Andolana originals

ಅಕ್ರಮ ಚಟುವಟಿಕೆಗಳ ಕಡಿವಾಣಕ್ಕೆ ಆಗ್ರಹ

ಕೋಟೆಯ ವಿವಿಧೆಡೆ ಕಳವು ಪ್ರಕರಣ: ಪತ್ತೆಯಾಗದ ಆರೋಪಿಗಳ ಸುಳಿವು; ಜನರಲ್ಲಿ ಭೀತಿ 

ಎಚ್.ಡಿ.ಕೋಟೆ: ಪಟ್ಟಣದಲ್ಲಿ ನಡೆಯುತ್ತಿರುವ ಗಾಂಜಾ, ಇತರ ಮಾದಕ ವಸ್ತುಗಳ ಮಾರಾಟ ಹಾವಳಿಯಿಂದಾಗಿ ಯುವ ಸಮುದಾಯ ಬಲಿಯಾಗುತ್ತಿದೆ. ಎಗ್ಗಿಲ್ಲದೆ ನಡೆಯುತ್ತಿರುವ ಸರಣಿ ಕಳ್ಳತನ ಮತ್ತು ಅಕ್ರಮ ಚಟುವಟಿಕೆಗಳು ದಿನೇದಿನೇ ಹೆಚ್ಚಾಗುತ್ತಿರುವುದು ಜನಸಾಮಾನ್ಯರಲ್ಲಿ ಆತಂಕ ಉಂಟುಮಾಡಿದೆ.

ಕಳೆದೆರಡು ವರ್ಷಗಳಿಂದ ಪಟ್ಟಣ ವ್ಯಾಪ್ತಿಯಲ್ಲಿ ರಾತ್ರಿ, ಹಾಡಹಗಲಲ್ಲೇ ಕಳ್ಳತನ ನಡೆಯುತ್ತಿದ್ದು, ಮೂರು ತಿಂಗಳಿನಿಂದ ದೇವಸ್ಥಾನ ಮತ್ತು ಮನೆಗಳಲ್ಲಿ ಸರಣಿ ಕಳವು ನಿರಂತರವಾಗಿ ನಡೆಯುತ್ತಿದ್ದು ಖದೀಮರು ಲಕ್ಷಾಂತರ ರೂ. ಬೆಲೆಬಾಳುವ ಚಿನ್ನ -ಬೆಳ್ಳಿ ಆಭರಣಗಳು ಹಾಗೂ ನಗದನ್ನು ದೋಚಿದ್ದಾರೆ.

ಒಂದು ವಾರದಲ್ಲೇ ಪಟ್ಟಣದ ೧ನೇ ಮುಖ್ಯರಸ್ತೆಯ ವಾರಾಹಿ ಮಾರಮ್ಮ ದೇವಸ್ಥಾನ, ಪೇಪರ್ ಶೇಷಾದ್ರಿ, ವಿಶ್ವನಾಥ ಕಾಲೋನಿಯ ಗೋಬಿ ಕೃಷ್ಣ, ಸ್ಟೇಡಿಯಂ ಬಡಾವಣೆಯ ಎಎಸ್‌ಐ ಕೆ.ಕೆ.ಮಹದೇವ್ ಎಂಬವರ ಮನೆಗಳಲ್ಲಿ ೫೫ ಲಕ್ಷ ರೂ. ವೆಚ್ಚದ ಚಿನ್ನ, ಬೆಳ್ಳಿ ಆಭರಣ ಹಾಗೂ ನಗದನ್ನು ಕಳ್ಳರು ದೋಚಿರುವುದು ತಾಲ್ಲೂಕಿನ ಜನರನ್ನು ಬೆಚ್ಚಿಬೀಳಿಸಿದೆ.

ಇದನ್ನು ಓದಿ: ಮೈಸೂರಲ್ಲಿ ಸ್ಥಾಪನೆಯಾಗಲಿದೆ ನಿರಾಶ್ರಿತ ಮಾನಸಿಕ ಅಸ್ವಸ್ಥರ ಕೇಂದ್ರ 

ಪಟ್ಟಣ ಮತ್ತು ತಾಲ್ಲೂಕಿನಾದ್ಯಂತ ಎರಡು ವರ್ಷಗಳಿಂದ ನಡೆಯುತ್ತಿರುವ ಕಳ್ಳತನ ಪ್ರಕರಣಗಳ ಬಗ್ಗೆ ಪೊಲೀಸರು ಎಚ್ಚರಿಕೆ ವಹಿಸಿದರೂ ಕಳ್ಳರ ಸುಳಿವು, ಕಳವಾದ ವಸ್ತುಗಳು ಮಾಲೀಕರ ವಶವಾಗದಿರುವುದರಿಂದ ಪೊಲೀಸರ ಕಾರ್ಯವೈಖರಿ ಬಗ್ಗೆ ಜನತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಾಲ್ಲೂಕಿನಾದ್ಯಂತ ಅಲ್ಲಲ್ಲಿ ಕಳವು, ಅಕ್ರಮ ಚಟುವಟಿಕೆಗಳು, ದಂಧೆಗಳು ನಡೆಯುತ್ತಿದ್ದರೂ ಪೊಲೀಸ್ ಇಲಾಖೆಯವರು ಕಂಡರೂ ಕಾಣದಂತೆ ಇರುವುದರಿಂದಲೇ ದಿನದಿಂದ ದಿನಕ್ಕೆ ಸರಣಿ ಕಳ್ಳತನ ಹೆಚ್ಚಾಗಲು ಕಾರಣವಾಗಿದೆ ಎಂದು ಮಹಿಳೆಯರು ಮತ್ತು ಪ್ರಜ್ಞಾವಂತರು ಆರೋಪಿಸಿದ್ದಾರೆ. ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗುವ ಅನೇಕ ಯುವಕರು ಹಣಕಾಸು ಮುಗ್ಗಟ್ಟು ಎದುರಾದಾಗ ಮನೆಗಳವು ಮಾಡುತ್ತಾರೆ. ಬೀಗ ಹಾಕಿರುವ ಮನೆಗಳು, ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ಗುಂಪು ಕಳ್ಳತನ ನಡೆಸುತ್ತಿದ್ದಾರೆ.

ಪೊಲೀಸರು ಪಟ್ಟಣ ಮತ್ತು ತಾಲ್ಲೂಕಿನಾದ್ಯಂತ ಗಾಂಜಾ, ಅಕ್ರಮ ಮದ್ಯ ಮಾರಾಟ, ಜೂಜಾಟ, ಸರಣಿ ಕಳ್ಳತನಕ್ಕೆ ಕಡಿವಾಣ ಹಾಕುವ ಕೆಲಸಕ್ಕೆ ಮುಂದಾಗಬೇಕಿದೆ. ಕಳ್ಳರನ್ನು ಸೆದೆಬಡಿಯದಿದ್ದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಪೊಲೀಸರು ಈ ಬಗ್ಗೆ ಹದ್ದಿನ ಕಣ್ಣು ಇಡಬೇಕಿದೆ ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.

” ಎಚ್.ಡಿ.ಕೋಟೆ ಪಟ್ಟಣದಲ್ಲಿ ನಡೆಯುತ್ತಿರುವ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕಲು ಪೊಲೀಸರಿಗೆ ಕಟ್ಟಿನಿಟ್ಟಿನ ಸೂಚನೆ ನೀಡಲಾಗಿದೆ. ಸ್ಥಳೀಯರೇ ಅಥವಾ ಹೊರಗಿನಿಂದ ಬಂದ ಕಳ್ಳರೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಎಲ್ಲ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಎಎಸ್‌ಪಿ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ.”
-ವಿಷ್ಣುವರ್ಧನ್, ಪೊಲೀಸ್ ವರಿಷ್ಠಾಧಿಕಾರಿ

ಮಂಜು ಕೋಟೆ

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

8 hours ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

9 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

9 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

9 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

9 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

10 hours ago