Andolana originals

ಆಹಾರ ಮೇಳ: ಮಳಿಗೆಗಳ ಬಾಡಿಗೆ ಕಡಿತಕ್ಕೆ ಆಗ್ರಹ

ಮೈಸೂರು: ಪ್ರಸಕ್ತ ಸಾಲಿನ ದಸರಾ ಮಹೋತ್ಸವದಲ್ಲಿ ಆಹಾರ ಮೇಳದ ಮಳಿಗೆಗಳ ಬಾಡಿಗೆ ದರ ಕಡಿಮೆ ಮಾಡುವಂತೆ ಮೈಸೂರು ದಸರಾ ಆಹಾರ ಮೇಳದ ತಿಂಡಿ-ತಿನಿಸುಗಳ ಮಾರಾಟಗಾರರ ಸಂಘ, ಮುಖ್ಯಮಂತ್ರಿಗಳು ಹಾಗೂ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ.

ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ನಾಗರಾಜು ಎಸ್. ಸಿದ್ದರಾಮನಹುಂಡಿ ಅವರು, ಕಳೆದ ಬಾರಿ ರಾಜ್ಯದಲ್ಲಿ ಬರ ವಿದ್ದ ಹಿನ್ನೆಲೆಯಲ್ಲಿ ಆಹಾರ ಮಳಿಗೆಗಳ ಬಾಡಿಗೆಯನ್ನು ಸಸ್ಯಾಹಾರಿ ವಿಭಾಗದಲ್ಲಿ ೫೯,೦೦೦ ರೂ. , ಮಾಂಸಾಹಾರಿ ವಿಭಾಗದ ಮಳಿಗೆಗೆ ೮೮,೫೦೦ ರೂ. ಜೊತೆಗೆ ಜಿಎಸ್‌ಟಿಯನ್ನು ನಿಗದಿಪಡಿಸಲಾಗಿತ್ತು. ಈ ಪರಿಣಾಮ ವ್ಯಾಪಾರ ಸ್ಥರು ನಷ್ಟ ಅನುಭವಿಸಬೇಕಾಯಿತು. ಹಾಗಾಗಿ ಈ ಬಾರಿ ಸಸ್ಯಾಹಾರಕ್ಕೆ ೨೫,೦೦೦ ರೂ. , ಮಾಂಸಾಹಾರಕ್ಕೆ ೩೦,೦೦೦ ರೂ. ಗಳನ್ನು ಜಿಎಸ್‌ಟಿ ರಹಿತವಾಗಿ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು.

೪೦ ಕೋಟಿ ರೂ. ವೆಚ್ಚದಲ್ಲಿ ಅದ್ಧೂರಿ ದಸರಾ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರವು, ಅತ್ಯಂತ ಹೆಚ್ಚು ಜನರನ್ನು ಆಕರ್ಷಿಸುವ ಆಹಾರ ಮೇಳದಲ್ಲಿ ಸಸ್ಯಾ ಹಾರಕ್ಕೆ ೨೫,೦೦೦ ರೂ. , ಮಾಂಸಾ ಹಾರಕ್ಕೆ ೩೦,೦೦೦ ರೂ. ಗಳನ್ನು ಜಿಎಸ್‌ಟಿ ರಹಿತವಾಗಿ ಮಳಿಗೆಗಳಿಗೆ ನಿಗದಿಪಡಿಸುವ ಮೂಲಕ ವ್ಯಾಪಾರ ಸ್ಥರಿಗೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಈ ಬಾರಿ ೧೭೫ ಮಳಿಗೆಗಳನ್ನು ಒಂದೇ ಕಡೆ ನೀಡಲು ಜಿಲ್ಲಾಡಳಿತ ತೀರ್ಮಾನಿಸಿದೆ. ಆದರೆ, ಪಾರ್ಕಿಂಗ್ ಸಮಸ್ಯೆಗಳು ಉದ್ಭವವಾಗಲಿದೆ. ಆದ್ದರಿಂದ ಈ ಬಾರಿ ಜಂಬೋ ಸರ್ಕಸ್ ನಡೆಯದಿರುವುದರಿಂದ ಆಹಾರ ಮೇಳವನ್ನು ಸ್ಕೌಟ್ಸ್ ಅಂಡ್ ಗೈಡ್ಸ್ ಮೈದಾನದಲ್ಲಿ ೧೨೫ ಮಳಿಗೆಗಳು ಮತ್ತು ಇಟ್ಟಿಗೆಗೂಡಿನ ಕಾರಂಜಿ ಕೆರೆ ಪಕ್ಕದ ಮೈದಾನದಲ್ಲಿ ೫೦ ಮಳಿಗೆಗಳನ್ನು ನಿರ್ಮಿಸಿ ವ್ಯಾಪಾರಿಗಳು ಮತ್ತು ಪ್ರವಾಸಿಗರಿಗೆ ಅನುಕೂಲ ಮಾಡಿ ಕೊಂಡಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಪ್ರದಾನ ಕಾರ್ಯದರ್ಶಿ ಕಂಸಾಳೆ ರವಿ, ಉಪಾಧ್ಯಕ್ಷೆ ಶಾಂತಮ್ಮ, ಶಿವಸಿದ್ದು, ಬೀರೇಶ್, ಸಂತೋಷ್ ಮತ್ತಿತರರು ಹಾಜರಿದ್ದರು.

ಇಟ್ಟಿಗೆಗೂಡಿನ ಕಾರಂಜಿ ಕೆರೆ ಪಕ್ಕದ ಮೈದಾನವು ಅರಮನೆಯ ಸುಪರ್ದಿಯಲ್ಲಿ ಇರುವುದರಿಂದ ಇದನ್ನು ಆಹಾರ ಮೇಳಕ್ಕೆ ಬಳಸಿಕೊಳ್ಳಲು ಅನುಮತಿ ನೀಡುವಂತೆ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಮತ್ತು ಸಂಸದ ಯದುವೀರ್ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳುತ್ತೇವೆ. -ನಾಗರಾಜು ಎಸ್. ಸಿದ್ದರಾಮನಹುಂಡಿ

* ಈ ಬಾರಿಯ ದಸರಾ ಮಹೋತ್ಸವ ಅಧಿಕಾರಿಗಳ ದಸರಾ ಆಗಬಾರದು.

* ದಸರಾ ಉಪ ಸಮಿತಿಗಳನ್ನು ಮುಂಚಿತವಾಗಿ ನೇಮಕ ಮಾಡಬೇಕು.

* ಅಧಿಕಾರಿಗಳು ಸಭೆ ನಡೆಸುವಾಗ ಸಂಘದವರಿಗೆ ಆಹ್ವಾನ ನೀಡಿ ಮುಕ್ತವಾಗಿ ಚರ್ಚಿಸಬೇಕು.

* ಆಹಾರ ಮೇಳದಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಬೇಕು.

* ಹೊರ ಜಿಲ್ಲೆ, ರಾಜ್ಯಗಳ ವ್ಯಾಪಾರಸ್ಥರಿಗೂ ಅವಕಾಶ ನೀಡಬೇಕು.

 

andolana

Recent Posts

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

2 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

2 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

2 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

4 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

5 hours ago

ಸಾಲಬಾಧೆ; ರೈತ ಆತ್ಮಹತ್ಯೆ

ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…

6 hours ago