Andolana originals

ಚುಂಚನಕಟ್ಟೆಯಲ್ಲಿ ಪಾಳು ಬಿದ್ದ ಸರ್ಕಾರಿ ಕಟ್ಟಡಗಳು

೫೫ ಲಕ್ಷ ರೂ. ವೆಚ್ಚದ ಕಟ್ಟಡಗಳನ್ನು ಸುಪರ್ದಿಗೆ ಪಡೆಯದ ಪ್ರವಾಸೋದ್ಯಮ ಇಲಾಖೆ

ಆನಂದ್ ಹೊಸೂರು

ಹೊಸೂರು: ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ ಸರ್ಕಾರ ಕೋಟ್ಯಂತರ ರೂ. ವ್ಯಯಿಸುವುದು ಒಂದೆಡೆಯಾದರೆ ಇಲ್ಲಿ ಸುಮಾರು ೫೫ ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಕಟ್ಟಡಗಳು ಪಾಳುಬಿದ್ದಿರುವುದು ಶೋಚನೀಯ ಸಂಗತಿ.

ಸಾಲಿಗ್ರಾಮ ತಾಲ್ಲೂಕಿನ ಪ್ರವಾಸಿ ತಾಣ ಚುಂಚನಕಟ್ಟೆಯಲ್ಲಿರುವ ಕಟ್ಟಡಗಳು ಪಾಳುಬೀಳುತ್ತಿವೆ. ಈ ಹಿಂದೆ ಪ್ರವಾಸೋದ್ಯಮ ಸಚಿವರಾಗಿದ್ದ ಸಾ.ರಾ.ಮಹೇಶ್ ಅವರು ಸುಮಾರು ೮ ಕೋಟಿ ರೂ. ವಿಶೇಷ ಅನುದಾನ ನೀಡಿ ಗ್ರಾಮದಲ್ಲಿ ದ್ವಿಪಥ ರಸ್ತೆ, ಬೃಹತ್ ಆಂಜನೇಯ ಮೂರ್ತಿ, ಪಾರ್ಕ್, ವೀಕ್ಷಣಾ ಗೋಪುರ, ಪ್ರವಾಸಿ ಮಂದಿರದ ಬಳಿ ೫೫ ಲಕ್ಷ ರೂ. ವೆಚ್ಚದಲ್ಲಿ ಉಪಾಹಾರ ಗೃಹ, ಶೌಚಾಲಯ ನಿರ್ಮಾಣ, ಕುಡಿಯುವ ನೀರು ಸರಬರಾಜು ಸೇರಿದಂತೆ ಇನ್ನಿತರ ಕಾಮಗಾರಿಗಳನ್ನು ನಡೆಸಿದ್ದರು.

೨೦೧೯ರಲ್ಲೇ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿ ದ್ದರೂ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಇನ್ನೂ ತಮ್ಮ ಸುಪರ್ದಿಗೆ ತೆಗೆದುಕೊಂಡಿಲ್ಲ. ಇದೇ ಜಾಗದಲ್ಲಿರುವ ಜಲಪಾತ ವೀಕ್ಷಣಾ ಗೋಪುರವೂ ಪಾಳು ಬಿದ್ದು, ಗಿಡ ಗಂಟಿಗಳು ಬೆಳೆದು ಹಾವು-ಚೇಳುಗಳ ಆವಾಸಸ್ಥಾನವಾಗಿ ಮಾರ್ಪಟ್ಟಿದೆ.

ಸರ್ಕಾರ ಸಾಕಷ್ಟು ಅನುದಾನ ನೀಡಿ ಕಟ್ಟಡಗಳು ನಿರ್ಮಾಣಗೊಂಡರೂ ಇಲಾಖೆ ತನ್ನ ಸುಪರ್ದಿಗೆ ತೆಗೆದುಕೊಳ್ಳಲು೬ ವರ್ಷಗಳು ಬೇಕೆ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ. ಉಪಾಹಾರ ಕೇಂದ್ರವೆನಿಸಿಕೊಂಡಿರುವ ಈ ಕಟ್ಟಡವನ್ನು ಪ್ರವಾಸಿಗರಿಗೆ ಊಟದ ವ್ಯವಸ್ಥೆಗಾಗಿ ನಿರ್ಮಾಣ ಮಾಡಲಾಗಿದೆ.

ಸದ್ಯ ಕಟ್ಟಡಕ್ಕೆ ಹಾಕಲಾಗಿರುವ ಕಿಟಕಿ ಬಾಗಿಲುಗಳನ್ನು ಗೆದ್ದಲುಗಳು ತಿನ್ನುತ್ತಿದ್ದು ಕಿಟಕಿಗಳಿಗೆ ಹಾಕಲಾಗಿರುವ ಗಾಜುಗಳು ಒಡೆದು ಹೋಗಿವೆ. ಕಟ್ಟಡದ ಒಳಗೆ ಅನೈತಿಕ ಚಟುವಟಿಕೆಗಳು ನಡೆಯುತ್ತವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

” ಉಪಾಹಾರ ಗೃಹಸೇರಿದಂತೆ ಈಗಾಗಲೇ ಕಾಮಗಾರಿ ಮುಗಿದಿರುವ ಕಟ್ಟಡಗಳು ನಮ್ಮ ಇಲಾಖೆಯ ಸುಪರ್ದಿಗೆ ಇನ್ನೂ ಬಂದಿಲ್ಲ. ಸದ್ಯದಲ್ಲಿಯೇ ಭೇಟಿ ನೀಡಿ ಮಾಹಿತಿ ಪಡೆದು ಉತ್ತಮ ಕ್ಯಾಂಟೀನ್ ತೆರೆಯಲು ಕ್ರಮ ಕೈಗೊಳ್ಳಲಾಗುವುದು.”

-ಪ್ರಭುಸ್ವಾಮಿ, ಸಹಾಯಕ ನಿರ್ದೇಶಕರು,

” ಪ್ರವಾಸೋದ್ಯಮ ಇಲಾಖೆ ಸರ್ಕಾರ ಇರುವ ಸೌಲಭ್ಯಗಳನ್ನು ಬಳಸಿ ಗುಣಮಟ್ಟದ ಸೇವೆ ನೀಡಲಾಗದೇ ಇರುವುದಕ್ಕೆ ಚುಂಚನಕಟ್ಟೆಯೇ ಸಾಕ್ಷಿಯಾಗಿದೆ. ಕಳೆದ ೬ ವರ್ಷಗಳಿಂದ ಈ ಕಟ್ಟಡಗಳು ಅನಾಥವಾಗಿದ್ದು, ಈಗಲಾದರೂ ಜನಪ್ರತಿನಿಽಗಳು, ಇಲಾಖೆಯ ಅಧಿಕಾರಿಗಳು ಇತ್ತ ಗಮನಹರಿಸಬೇಕಿದೆ.”

-ಹೆಚ್.ಆರ್.ಕೃಷ್ಣಮೂರ್ತಿ, ಡೇರಿ ಅಧ್ಯಕ್ಷ, ಹಳಿಯೂರು ಬಡಾವಣೆ 

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

2 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

3 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

4 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

6 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

12 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

18 hours ago