Andolana originals

ಅರಮನೆಗಿಂತ ಹೆಚ್ಚು ಅರಳಿಮರದಡಿ ಜೀವಿಸುವ ಧಮ್ಮ

ಮಾನಸಗಂಗೋತ್ರಿಯಲ್ಲಿ ಪೂರ್ಣಿಮೆ ಆಚರಣೆಗೆ ದಶಕ

ಇಂದು ಸಂಜೆ ೫ಗಂಟೆಗೆ ‘ಧಮ್ಮ ಪಯಣ’

ಗೌತಮ ಉದ್ಯಾನವನದಲ್ಲಿ ಧ್ಯಾನ, ಗಾಯನ ಕಾರ್ಯಕ್ರಮ

ಮೈಸೂರು: ಗೌತಮ ಬುದ್ಧರ ಚಿಂತನೆಗಳನ್ನು ಬಿತ್ತಲು ಒಂದು ವೈಭವೋಪೇತ ವಾತಾವರಣಬೇಕಿಲ್ಲ. ಅದು ಸರಳವಾಗಿ ಪ್ರಕೃತಿಯಲ್ಲಿಯೇ ಹರಡುತ್ತದೆ. ಹೆಚ್ಚೆಂದರೆ ನಿಮಗೆ ಕುಳಿತು ಮಾತನಾಡಲು ಒಂದು ಮರದ ನೆರಳು ಸಾಕು. ಅರಳಿಮರವಾದರೆ ಇನ್ನೂ ಸ್ವಾದ. ನೀವು ಗಮನಿಸಿ, ಬುದ್ಧರು ಅರಮನೆಯಿಂದ ಅರಳಿಮರದ ಕಡೆಗೆ ನಡೆದು, ಅರಳಿಮರದ ನೆರಳಿನಲ್ಲಿಯೇ ತಮ್ಮ ಬದುಕಿನ ಬಹುಭಾಗವನ್ನು ಕಳೆದರು. ಗಿಡ ಮರ ಬಳ್ಳಿಗಳ ಆಶ್ರಯದಲ್ಲಿ ಧಮ್ಮ ಬೋಧಿಸುತ್ತಾ ಹೊರಟರು. ಹಾಗಾಗಿ ಧಮ್ಮದಲ್ಲಿ ಅರಮನೆಗಿಂತ ಅರಳಿಮರಕ್ಕೆ ಶ್ರೇಷ್ಠವಾದ ಸ್ಥಾನವನ್ನು ಕಲ್ಪಿಸಲಾಗಿದೆ.

೧೩ ವರ್ಷಗಳ ಹಿಂದೆ ಮಾನಸಗಂಗೋತ್ರಿಯಲ್ಲಿ ಪಿಜಿ ವಿದ್ಯಾರ್ಥಿನಿಲಯದ ಮುಂಭಾಗದಲ್ಲಿರುವ ಅರಳಿಮರದ ಕೆಳಗೆ ನೀರವ ವಾತಾವರಣ ಇತ್ತು. ಆದರೆ, ಈಗ ಅಲ್ಲಿ ಗೌತಮ ಬುದ್ಧ ಮತ್ತು ಆತನ ಧಮ್ಮದ ಬೆಳಕು ಪಸರಿಸುವ ಮೂಲಕ ಮಾನವತೆಯ ಬೆಳದಿಂಗಳು ಹರಡಿದಂತಹ ವಾತಾವರಣ ಇರುತ್ತದೆ. ಇದಕ್ಕೆ ಆಗ ಸಂಶೋಧನಾ ವಿದ್ಯಾರ್ಥಿಯಾಗಿದ್ದ ಬಿ.ಬಸವರಾಜು ಅವರ ಪರಿಶ್ರಮ ಕಾರಣ. ಅವರೊಂದಿಗೆ ಹಲವರು ಕೈಜೋಡಿಸಿದ್ದರು.

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

4 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

4 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

5 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

5 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

5 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

6 hours ago