ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ
ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು ಕಾಯ್ದೆಯ ಅನ್ವಯ ವೈಯಕ್ತಿಕ ಅರಣ್ಯ ಭೂಮಿ ಹಕ್ಕು, ಸಾಮೂಹಿಕ ಅರಣ್ಯ ಹಕ್ಕು ಹಾಗೂ ಪರಂಪರೆಯ ಅರಣ್ಯ ನೆಲಸುಗಳ ಮೇಲಿನ ಹಕ್ಕುಗಳಿಗೆ ೨೦೧೦-೧೧ನೇ ಸಾಲಿನಲ್ಲಿ ಸಲ್ಲಿಸಿರುವ ಪ್ರಸ್ತಾವನೆಗಳನ್ನು ಪರಿಗಣಿಸಿ ತಾಲ್ಲೂಕಿನ ಎಲ್ಲ ೩೦ ಹಾಡಿಗಳಿಗೂ ಅರಣ್ಯ ಹಕ್ಕು ಪತ್ರಗಳನ್ನು ನೀಡಬೇಕೆಂದು ಆಗ್ರಹಿಸಿ ಅರಣ್ಯ ಪ್ರವೇಶ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ವೀರನಹೊಸಹಳ್ಳಿ, ಭಾರತವಾಡಿ ಹಾಗೂ ಕೆರೆ ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳು ವೀರನಹೊಸಹಳ್ಳಿ ವನ್ಯಜೀವಿ ವಲಯದ ಮಂಟಳ್ಳಿ ಕಾಡನ್ನು ಪ್ರವೇಶಿಸಿ ಆದಿವಾಸಿ ಪರಂಪರೆಯ ಬಸವೇಶ್ವರ ದೇವರ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ ಸರ್ಕಾರ ಅರಣ್ಯ ಹಕ್ಕುಗಳಿಗೆ ಹಕ್ಕುಪತ್ರ ನೀಡಬೇಕೆಂದು ದೇವರ ಸನ್ನಿಧಿಯಲ್ಲಿ ಸಭೆ ಸೇರಿ ಪೂಜೆ ಸಲ್ಲಿಸಿ ಮನವಿಗಳನ್ನು ಓದಿ ಸರ್ಕಾರಕ್ಕೆ ಸ್ಥಳೀಯ ಅರಣ್ಯ ಇಲಾಖೆಯ ಮೂಲಕ ಮುಖ್ಯಮಂತ್ರಿಗಳಿಗೆ ಹಾಗೂ ಜಿಲ್ಲಾ ಅರಣ್ಯಹಕ್ಕು ಸಮಿತಿ ಅಧ್ಯಕ್ಷರು, ಜಿಲ್ಲಾಧಿಕಾರಿಗಳಿಗೆ ೧೨ ವರ್ಷಗಳಿಂದ ಹಕ್ಕುಪತ್ರ ನೀಡದೆ ಅನ್ಯಾಯ ಮಾಡಿರುವುದನ್ನು ಸರಿಪಡಿಸಿ ಕೂಡಲೇ ಹಕ್ಕುಪತ್ರ ನೀಡಲು ಮನವಿ ಮಾಡಿದರು.
ಸಾಮೂಹಿಕ ಹಕ್ಕುಪತ್ರ ನೀಡುವ ಕಾಡಿಗೆ ಹಾಡಿ ಅರಣ್ಯ ಹಕ್ಕು ಸಮಿತಿಯ ನಾಮಫಲಕ ಅಳವಡಿಸಿ, ಪ್ರಾಣಿಗಳು ನೀರು ಕುಡಿಯಲು ಬೋರ್ ತೆಗೆಸಿ ಕಾಡೊಳಗಿನ ಖಾಲಿ ಕೆರೆಗಳಿಗೆ ನೀರು ತುಂಬಿಸಬೇಕು ಎಂದು ಒತ್ತಾಯಿಸಿದರು. ವೀರನಹೊಸಹಳ್ಳಿ ಅರಣ್ಯ ಹಕ್ಕು ಸಮಿತಿ ಕಾರ್ಯದರ್ಶಿ ಜಯಂತಿ ಮಾತನಾಡಿ, ತಮ್ಮ ಹಾಡಿಗೆ ಕೂಡಲೇ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿದರು.
ವೀರನಹೊಸಹಳ್ಳಿ ಯಜಮಾನ ಪುಟ್ಟಯ್ಯ, ಯುವಕ ಹರೀಶ್ ಪೂಜಾ ಕಾರ್ಯ ನೆರವೇರಿಸಿದರು. ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷ ಜಯಪ್ಪ ಮುಖ್ಯಮಂತ್ರಿಗಳಿಗೆ ಸಲ್ಲಿದ ಮನವಿ ಓದಿದರು. ವಿಠಲ್ ನಾಣಚ್ಚಿ ಆರಣ್ಯ ಹಕ್ಕಿನ ಕಾಯ್ದೆಯ ಮಾಹಿತಿ ನೀಡಿದರು. ಡಾ.ಎಸ್.ಶ್ರೀಕಾಂತ್ ಜಿಲ್ಲಾ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷರಿಗೆ ಸಾಮೂಹಿಕ ಹಾಗೂ ನೆಲಸುಗಳ ಮೇಲಿನ ಹಕ್ಕುಪತ್ರಕ್ಕೆ ಅಗ್ರಹಿಸಿ ಬರೆದಿರುವ ಮನವಿ ಓದಿದರು. ಹೆಮ್ಮಿಗೆ ಹರ್ಷ ಮಾತನಾಡಿ, ನಾಳೆ ತರಿಕಲ್ ಹಾಡಿ ಕಾಡಿಗೆ ಪ್ರವೇಶ ಮಾಡಿ ಅರಣ್ಯಪ್ರವೇಶ ಅಭಿಯಾನ ಮುಕ್ತಾಯಗೊಳಿಸಲಾಗುವುದು ಎಂದರು.
ಆದಿವಾಸಿ ಮುಖಂಡರ ತಂಡ ವಲಯ ಅರಣ್ಯ ಅಧಿಕಾರಿ ಕಚೇರಿಗೆ ತೆರಳಿ ಆರ್ಎಫ್ಒ ವಿನೋದಗೌಡರ ಪರವಾಗಿ ಹಾಜರಿದ್ದ ಸುನಿಲ್ ಅವರಿಗೆ ಮನವಿ ಸಲ್ಲಿಸಿ ಜಿಲ್ಲಾ ಆರಣ್ಯ ಹಕ್ಕು ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗೆ ಮತ್ತು ಮುಖ್ಯಮಂತ್ರಿಗಳಿಗೆ ಮನವಿಯನ್ನು ಸೂಕ್ತ ಕ್ರಮಕ್ಕಾಗಿ ಕಳುಹಿಸಿಕೊಡಲು ವಿನಂತಿಸಿತು
” ಮುಂದಿನ ವರ್ಷ ಕಾಡು ಪ್ರವೇಶಕ್ಕೂ ಮುನ್ನವೇ ಅರಣ್ಯ ಹಕ್ಕು ನೀಡಬೇಕು. ಇಲ್ಲವಾದರೆ ಸಂವಿಧಾನದ ಹೆಸರಲ್ಲಿ ಆಡಳಿತ ನಡೆಸುವ ಸರ್ಕಾರಕ್ಕೆ ಅವಮಾನವಾದೀತು.”
-ಭಾರತವಾಡಿ ಲಕ್ಷ್ಮಿ, ಮಹಿಳಾ ಸಂಘದ ಅಧ್ಯಕ್ಷರು
ಮೈಸೂರು ತಾಲ್ಲೂಕಿನ ನಾಗನಹಳ್ಳಿಯಿಂದ ಪ್ರತಿನಿತ್ಯ ಸಾರ್ವಜನಿಕರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಮೈಸೂರು ನಗರಕ್ಕೆ ತೆರಳುತ್ತಾರೆ. ಆದರೆ ನಾಗನಹಳ್ಳಿಯಿಂದ ಮೈಸೂರಿಗೆ…
ಮೈಸೂರಿನಲ್ಲಿ ಪಾರಂಪರಿಕತೆ ಹಾಗೂ ಆಧುನಿಕತೆಯನ್ನು ಸಮ್ಮಿಳಿಸಿಕೊಂಡು ನಿರ್ಮಿಸಲಾಗಿರುವ ತಾಲ್ಲೂಕು ಕಚೇರಿಯ ಕಟ್ಟಡದ ಆವರಣದಲ್ಲೇ ಕಸ ಸಂಗ್ರಹವಾಗಿದ್ದು, ಕೆಲಸ ಕಾರ್ಯಗಳಿಗಾಗಿ ಪ್ರತಿ…
ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಶಾಸಕ, ಹುಬ್ಬಳ್ಳಿಯ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ…
ಕಳೆದವಾರ, ಫೆಬ್ರವರಿ ೧೯, ಶಿವರಾಜಕುಮಾರ್ ಅಭಿನಯದ ‘ಆನಂದ್’ ಚಿತ್ರ ಸೆಟ್ಟೇರಿ ೪೦ ವರ್ಷ. ಅಭಿಮಾನಿಗಳು ಈ ನೆನಪಿನ ಸಂಭ್ರಮವನ್ನು ಆಚರಿಸಿದರು.…
ಮಾನವ-ವನ್ಯಜೀವಿ ಸಂಘರ್ಷ ತಾರಕಕ್ಕೇರಿದ ಹಿನ್ನೆಲೆಯಲ್ಲಿ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಳೆದ ನವೆಂಬರ್ ತಿಂಗಳಲ್ಲಿ ತಾತ್ಕಾಲಿಕವಾಗಿ…
ಪುನೀತ್ ಮಡಿಕೇರಿ ಒಟ್ಟು ೮ ಕೋಟಿ ರೂ. ಮೊತ್ತದ ಯೋಜನೆ; ಸಾರಿಗೆ ಸಮಸ್ಯೆಗಳಿಗೆ ಸಿಗಲಿದೆ ಪರಿಹಾರ ಮಡಿಕೇರಿ: ಕುಶಾಲನಗರದ ಬಹು…