ಓದುಗರ ಪತ್ರ
ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಪತ್ನಿ ಮತ್ತು ಪುತ್ರಿಯೇ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಅಂತಹ ಕಾರಣ ಅವರಿಗೇನಿತ್ತು ಎಂಬುದು ಬಯಲಾಗಬೇಕಿದೆ. ಆಸ್ತಿ ವಿಚಾರ, ಕುಟುಂಬದಲ್ಲಿ ಕಲಹ ಅಥವಾ ಓಂ ಪ್ರಕಾಶ್ ಅವರ ನಡವಳಿಕೆಯಲ್ಲಿ ವಿಲಕ್ಷಣವೇನಾದರೂ ಇತ್ತೆ? ಅವರ ಪತ್ನಿ ಈಗಾಗಲೇ ಹಲವು ಬಾರಿ ಪೊಲೀಸ್ ಅಧಿಕಾರಿಗಳ
ವಾಟ್ಸಾಪ್ ಗುಂಪಿನಲ್ಲಿ ಪತಿಯ ನಡವಳಿಕೆ ಬಗ್ಗೆ ಆಕ್ಷೇಪ ಮಾಡಿದ್ದರು.
ಇದನ್ನೂ ಓದಿ:- ಓದುಗರ ಪತ್ರ: ಸರ್ಕಾರವೇ ಪ್ಲಾಸ್ಟಿಕ್ ಉತ್ಪಾದನೆ ನಿಷೇಧಿಸಲಿ
ಓಂ ಪ್ರಕಾಶ್ ಅವರೇ ಪುತ್ರಿಯ ಜೊತೆ ನನಗೂ ವಿಷ ಬೆರೆಸಿದ ಆಹಾರ ನೀಡಿ ಪರೋಕ್ಷವಾಗಿ ಕೊಲೆ ಮಾಡುವ ಸಂಚು ನಡೆಸಿದ್ದರು ಎಂದು ದೂರಿದ್ದಾರೆ ಎಂಬ ಸುದ್ದಿಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಆದರೆ, ಓಂ ಪ್ರಕಾಶ್ ಅವರ ಪುತ್ರಿ ಪೊಲೀಸರ ವಿಚಾರಣೆಗೆ ಸೂಕ್ತವಾಗಿ ಸಹಕರಿಸುತ್ತಿಲ್ಲ ಎನ್ನಲಾಗಿದೆ. ಓಂ ಪ್ರಕಾಶ್ ಅವರ ಹತ್ಯೆಗೆ ಈ ತಾಯಿ ಮತ್ತು ಮಗಳ ಬಳಿ ಏನಾದರೂ ಪುರಾವೆ ಇದ್ದರೆ ಪೊಲೀಸರಿಗೆ ಸಲ್ಲಿಸಬಹುದು ಅಲ್ಲವೇ? ಆದರೆ, ವಿಚಾರಣೆಗೆ ಪ್ರತಿರೋಧಿಸುವುದು ಅವರ ಬಗ್ಗೆ ಸಹಜವಾಗಿ ಅನುಮಾನ ಹುಟ್ಟುಹಾಕುತ್ತದೆ. ಆದರೆ, ಕಾರಣ ಏನೇ ಆಗಿರಲಿ, ಪ್ರಾಣ ತೆಗೆಯುವುದನ್ನು ಒಪ್ಪುವುದು ಕಷ್ಟ ಸಾಧ್ಯ.
-ಆರ್.ವಿ.ಅನ್ವಿತ್, ಕುವೆಂಪುನಗರ, ಮೈಸೂರು.
ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…
ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…
ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…
ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…