Andolana originals

ರಾಜೀವ್‌ನಗರದಲ್ಲಿ ಡೆಂಗ್ಯು ಪಾರ್ಕ್!

 ಸ್ಥಳೀಯರಿಗೆ ಭೀತಿ: ಪಾಲಿಕೆಯದು ನಿರ್ಲಕ್ಷ್ಯ ನೀತಿ
ನೂರಾರು ಗುಂಡಿಗಳಲ್ಲಿ ನೀರು ನಿಂತು ಸೊಳ್ಳೆ ಉತ್ಪಾದನೆ

ಮೈಸೂರು: ಎರಡು ವರ್ಷಗಳ ಹಿಂದೆ ಉದ್ಯಾನವೊಂದರಲ್ಲಿ ಗಿಡ ನೆಡುವ ಉದ್ದೇಶದಿಂದ ತೋಡಿದ್ದ ಗುಂಡಿಗಳಲ್ಲಿ ಮಳೆ ನೀರು ಸಂಗ್ರಹವಾಗಿ ಸೊಳ್ಳೆಗಳು ಉತ್ಪತ್ತಿಯಾಗಿ ಸುತ್ತಲಿನವರಿಗೆ ಬಾಧೆಯುಂಟು ಮಾಡುತ್ತಿವೆ. ಸೊಳ್ಳೆ ಕಾಟದಿಂದ ಹೈರಾಣಾದ ಸ್ಥಳೀಯರು ಉದ್ಯಾನಕ್ಕೆ ‘ಡೆಂಗು’ ಪಾರ್ಕ್‌’ ಎಂದು ನಾಮಕರಣ ಮಾಡಿ ತಮ್ಮ ಸಂಕಷ್ಟಕ್ಕೆ ಹಾಸ್ಯ ರೂಪ ಕೊಟ್ಟಿದ್ದಾರೆ.

ನಗರದ ರಾಜೀವ್‌ನಗರ ಬಡಾವಣೆಯ 11ನೇ ಅಡ್ಡ ರಸ್ತೆಯಲ್ಲಿರುವ ಉದ್ಯಾನದಲ್ಲಿ ಪಾಲಿಕೆ ಸದಸ್ಯರು ಗಿಡ ನೆಡುವುದಾಗಿ ಹೇಳಿ ಸುಮಾರು 200 ಗುಂಡಿಗಳನ್ನು ತೋಡಿಸಿದ್ದರು. ಹತ್ತಾರು ಗಿಡ ನೆಟ್ಟರು ನಿರ್ವಹಣೆ ಮಾಡದೆ, ಉಳಿದ ಗುಂಡಿಗಳನ್ನೂ ಮುಚ್ಚದ ಕಾರಣ, ಅದೇ ಗುಂಡಿಗಳಲ್ಲಿ ಸೊಳ್ಳೆಗಳ ಸಂತತಿ ಹೆಚ್ಚಾಗಿದೆ. ಸುತ್ತಲಿನ ನಿವಾಸಿಗಳು ತಮಗೆ ವಿಪರೀತ ಸೊಳ್ಳೆಗಳ ಕಾಟ ಇದೆ ಗುಂಡಿ ಮುಚ್ಚಿ ಪಾರ್ಕ್ ಸ್ವಚ್ಛ ಮಾಡುವಂತೆ ಪಾಲಿಕೆ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಏನೂ ಪ್ರಯೋಜನ ಆಗಲಿಲ್ಲ.

ಇತ್ತೀಚೆಗೆ ಡೆಂಗ್ಯು ಕಾಯಿಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ಜನರು ಭಯ ಭೀತರಾಗಿದ್ದಾರೆ. ಅವರುಗಳ ಮನವಿಯನ್ನು ಯಾರೂ ಕೇಳದ ಕಾರಣ ಆತಂಕಗೊಂಡಿದ್ದಾರೆ. ವಯಸ್ಸಾದವರು ಸಣ್ಣ ಮಕ್ಕಳ ಆರೋಗ್ಯ ಕಾಪಾಡುವುದು ದೊಡ್ಡ ಸವಾಲಾಗಿದೆ.

ತಮ್ಮ ಸಂಕಟಕ್ಕೆ ಸ್ಪಂದಿಸದ ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ನಿತ್ಯವೂ ಹಿಡಿಶಾಪ ಹಾಕುತ್ತಿದ್ದಾರೆ. ಉದ್ಯಾನದ ಸಮೀಪ ವಾಸವಾಗಿದ್ದ ನಿವಾಸಿಯೊಬ್ಬರು ಜ್ವರ ಬಂದ ಕಾರಣದಿಂದಲೇ ಮೃತಪಟ್ಟಿದ್ದರಿಂದ ಸ್ಥಳೀಯರು ಭಯಗೊಂಡಿದ್ದಾರೆ. ಸೊಳ್ಳೆಗಳ ಕಾಟದಿಂದ ಸುತ್ತಲಿನ ಜನರು ಹಿಂಸೆ ಅನುಭವಿಸುತ್ತಿದ್ದಾರೆ.


ಸೊಳ್ಳೆಗಳಿಂದ ಸಂಭವಿಸುವ ಎಲ್ಲ ರೀತಿಯ ದೈಹಿಕ ಅನಾರೋಗ್ಯ ಭೀತಿಯಿಂದ ಜೀವ ಹಿಡಿದುಕೊಂಡು ಬದುಕುತ್ತಿರುವ ಜನರು ಪಾಲಿಕೆ ಅಧಿಕಾರಿಗಳಿಗೆ ಬಗೆಬಗೆಯಾಗಿ ಕೇಳಿಕೊಂಡರೂ ಸಮಸ್ಯೆ ಬಗೆ ಹರಿಸಿಲ್ಲ ಎಂದು ಆರೋಪಿಸಿದ್ದಾರೆ.

ಪಾರ್ಕ್‌ನಲ್ಲಿ ಗುಂಡಿಗಳಿರುವುದ ರಿಂದ ಸೊಳ್ಳೆಗಳು ಹೆಚ್ಚಾಗಿದೆ. ಈ ಬಗ್ಗೆ ಒಂದು ವರ್ಷದ ಹಿಂದೆಯೇ ಪಾಲಿಕೆಗೆ ದೂರು ನೀಡಿದ್ದೇವೆ. ಆದರೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಇತ್ತೀಚೆಗೆ ಡೆಂಗ್ಯು ಪ್ರಕರಣಗಳು ನಗರದಲ್ಲಿ ಹೆಚ್ಚಾಗುತ್ತಿದೆ. ಜನರಿಗೆಲ್ಲ ತುಂಬಾ ಗಾಬರಿಯಾಗಿದೆ. ಡೆಂಗ್ಯು ನಿರ್ಮೂಲನೆ ಬಗ್ಗೆ ಯಾರೂ ತಲೆ ಕೆಡಿಸಿಕೊಳ್ಳುತ್ತಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದ ನಮಗೆ ಆತಂಕವಾಗಿದೆ.
ರಫಿ ಅಹಮದ್‌

ಹಿಂದೆ ಇದ್ದ ಪಾಲಿಕೆ ಸದಸ್ಯರು ಗಿಡ ನೆಟ್ಟು ಕಾಡು ಬೆಳೆಸುತ್ತೇನೆ 200ಕ್ಕೂ ಎಂದು ಹೇಳಿ ಸುಮಾರು ಹೆಚ್ಚು ಗುಂಡಿಗಳನ್ನು ತೋಡಿಸಿ ಐದಾರು ಗಿಡ ನೆಟ್ಟಿದ್ದರು. ಸೂಕ್ತ ನಿರ್ವಹಣೆ ಇಲ್ಲದೆ ಒಂದು ಗಿಡವೂ ಬೆಳೆಯಲಿಲ್ಲ. ಬಿಡಾಡಿ ಹಸುಗಳು ಇಲ್ಲೇ ಇರುತ್ತವೆ. ಜನರೂ ಕೂಡ ಇಲ್ಲೇ ಮೂತ್ರ ವಿಸರ್ಜನೆ ಮಾಡುತ್ತಾರೆ. ಈ ಗುಂಡಿಗಳಲ್ಲಿ ನೀರು ತುಂಬಿಕೊಂಡು ಸೊಳ್ಳೆಗಳು ಉತ್ಪತ್ತಿ ಆಗುತ್ತಿದೆ. ಅನೇಕ ಬಾರಿ ಅಧಿಕಾರಿಗಳಿಗೆ ಮನವಿ ಪತ್ರ ನೀಡಿದ್ದರೂ ಏನೂ ಪ್ರಯೋಜನ ಆಗಿಲ್ಲ.

ಬಾಲಕೃಷ್ಣ, ಸ್ಥಳೀಯರು

ಆಲ್‌ಫ್ರೆಡ್‌ ಸಾಲೋಮನ್

ಮೂಲತಃ ಮೈಸೂರಿನವನಾದ ನಾನು ಮಹಾರಾಜ ಕಾಲೇಜಿನಲ್ಲಿ ಪದವಿ ಮುಗಿಸಿ, ಮಾನಸ ಗಂಗೋತ್ರಿಯಲ್ಲಿ ಪತ್ರಿಕೋದ್ಯಮ ಮತ್ತು ಸಾಮೂಹಿಕ ಸಂವಹನ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಬೆಂಗಳೂರಿನ ಅಭಿಮಾನ ಪ್ರಕಾಶನದ ಅಭಿಮಾನಿ, ಅರಗಿಣಿ, ಪತ್ರಿಕೆ ಮೂಲಕ 1988ರಲ್ಲಿ ಪತ್ರಕರ್ತನಾಗಿ ವೃತ್ತಿ ಆರಂಭಿಸಿ, ರೂಪತಾರ, ಉದಯವಾಣಿ, ಗೃಹಶೋಭ, ಉಷಾಕಿರಣ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿರುತ್ತೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇನೆ.

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

4 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

5 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

6 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

6 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

8 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

10 hours ago