ವಿಶ್ವ ವಿಖ್ಯಾತ ಮೈಸೂರು ದಸರಾ ಆರಂಭವಾಗುತ್ತಿದ್ದಂತೆಯೇ ಜಿಲ್ಲಾಡಳಿತ ಜಂಬೂ ಸವಾರಿ ಸಾಗುವ ರಸ್ತೆಗಳನ್ನು ಡಾಂಬರೀಕರಣ ಮಾಡುತ್ತದೆ. ದಸರಾ ಮಹೋತ್ಸವವನ್ನು ಕಣ್ಣುಂಬಿಕೊಳ್ಳಲು ದೇಶ ವಿದೇಶಗಳಿಂದ ಪ್ರವಾಸಿಗರು ಮೈಸೂರಿಗೆ ಬಂದು ತಿಂಗಳುಗಟ್ಟಲೆ ವಾಸ್ತವ್ಯ ಹೂಡುತ್ತಾರೆ. ದಸರಾಗೂ ಮುನ್ನ ಸುತ್ತಲಿನ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುತ್ತಾರೆ. ಈ ಎಲ್ಲ ಪ್ರದೇಶಗಳನ್ನು ಅಭಿವೃದ್ಧಿ ಮಾಡಬೇಕಾದದ್ದು ಜಿಲ್ಲಾಡಳಿತದ ಕರ್ತವ್ಯ. ಆದರೆ ದಸರಾ ಜಂಜೂ ಸವಾರಿ ಸಾಗುವ ಮಾರ್ಗದ ಹೊರತಾಗಿ ಉಳಿದ ಬಡಾವಣೆಗಳ ರಸ್ತೆಗಳೂ ಹಳ್ಳಕೊಳ್ಳದಿಂದ ಕೂಡಿದ್ದರೂ, ಅಲ್ಲಿ ಬೃಹದಾಕಾರದ ಗುಂಡಿಗಳು ನಿರ್ಮಾಣವಾಗಿ ಮಳೆನೀರು ತುಂಬಿಕೊಂಡು ದುರ್ವಾಸನೆ ಬೀರುತ್ತಿದ್ದರೂ ಅದನ್ನು ಅಭಿವೃದ್ಧಿಪಡಿಸುವ ಗೋಜಿಗೇ ಹೋಗುವುದಿಲ್ಲ. ಅಲ್ಲದೆ ನಗರದ ಅನೇಕ ಉದ್ಯಾನವನಗಳಲ್ಲಿ ಕಸದ ರಾಶಿಯೇ ಸಂಗ್ರಹವಾಗಿದ್ದು, ಅನೈರ್ಮಲ್ಯದ ವಾತಾವರಣ ಉಂಟಾಗಿದೆ. ಆದ್ದರಿಂದ ಸಂಬಂಧಪಟ್ಟವರು ದಸರಾ ಕಾರ್ಯಕ್ರಮಗಳು ನಡೆಯುವ ಸ್ಥಳಗಳನ್ನು ಮಾತ್ರ ಅಭಿವೃದ್ಧಿಪಡಿಸದೆ ಇನ್ನಿತರ ಕಡೆಗಳಲ್ಲಿಯೂ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಬೇಕಿದೆ.
-ನಾಗೇಶ್, ಮಾನಸಗಂಗೋತಿ ಮೈಸೂರು.
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…