೫೫ ಲಕ್ಷ ರೂ. ವೆಚ್ಚದ ಕಟ್ಟಡಗಳನ್ನು ಸುಪರ್ದಿಗೆ ಪಡೆಯದ ಪ್ರವಾಸೋದ್ಯಮ ಇಲಾಖೆ
ಆನಂದ್ ಹೊಸೂರು
ಹೊಸೂರು: ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ ಸರ್ಕಾರ ಕೋಟ್ಯಂತರ ರೂ. ವ್ಯಯಿಸುವುದು ಒಂದೆಡೆಯಾದರೆ ಇಲ್ಲಿ ಸುಮಾರು ೫೫ ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಕಟ್ಟಡಗಳು ಪಾಳುಬಿದ್ದಿರುವುದು ಶೋಚನೀಯ ಸಂಗತಿ.
ಸಾಲಿಗ್ರಾಮ ತಾಲ್ಲೂಕಿನ ಪ್ರವಾಸಿ ತಾಣ ಚುಂಚನಕಟ್ಟೆಯಲ್ಲಿರುವ ಕಟ್ಟಡಗಳು ಪಾಳುಬೀಳುತ್ತಿವೆ. ಈ ಹಿಂದೆ ಪ್ರವಾಸೋದ್ಯಮ ಸಚಿವರಾಗಿದ್ದ ಸಾ.ರಾ.ಮಹೇಶ್ ಅವರು ಸುಮಾರು ೮ ಕೋಟಿ ರೂ. ವಿಶೇಷ ಅನುದಾನ ನೀಡಿ ಗ್ರಾಮದಲ್ಲಿ ದ್ವಿಪಥ ರಸ್ತೆ, ಬೃಹತ್ ಆಂಜನೇಯ ಮೂರ್ತಿ, ಪಾರ್ಕ್, ವೀಕ್ಷಣಾ ಗೋಪುರ, ಪ್ರವಾಸಿ ಮಂದಿರದ ಬಳಿ ೫೫ ಲಕ್ಷ ರೂ. ವೆಚ್ಚದಲ್ಲಿ ಉಪಾಹಾರ ಗೃಹ, ಶೌಚಾಲಯ ನಿರ್ಮಾಣ, ಕುಡಿಯುವ ನೀರು ಸರಬರಾಜು ಸೇರಿದಂತೆ ಇನ್ನಿತರ ಕಾಮಗಾರಿಗಳನ್ನು ನಡೆಸಿದ್ದರು.
೨೦೧೯ರಲ್ಲೇ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿ ದ್ದರೂ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಇನ್ನೂ ತಮ್ಮ ಸುಪರ್ದಿಗೆ ತೆಗೆದುಕೊಂಡಿಲ್ಲ. ಇದೇ ಜಾಗದಲ್ಲಿರುವ ಜಲಪಾತ ವೀಕ್ಷಣಾ ಗೋಪುರವೂ ಪಾಳು ಬಿದ್ದು, ಗಿಡ ಗಂಟಿಗಳು ಬೆಳೆದು ಹಾವು-ಚೇಳುಗಳ ಆವಾಸಸ್ಥಾನವಾಗಿ ಮಾರ್ಪಟ್ಟಿದೆ.
ಸರ್ಕಾರ ಸಾಕಷ್ಟು ಅನುದಾನ ನೀಡಿ ಕಟ್ಟಡಗಳು ನಿರ್ಮಾಣಗೊಂಡರೂ ಇಲಾಖೆ ತನ್ನ ಸುಪರ್ದಿಗೆ ತೆಗೆದುಕೊಳ್ಳಲು೬ ವರ್ಷಗಳು ಬೇಕೆ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ. ಉಪಾಹಾರ ಕೇಂದ್ರವೆನಿಸಿಕೊಂಡಿರುವ ಈ ಕಟ್ಟಡವನ್ನು ಪ್ರವಾಸಿಗರಿಗೆ ಊಟದ ವ್ಯವಸ್ಥೆಗಾಗಿ ನಿರ್ಮಾಣ ಮಾಡಲಾಗಿದೆ.
ಸದ್ಯ ಕಟ್ಟಡಕ್ಕೆ ಹಾಕಲಾಗಿರುವ ಕಿಟಕಿ ಬಾಗಿಲುಗಳನ್ನು ಗೆದ್ದಲುಗಳು ತಿನ್ನುತ್ತಿದ್ದು ಕಿಟಕಿಗಳಿಗೆ ಹಾಕಲಾಗಿರುವ ಗಾಜುಗಳು ಒಡೆದು ಹೋಗಿವೆ. ಕಟ್ಟಡದ ಒಳಗೆ ಅನೈತಿಕ ಚಟುವಟಿಕೆಗಳು ನಡೆಯುತ್ತವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
” ಉಪಾಹಾರ ಗೃಹಸೇರಿದಂತೆ ಈಗಾಗಲೇ ಕಾಮಗಾರಿ ಮುಗಿದಿರುವ ಕಟ್ಟಡಗಳು ನಮ್ಮ ಇಲಾಖೆಯ ಸುಪರ್ದಿಗೆ ಇನ್ನೂ ಬಂದಿಲ್ಲ. ಸದ್ಯದಲ್ಲಿಯೇ ಭೇಟಿ ನೀಡಿ ಮಾಹಿತಿ ಪಡೆದು ಉತ್ತಮ ಕ್ಯಾಂಟೀನ್ ತೆರೆಯಲು ಕ್ರಮ ಕೈಗೊಳ್ಳಲಾಗುವುದು.”
-ಪ್ರಭುಸ್ವಾಮಿ, ಸಹಾಯಕ ನಿರ್ದೇಶಕರು,
” ಪ್ರವಾಸೋದ್ಯಮ ಇಲಾಖೆ ಸರ್ಕಾರ ಇರುವ ಸೌಲಭ್ಯಗಳನ್ನು ಬಳಸಿ ಗುಣಮಟ್ಟದ ಸೇವೆ ನೀಡಲಾಗದೇ ಇರುವುದಕ್ಕೆ ಚುಂಚನಕಟ್ಟೆಯೇ ಸಾಕ್ಷಿಯಾಗಿದೆ. ಕಳೆದ ೬ ವರ್ಷಗಳಿಂದ ಈ ಕಟ್ಟಡಗಳು ಅನಾಥವಾಗಿದ್ದು, ಈಗಲಾದರೂ ಜನಪ್ರತಿನಿಽಗಳು, ಇಲಾಖೆಯ ಅಧಿಕಾರಿಗಳು ಇತ್ತ ಗಮನಹರಿಸಬೇಕಿದೆ.”
-ಹೆಚ್.ಆರ್.ಕೃಷ್ಣಮೂರ್ತಿ, ಡೇರಿ ಅಧ್ಯಕ್ಷ, ಹಳಿಯೂರು ಬಡಾವಣೆ
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…
ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಾಗ್ದಾಳಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…
ಬೆಂಗಳೂರು: ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…
ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…
ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…