Andolana originals

ಹೊಸ ವರ್ಷಕ್ಕೆ ಮ.ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ಬರುತ್ತಿರುವ ಭಕ್ತರು

ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದಿಂದ ಸಿದ್ಧತೆ 

ಮಹಾದೇಶ್‌ ಎಂ ಗೌಡ

ಹನೂರು: ಹೊಸ ವರ್ಷದ ಪ್ರಯುಕ್ತ ಮಲೆಮಹದೇಶ್ವರ ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಲಿರುವ ಹಿನ್ನೆಲೆಯಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

೪ ದಿನಗಳಿಂದ ಸಾವಿರಾರು ಮಂದಿ ಹನೂರು ಮಾರ್ಗವಾಗಿ ಕಾಲ್ನಡಿಗೆಯ (ಪಾದಯಾತ್ರೆ) ಮೂಲಕ ತೆರಳುತ್ತಿದ್ದಾರೆ. ಹೊಸ ವರ್ಷದ ದಿನದಂದು ಮಾದಪ್ಪನ ದೇಗುಲದಲ್ಲಿ ಪೂಜೆ ನೆರವೇರಿಸಲು ಪ್ರತಿ ವರ್ಷ ಮಹದೇಶ್ವರ ಬೆಟ್ಟಕ್ಕೆ ಜನರು ಭೇಟಿ ನೀಡುತ್ತಾರೆ.

ರಾಜ್ಯದ ವಿವಿಧೆಡೆಯಿಂದ ಸಾವಿರಾರು ಜನರು ಪ್ರತಿವರ್ಷವೂ ಮಹಾಶಿವರಾತ್ರಿ, ಯುಗಾದಿ, ಮಹಾಲಯ, ದೀಪಾವಳಿ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಕಾಲ್ನಡಿಗೆಯ ಮೂಲಕ ಮಾದಪ್ಪನ ಬೆಟ್ಟಕ್ಕೆ ತೆರಳುವುದು ವಾಡಿಕೆ. ಈ ಬಾರಿ ಹರಕೆ ಹೊತ್ತ ಸಾವಿರಾರು ಜನರು ೪ ದಿನಗಳಿಂದ ಹಗಲು-ರಾತ್ರಿ, ಚಳಿ, ಬಿಸಿಲೆನ್ನದೆ ತೆರಳು ತ್ತಿದ್ದಾರೆ. ಜನರು ಸರದಿಯ ರೂಪದಲ್ಲಿ ಹಣವನ್ನು ಸಂಗ್ರಹಿಸಿ, ಮಾರ್ಗಮಧ್ಯದ ಮರದ ನೆರಳಿನಲ್ಲಿ ಅಲ್ಲಲ್ಲಿ ವಿಶ್ರಾಂತಿಯನ್ನು ಪಡೆಯುತ್ತಾ, ಅಡುಗೆ ತಯಾರಿಸಿ ಒಟ್ಟಿಗೆ ಸೇರಿ ಸಹಭೋಜನವನ್ನು ಸವಿದು ಸಂಚರಿಸುತ್ತಿರುವುದು ಹನೂರು ಭಾಗದಲ್ಲಿ ಕಂಡುಬರುತ್ತಿದೆ.

ಮ.ಬೆಟ್ಟಕ್ಕೆ ಚನ್ನಪಟ್ಟಣ, ರಾಮನಗರ, ಮಂಡ್ಯ, ಕೆ.ಎಂ.ದೊಡ್ಡಿ, ಮಳವಳ್ಳಿ ಸೇರಿದಂತೆ ಈ ಭಾಗದ ವಿವಿಧ ಗ್ರಾಮಗಳಿಂದ ೪ ಸಾವಿರಾರು ಜನರು ಕಾಲ್ನಡಿಗೆಯ ಮೂಲಕ ಮ.ಬೆಟ್ಟಕ್ಕೆ ಹನೂರು ಮಾರ್ಗವಾಗಿ ಪ್ರಯಾಣ ಬೆಳೆಸಿದ್ದಾರೆ.

ಪ್ರಾಧಿಕಾರದ ವತಿಯಿಂದ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ, ದಾಸೋಹ ಸೇರಿದಂತೆ ಮೂಲ ಸೌಕರ್ಯ ಒದಗಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮುನ್ನೆಚ್ಚರಿಕೆಯಾಗಿ ಮ.ಬೆಟ್ಟದ ಪೊಲೀಸರು ಸೂಕ್ತ ಬಂದೋಬಸ್ತ್ ಕಲ್ಪಿಸಿದ್ದಾರೆ. ಇದೇ ವೇಳೆ ಅನೇಕರು ಚಿನ್ನದ ರಥೋತ್ಸವದಲ್ಲಿ ಭಾಗಿಯಾಗಿ ತಮ್ಮ ಹರಕೆ ಕಾಣಿಕೆಗಳನ್ನು ಸಮರ್ಪಿಸಿದರು.

ಪಾದಯಾತ್ರೆಯಲ್ಲಿ ಮಹಿಳೆಯರೇ ಹೆಚ್ಚು:  ಪಾದಯಾತ್ರೆಯಲ್ಲಿ ಮಾದಪ್ಪನ ದೇವರಗುಡ್ಡರು ಕಂಸಾಳೆ ನುಡಿಸುತ್ತಾ ಮಾದಪ್ಪನ ಮಹಿಮೆಯ ಹಾಡುಗಳನ್ನು ಹಾಡುತ್ತಾ ಭಕ್ತಿಭಾವದಿಂದ ತೆರಳುತ್ತಿದ್ದರೆ, ಯುವಕರು ತಮಟೆ ಬಾರಿಸುತ್ತಾ ಅಲ್ಲಲ್ಲಿ ಕುಣಿದು ಕುಪ್ಪಳಿಸುತ್ತಾ ತೆರಳುತ್ತಿದ್ದಾರೆ. ಈ ಬಾರಿ ಮಹಿಳಾ ಸಂಘಗಳ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಕಾಲ್ನಡಿಗೆಯ ಮೂಲಕ ತೆರಳುತ್ತಿರುವುದು ವಿಶೇಷ.

ಆಂದೋಲನ ಡೆಸ್ಕ್

Recent Posts

ಕೋಗಿಲು ಲೇಔಟ್‌ನಲ್ಲಿ ಮನೆ ಕಳೆದುಕೊಂಡವರಿಗೆ ಪರಿಹಾರ: ಸಚಿವ ಪರಮೇಶ್ವರ್‌

ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್‌ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಮನೆ ಕೊಡುವ ಕುರಿತು ಗೃಹ ಸಚಿವ…

42 mins ago

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಬೇಗಂ ಖಲೀದಾ ಜಿಯಾ ನಿಧನ

ಡಾಕಾ: ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಇಂದು ಬೆಳಿಗ್ಗೆ ಡಾಕಾದ ಎವರ್‌ಕೇರ್‌…

1 hour ago

ಮೈಸೂರಿನಲ್ಲಿ ವೈಕುಂಠ ಏಕಾದಶಿ ಸಂಭ್ರಮ: ದೇಗುಲಗಳಲ್ಲಿ ಭಕ್ತಸಾಗರ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವೈಕುಂಠ ಏಕಾದಶಿಯನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ಶ್ರೀ ಲಕ್ಷ್ಮೀವೆಂಟಕರಮಣಸ್ವಾಮಿ ದೇವಾಲಯವು ಇಂದು…

1 hour ago

ಹೊಸ ವರ್ಷಾಚರಣೆ: ರಾಜ್ಯದೆಲ್ಲೆಡೆ ತುರ್ತು ಚಿಕಿತ್ಸಾ ಸೇವೆಗೆ ಸಿದ್ಧತೆ

ಬೆಂಗಳೂರು: ಹೊಸ ವರ್ಷಾಚರಣೆಯ ವೇಳೆ ರಾಜ್ಯದ ವಿವಿಧೆಡೆ ಸಾರ್ವಜನಿಕರು ಅಸ್ವಸ್ಥರಾಗುವ ಹಾಗೂ ಆರೋಗ್ಯಕ್ಕೆ ಸಂಬಂಧಿಸಿದ ಇತರೆ ಸಮಸ್ಯೆಗಳಿಗೆ ಸಿಲುಕುವ ಸಾಧ್ಯತೆ…

2 hours ago

ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಯತ್ನ: ವಿಜಯೇಂದ್ರ ವಾಗ್ದಾಳಿ

ಬೆಳಗಾವಿ: ನಿಯಮಗಳನ್ನು ಗಾಳಿಗೆ ತೂರಿ ಕೇರಳದ ಅಕ್ರಮ ವಲಸಿಗರಿಗೆ ಮನೆ ಕಲ್ಪಿಸಿಕೊಡುವ ಮೂಲಕ ಸಿಎಂ ಸಿದ್ದರಾಮಯ್ಯ ಸಿಎಂ ಕುರ್ಚಿ ಉಳಿಸಿಕೊಳ್ಳಲು…

2 hours ago

ಬಂಡೀಪುರದಲ್ಲಿ ಹೊಸ ವರ್ಷಾಚರಣೆಗೆ ಕಡಿವಾಣ

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ನೂತನ ವರ್ಷಾಚರಣೆಗೆ ಕಡಿವಾಣ ಹಾಕಲಾಗಿದೆ. ಈ ಬಾರಿ ವಾಸ್ತವ್ಯದ…

3 hours ago