ಓದುಗರ ಪತ್ರ
ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಪತ್ನಿ ಮತ್ತು ಪುತ್ರಿಯೇ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಅಂತಹ ಕಾರಣ ಅವರಿಗೇನಿತ್ತು ಎಂಬುದು ಬಯಲಾಗಬೇಕಿದೆ. ಆಸ್ತಿ ವಿಚಾರ, ಕುಟುಂಬದಲ್ಲಿ ಕಲಹ ಅಥವಾ ಓಂ ಪ್ರಕಾಶ್ ಅವರ ನಡವಳಿಕೆಯಲ್ಲಿ ವಿಲಕ್ಷಣವೇನಾದರೂ ಇತ್ತೆ? ಅವರ ಪತ್ನಿ ಈಗಾಗಲೇ ಹಲವು ಬಾರಿ ಪೊಲೀಸ್ ಅಧಿಕಾರಿಗಳ
ವಾಟ್ಸಾಪ್ ಗುಂಪಿನಲ್ಲಿ ಪತಿಯ ನಡವಳಿಕೆ ಬಗ್ಗೆ ಆಕ್ಷೇಪ ಮಾಡಿದ್ದರು.
ಇದನ್ನೂ ಓದಿ:- ಓದುಗರ ಪತ್ರ: ಸರ್ಕಾರವೇ ಪ್ಲಾಸ್ಟಿಕ್ ಉತ್ಪಾದನೆ ನಿಷೇಧಿಸಲಿ
ಓಂ ಪ್ರಕಾಶ್ ಅವರೇ ಪುತ್ರಿಯ ಜೊತೆ ನನಗೂ ವಿಷ ಬೆರೆಸಿದ ಆಹಾರ ನೀಡಿ ಪರೋಕ್ಷವಾಗಿ ಕೊಲೆ ಮಾಡುವ ಸಂಚು ನಡೆಸಿದ್ದರು ಎಂದು ದೂರಿದ್ದಾರೆ ಎಂಬ ಸುದ್ದಿಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಆದರೆ, ಓಂ ಪ್ರಕಾಶ್ ಅವರ ಪುತ್ರಿ ಪೊಲೀಸರ ವಿಚಾರಣೆಗೆ ಸೂಕ್ತವಾಗಿ ಸಹಕರಿಸುತ್ತಿಲ್ಲ ಎನ್ನಲಾಗಿದೆ. ಓಂ ಪ್ರಕಾಶ್ ಅವರ ಹತ್ಯೆಗೆ ಈ ತಾಯಿ ಮತ್ತು ಮಗಳ ಬಳಿ ಏನಾದರೂ ಪುರಾವೆ ಇದ್ದರೆ ಪೊಲೀಸರಿಗೆ ಸಲ್ಲಿಸಬಹುದು ಅಲ್ಲವೇ? ಆದರೆ, ವಿಚಾರಣೆಗೆ ಪ್ರತಿರೋಧಿಸುವುದು ಅವರ ಬಗ್ಗೆ ಸಹಜವಾಗಿ ಅನುಮಾನ ಹುಟ್ಟುಹಾಕುತ್ತದೆ. ಆದರೆ, ಕಾರಣ ಏನೇ ಆಗಿರಲಿ, ಪ್ರಾಣ ತೆಗೆಯುವುದನ್ನು ಒಪ್ಪುವುದು ಕಷ್ಟ ಸಾಧ್ಯ.
-ಆರ್.ವಿ.ಅನ್ವಿತ್, ಕುವೆಂಪುನಗರ, ಮೈಸೂರು.
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…