Andolana originals

30 ಹಾಡಿಗಳಿಗೂ ಅರಣ್ಯ ಹಕ್ಕು ಪತ್ರಗಳನ್ನು ನೀಡಲು ಆಗ್ರಹ

ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ

ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು ಕಾಯ್ದೆಯ ಅನ್ವಯ ವೈಯಕ್ತಿಕ ಅರಣ್ಯ ಭೂಮಿ ಹಕ್ಕು, ಸಾಮೂಹಿಕ ಅರಣ್ಯ ಹಕ್ಕು ಹಾಗೂ ಪರಂಪರೆಯ ಅರಣ್ಯ ನೆಲಸುಗಳ ಮೇಲಿನ ಹಕ್ಕುಗಳಿಗೆ ೨೦೧೦-೧೧ನೇ ಸಾಲಿನಲ್ಲಿ ಸಲ್ಲಿಸಿರುವ ಪ್ರಸ್ತಾವನೆಗಳನ್ನು ಪರಿಗಣಿಸಿ ತಾಲ್ಲೂಕಿನ ಎಲ್ಲ ೩೦ ಹಾಡಿಗಳಿಗೂ ಅರಣ್ಯ ಹಕ್ಕು ಪತ್ರಗಳನ್ನು ನೀಡಬೇಕೆಂದು ಆಗ್ರಹಿಸಿ ಅರಣ್ಯ ಪ್ರವೇಶ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ವೀರನಹೊಸಹಳ್ಳಿ, ಭಾರತವಾಡಿ ಹಾಗೂ ಕೆರೆ ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳು ವೀರನಹೊಸಹಳ್ಳಿ ವನ್ಯಜೀವಿ ವಲಯದ ಮಂಟಳ್ಳಿ ಕಾಡನ್ನು ಪ್ರವೇಶಿಸಿ ಆದಿವಾಸಿ ಪರಂಪರೆಯ ಬಸವೇಶ್ವರ ದೇವರ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ ಸರ್ಕಾರ ಅರಣ್ಯ ಹಕ್ಕುಗಳಿಗೆ ಹಕ್ಕುಪತ್ರ ನೀಡಬೇಕೆಂದು ದೇವರ ಸನ್ನಿಧಿಯಲ್ಲಿ ಸಭೆ ಸೇರಿ ಪೂಜೆ ಸಲ್ಲಿಸಿ ಮನವಿಗಳನ್ನು ಓದಿ ಸರ್ಕಾರಕ್ಕೆ ಸ್ಥಳೀಯ ಅರಣ್ಯ ಇಲಾಖೆಯ ಮೂಲಕ ಮುಖ್ಯಮಂತ್ರಿಗಳಿಗೆ ಹಾಗೂ ಜಿಲ್ಲಾ ಅರಣ್ಯಹಕ್ಕು ಸಮಿತಿ ಅಧ್ಯಕ್ಷರು, ಜಿಲ್ಲಾಧಿಕಾರಿಗಳಿಗೆ ೧೨ ವರ್ಷಗಳಿಂದ ಹಕ್ಕುಪತ್ರ ನೀಡದೆ ಅನ್ಯಾಯ ಮಾಡಿರುವುದನ್ನು ಸರಿಪಡಿಸಿ ಕೂಡಲೇ ಹಕ್ಕುಪತ್ರ ನೀಡಲು ಮನವಿ ಮಾಡಿದರು.

ಸಾಮೂಹಿಕ ಹಕ್ಕುಪತ್ರ ನೀಡುವ ಕಾಡಿಗೆ ಹಾಡಿ ಅರಣ್ಯ ಹಕ್ಕು ಸಮಿತಿಯ ನಾಮಫಲಕ ಅಳವಡಿಸಿ, ಪ್ರಾಣಿಗಳು ನೀರು ಕುಡಿಯಲು ಬೋರ್ ತೆಗೆಸಿ ಕಾಡೊಳಗಿನ ಖಾಲಿ ಕೆರೆಗಳಿಗೆ ನೀರು ತುಂಬಿಸಬೇಕು ಎಂದು ಒತ್ತಾಯಿಸಿದರು. ವೀರನಹೊಸಹಳ್ಳಿ ಅರಣ್ಯ ಹಕ್ಕು ಸಮಿತಿ ಕಾರ್ಯದರ್ಶಿ ಜಯಂತಿ ಮಾತನಾಡಿ, ತಮ್ಮ ಹಾಡಿಗೆ ಕೂಡಲೇ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿದರು.

ವೀರನಹೊಸಹಳ್ಳಿ ಯಜಮಾನ ಪುಟ್ಟಯ್ಯ, ಯುವಕ ಹರೀಶ್ ಪೂಜಾ ಕಾರ್ಯ ನೆರವೇರಿಸಿದರು. ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷ ಜಯಪ್ಪ ಮುಖ್ಯಮಂತ್ರಿಗಳಿಗೆ ಸಲ್ಲಿದ ಮನವಿ ಓದಿದರು. ವಿಠಲ್ ನಾಣಚ್ಚಿ ಆರಣ್ಯ ಹಕ್ಕಿನ ಕಾಯ್ದೆಯ ಮಾಹಿತಿ ನೀಡಿದರು. ಡಾ.ಎಸ್.ಶ್ರೀಕಾಂತ್ ಜಿಲ್ಲಾ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷರಿಗೆ ಸಾಮೂಹಿಕ ಹಾಗೂ ನೆಲಸುಗಳ ಮೇಲಿನ ಹಕ್ಕುಪತ್ರಕ್ಕೆ ಅಗ್ರಹಿಸಿ ಬರೆದಿರುವ ಮನವಿ ಓದಿದರು. ಹೆಮ್ಮಿಗೆ ಹರ್ಷ ಮಾತನಾಡಿ, ನಾಳೆ ತರಿಕಲ್ ಹಾಡಿ ಕಾಡಿಗೆ ಪ್ರವೇಶ ಮಾಡಿ ಅರಣ್ಯಪ್ರವೇಶ ಅಭಿಯಾನ ಮುಕ್ತಾಯಗೊಳಿಸಲಾಗುವುದು ಎಂದರು.

ಆದಿವಾಸಿ ಮುಖಂಡರ ತಂಡ ವಲಯ ಅರಣ್ಯ ಅಧಿಕಾರಿ ಕಚೇರಿಗೆ ತೆರಳಿ ಆರ್‌ಎಫ್‌ಒ ವಿನೋದಗೌಡರ ಪರವಾಗಿ ಹಾಜರಿದ್ದ ಸುನಿಲ್ ಅವರಿಗೆ ಮನವಿ ಸಲ್ಲಿಸಿ ಜಿಲ್ಲಾ ಆರಣ್ಯ ಹಕ್ಕು ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗೆ ಮತ್ತು ಮುಖ್ಯಮಂತ್ರಿಗಳಿಗೆ ಮನವಿಯನ್ನು ಸೂಕ್ತ ಕ್ರಮಕ್ಕಾಗಿ ಕಳುಹಿಸಿಕೊಡಲು ವಿನಂತಿಸಿತು

” ಮುಂದಿನ ವರ್ಷ ಕಾಡು ಪ್ರವೇಶಕ್ಕೂ ಮುನ್ನವೇ ಅರಣ್ಯ ಹಕ್ಕು ನೀಡಬೇಕು. ಇಲ್ಲವಾದರೆ ಸಂವಿಧಾನದ ಹೆಸರಲ್ಲಿ ಆಡಳಿತ ನಡೆಸುವ ಸರ್ಕಾರಕ್ಕೆ ಅವಮಾನವಾದೀತು.”

-ಭಾರತವಾಡಿ ಲಕ್ಷ್ಮಿ, ಮಹಿಳಾ ಸಂಘದ ಅಧ್ಯಕ್ಷರು

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

8 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

8 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

9 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

9 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

9 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

10 hours ago