Andolana originals

ಓದುಗರ ಪತ್ರ: ಓಂ ಪ್ರಕಾಶ್ ಹತ್ಯೆ ಹಿಂದಿನ ನಿಜ ಕಾರಣ ಬಯಲಾಗಬೇಕು

ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಪತ್ನಿ ಮತ್ತು ಪುತ್ರಿಯೇ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಅಂತಹ ಕಾರಣ ಅವರಿಗೇನಿತ್ತು ಎಂಬುದು ಬಯಲಾಗಬೇಕಿದೆ. ಆಸ್ತಿ ವಿಚಾರ, ಕುಟುಂಬದಲ್ಲಿ ಕಲಹ ಅಥವಾ ಓಂ ಪ್ರಕಾಶ್ ಅವರ ನಡವಳಿಕೆಯಲ್ಲಿ ವಿಲಕ್ಷಣವೇನಾದರೂ ಇತ್ತೆ? ಅವರ ಪತ್ನಿ ಈಗಾಗಲೇ ಹಲವು ಬಾರಿ ಪೊಲೀಸ್ ಅಧಿಕಾರಿಗಳ
ವಾಟ್ಸಾಪ್ ಗುಂಪಿನಲ್ಲಿ ಪತಿಯ ನಡವಳಿಕೆ ಬಗ್ಗೆ ಆಕ್ಷೇಪ ಮಾಡಿದ್ದರು.

ಇದನ್ನೂ ಓದಿ:- ಓದುಗರ ಪತ್ರ: ಸರ್ಕಾರವೇ ಪ್ಲಾಸ್ಟಿಕ್ ಉತ್ಪಾದನೆ ನಿಷೇಧಿಸಲಿ

ಓಂ ಪ್ರಕಾಶ್ ಅವರೇ ಪುತ್ರಿಯ ಜೊತೆ ನನಗೂ ವಿಷ ಬೆರೆಸಿದ ಆಹಾರ ನೀಡಿ ಪರೋಕ್ಷವಾಗಿ ಕೊಲೆ ಮಾಡುವ ಸಂಚು ನಡೆಸಿದ್ದರು ಎಂದು ದೂರಿದ್ದಾರೆ ಎಂಬ ಸುದ್ದಿಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಆದರೆ, ಓಂ ಪ್ರಕಾಶ್ ಅವರ ಪುತ್ರಿ ಪೊಲೀಸರ ವಿಚಾರಣೆಗೆ ಸೂಕ್ತವಾಗಿ ಸಹಕರಿಸುತ್ತಿಲ್ಲ ಎನ್ನಲಾಗಿದೆ. ಓಂ ಪ್ರಕಾಶ್ ಅವರ ಹತ್ಯೆಗೆ ಈ ತಾಯಿ ಮತ್ತು ಮಗಳ ಬಳಿ ಏನಾದರೂ ಪುರಾವೆ ಇದ್ದರೆ ಪೊಲೀಸರಿಗೆ ಸಲ್ಲಿಸಬಹುದು ಅಲ್ಲವೇ? ಆದರೆ, ವಿಚಾರಣೆಗೆ ಪ್ರತಿರೋಧಿಸುವುದು ಅವರ ಬಗ್ಗೆ ಸಹಜವಾಗಿ ಅನುಮಾನ ಹುಟ್ಟುಹಾಕುತ್ತದೆ. ಆದರೆ, ಕಾರಣ ಏನೇ ಆಗಿರಲಿ, ಪ್ರಾಣ ತೆಗೆಯುವುದನ್ನು ಒಪ್ಪುವುದು ಕಷ್ಟ ಸಾಧ್ಯ.

-ಆರ್.ವಿ.ಅನ್ವಿತ್, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ವೀರನಪುರ ಬಳಿ ಟಿಪ್ಪರ್ ಪಲ್ಟಿ: ಚಾಲಕ ಸಾವು

ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…

9 hours ago

ಮುಂದಿನ ದಿನಗಳಲ್ಲಿಯೂ ಬಂಜಾರ ಸಮುದಾಯದವರ ಜೊತೆಗೆ ಸದಾ ಬೆಂಬಲವಾಗಿರುತ್ತೇನೆ: ಬಿಜೆಪಿ ಒ.ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನಧ್ವನಿ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…

9 hours ago

ಕರ್ನಾಟಕ ಸೋಲಿಸಿ ಮೊದಲ ಬಾರಿಗೆ ರಣಜಿ ಟ್ರೋಫಿ ಎತ್ತಿ ಹಿಡಿದ ಜಮ್ಮು-ಕಾಶ್ಮೀರ

ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ…

13 hours ago

ಹನೂರಿನಲ್ಲಿ ವಿಜೃಂಭಣೆಯಿಂದ ನಡೆದ ಸೇವಾಲಾಲ್‌ ಜಯಂತಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…

13 hours ago

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್‌

ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ನೀಡಿದ್ದಾರೆ. ಈ…

13 hours ago

ಸದ್ದಿಲ್ಲದೆ ಸಮಾಜಸೇವೆಗೆ ನಿಂತ ಎಂಬಿಶ್ರೀ ಪ್ರತಿಷ್ಠಾನ ತಂಡ

ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…

13 hours ago