ್ಥಾಪನೆಯಾಗಲಿದೆ ನಿರಾಶ್ರಿತ ಮಾನಸಿಕ ಅಸ್ವಸ್ಥರ ಕೇಂದ್ರ 

ಪಟ್ಟಣ ಮತ್ತು ತಾಲ್ಲೂಕಿನಾದ್ಯಂತ ಎರಡು ವರ್ಷಗಳಿಂದ ನಡೆಯುತ್ತಿರುವ ಕಳ್ಳತನ ಪ್ರಕರಣಗಳ ಬಗ್ಗೆ ಪೊಲೀಸರು ಎಚ್ಚರಿಕೆ ವಹಿಸಿದರೂ ಕಳ್ಳರ ಸುಳಿವು, ಕಳವಾದ ವಸ್ತುಗಳು ಮಾಲೀಕರ ವಶವಾಗದಿರುವುದರಿಂದ ಪೊಲೀಸರ ಕಾರ್ಯವೈಖರಿ ಬಗ್ಗೆ ಜನತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಾಲ್ಲೂಕಿನಾದ್ಯಂತ ಅಲ್ಲಲ್ಲಿ ಕಳವು, ಅಕ್ರಮ ಚಟುವಟಿಕೆಗಳು, ದಂಧೆಗಳು ನಡೆಯುತ್ತಿದ್ದರೂ ಪೊಲೀಸ್ ಇಲಾಖೆಯವರು ಕಂಡರೂ ಕಾಣದಂತೆ ಇರುವುದರಿಂದಲೇ ದಿನದಿಂದ ದಿನಕ್ಕೆ ಸರಣಿ ಕಳ್ಳತನ ಹೆಚ್ಚಾಗಲು ಕಾರಣವಾಗಿದೆ ಎಂದು ಮಹಿಳೆಯರು ಮತ್ತು ಪ್ರಜ್ಞಾವಂತರು ಆರೋಪಿಸಿದ್ದಾರೆ. ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗುವ ಅನೇಕ ಯುವಕರು ಹಣಕಾಸು ಮುಗ್ಗಟ್ಟು ಎದುರಾದಾಗ ಮನೆಗಳವು ಮಾಡುತ್ತಾರೆ. ಬೀಗ ಹಾಕಿರುವ ಮನೆಗಳು, ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ಗುಂಪು ಕಳ್ಳತನ ನಡೆಸುತ್ತಿದ್ದಾರೆ.

ಪೊಲೀಸರು ಪಟ್ಟಣ ಮತ್ತು ತಾಲ್ಲೂಕಿನಾದ್ಯಂತ ಗಾಂಜಾ, ಅಕ್ರಮ ಮದ್ಯ ಮಾರಾಟ, ಜೂಜಾಟ, ಸರಣಿ ಕಳ್ಳತನಕ್ಕೆ ಕಡಿವಾಣ ಹಾಕುವ ಕೆಲಸಕ್ಕೆ ಮುಂದಾಗಬೇಕಿದೆ. ಕಳ್ಳರನ್ನು ಸೆದೆಬಡಿಯದಿದ್ದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಪೊಲೀಸರು ಈ ಬಗ್ಗೆ ಹದ್ದಿನ ಕಣ್ಣು ಇಡಬೇಕಿದೆ ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.

” ಎಚ್.ಡಿ.ಕೋಟೆ ಪಟ್ಟಣದಲ್ಲಿ ನಡೆಯುತ್ತಿರುವ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕಲು ಪೊಲೀಸರಿಗೆ ಕಟ್ಟಿನಿಟ್ಟಿನ ಸೂಚನೆ ನೀಡಲಾಗಿದೆ. ಸ್ಥಳೀಯರೇ ಅಥವಾ ಹೊರಗಿನಿಂದ ಬಂದ ಕಳ್ಳರೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಎಲ್ಲ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಎಎಸ್‌ಪಿ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ.”
-ವಿಷ್ಣುವರ್ಧನ್, ಪೊಲೀಸ್ ವರಿಷ್ಠಾಧಿಕಾರಿ

ಮಂಜು ಕೋಟೆ

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

7 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

9 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

9 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

12 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

17 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

23 hours ago