Andolana originals

ಪಾಳು ಬಿದ್ದ ಪಾರ್ಕ್.. ಶುಚಿ ಇಲ್ಲದ ಶೌಚಾಲಯ..

ಕಸ, ಕೊಳಚೆ ಮತ್ತು ಕಟ್ಟಡ ತ್ಯಾಜ್ಯದಿಂದ ವಾಯುವಿಹಾರಿಗಳಿಗೆ ತೊಂದರೆ 

ಮೈಸೂರು: ನಗರದ ಸರಸ್ವತಿಪುರಂನ ವಾರ್ಡ್ ಸಂಖ್ಯೆ ೨೧ರಲ್ಲಿ ಇರುವ ಪಾರ್ಕ್ ಸೂಕ್ತ ನಿರ್ವಹಣೆ ಇಲ್ಲದೆ ಪಾಳು ಕೊಂಪೆಯಂತಾಗಿದೆ. ಪಾರ್ಕ್‌ನಲ್ಲಿ ಎಲ್ಲೆಂದರಲ್ಲಿ ಕಸ ಬಿದ್ದಿದ್ದು, ಪಾರ್ಕ್‌ನಲ್ಲಿರುವ ಸಾರ್ವಜನಿಕ ಶೌಚಾಲಯವೂ ನಿರ್ವಹಣೆ ಕೊರತೆಯಿಂದ ಉಪಯೋಗಕ್ಕೆ ಬಾರದಂತಾಗಿದೆ.

ಶೌಚಾಲಯಕ್ಕೆ ನೀರು ಪೂರೈಕೆ ಇಲ್ಲದೆ ವರ್ಷಗಳೇ ಕಳೆದಿವೆ. ಇದರಿಂದ ಗೋಡೆಗಳಲ್ಲಿ ಬಿರುಕು ಬಿದ್ದು ಶಿಥಿಲಗೊಂಡು ಬೀಳುವ ಸ್ಥಿತಿಯಲ್ಲಿದೆ. ಕಿಟಕಿ ಹಾಗೂ ಬಾಗಿಲುಗಳು ಮುರಿದು ಬಿದ್ದಿದ್ದು, ಬೇಸಿನ್ ಮತ್ತು ಪೈಪ್‌ಲೇನ್ ಒಡೆದು ಹೋಗಿವೆ. ಇದರಿಂದ ಅನೈರ್ಮಲ್ಯ ಉಂಟಾಗಿದೆ. ಶೌಚಾಲಯದ ಒಳಗೆ ಪ್ಲಾಸ್ಟಿಕ್ ಬಾಟಲಿಗಳು ಹಾಗೂ ಮದ್ಯಪಾನ ಮಾಡಿದವರು ಬಿಸಾಡಿದ ಬಾಟಲಿಗಳು ತುಂಬಿ ಹೋಗಿವೆ. ಕಸ, ಕಡ್ಡಿ ಮತ್ತು ಪ್ಲಾಸ್ಟಿಕ್ ತ್ಯಾಜ್ಯ ಹಾಕಿರುವುದರಿಂದ ನೀರು ಒಂದೇ ಕಡೆ ನಿಂತು ದುರ್ವಾಸನೆ ಬೀರುತ್ತಿದೆ. ಇದರಿಂದ ಕ್ರಿಮಿಕೀಟಗಳ ಆವಾಸ ಸ್ಥಾನವಾಗಿ ಮಾರ್ಪಟ್ಟಿದೆ. ಪ್ರತಿದಿನ ನೂರಾರು ಜನರು ವಾಯುವಿಹಾರಕ್ಕೆ ಈ ಪಾರ್ಕ್ಗೆ ಬರುತ್ತಾರೆ. ಮಕ್ಕಳ ಜೊತೆಗೆ ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಹೆಚ್ಚಿನ ವಯಸ್ಕರು ಮಧುಮೇಹ ಕಾಯಿಲೆಯಿಂದ ಬಳಲುತ್ತಿರುವುದರಿಂದ ಶೌಚಾಲಯ ಬಳಸುವ ಅಗತ್ಯ ಹೆಚ್ಚಿದೆ. ಆದರೆ, ಶೌಚಾಲಯದದುಸ್ಥಿತಿಯಿಂದ ಬಳಸಲು ಹೋದರೆ ಕಾಯಿಲೆ ಬರುವ ಪರಿಸ್ಥಿತಿ ಇದೆ ಎಂದು ಹಿರಿಯ ನಾಗರಿಕರು ಆರೋಪಿಸುತ್ತಾರೆ.

ನೀರು, ಕರೆಂಟ್ ಇಲ್ಲ: ಶೌಚಾಲಯಕ್ಕೆ ಸರಿಯಾಗಿ ನೀರು ಸರಬರಾಜು ಆಗುತ್ತಿಲ್ಲ. ಜೊತೆಗೆ ವಿದ್ಯುತ್ ಸಂಪರ್ಕವೂ ಇಲ್ಲದ ಕಾರಣ ರಾತ್ರಿ ವೇಳೆಯಲ್ಲಿ ಅನೈತಿಕ ಚಟುವಟಿಕೆಗಳ ತಾಣವಾಗಿದೆ. ಅನಾರೋಗ್ಯದ ಭೀತಿ: ನಿಂತಿರುವ ಕೊಳಚೆ ನೀರು ಸೊಳ್ಳೆಗಳ ಸಂತಾನೋತ್ಪತ್ತಿಗೆ ಕಾರಣವಾಗಿದ್ದು, ಇದು ಸಾಂಕ್ರಾಮಿಕ ರೋಗಗಳಿಗೆ ದಾರಿ ಮಾಡಿಕೊಡುತ್ತಿದೆ. ಅಧಿಕಾರಿಗಳಿಗೆ ದೂರವಾಣಿ ಮೂಲಕ ತಿಳಿಸಿದರೂ ಸ್ಪಂದಿಸುತ್ತಿಲ್ಲ ಎಂದು ನಿವಾಸಿಗಳ ಆರೋಪವಾಗಿದೆ.

ಗ್ರಂಥಾಲಯಕ್ಕೆ ಬರುವವರಿಗೆ ತೊಂದರೆ: ಪಾರ್ಕ್‌ನಲ್ಲಿ ಸಾರ್ವಜನಿಕ ಗ್ರಂಥಾಲಯವಿದ್ದು, ಪ್ರತಿದಿನ ಅನೇಕರು ಬರುತ್ತಾರೆ. ಆದರೆ, ಗ್ರಂಥಾಲಯದ ಒಳಗೂ ಶೌಚಾಲಯವಿಲ್ಲದ ಕಾರಣ ಮನೆಗಳಿಗೆ ಅಥವಾ ಸಾರ್ವಜನಿಕ ಶೌಚಾಲಯಗಳಿಗೆ ಹೋಗುವ ಪರಿಸ್ಥಿತಿ ಎದುರಾಗಿದೆ ಎಂದು ವಿದ್ಯಾರ್ಥಿ ಚೇತನ್ ದೂರಿದರು.

ಕಸದ ರಾಶಿ: ಉದ್ಯಾನವೆಲ್ಲ ಪ್ಲಾಸ್ಟಿಕ್ ತ್ಯಾಜ್ಯದಿಂದ ತುಂಬಿದೆ. ಕಸದ ರಾಶಿಯನ್ನು ಒಂದೇ ಕಡೆ ಸುರಿದಿರುವುದು ಕಂಡುಬರುತ್ತಿದೆ. ಪಾರ್ಕ್‌ಗೆ ಬರುವವರು ತಿಂಡಿ-ತಿನಿಸುಗಳನ್ನು ಸೇವಿಸಿ ಕಸವನ್ನು ಅಲ್ಲಿಯೇ ಎಸೆಯುವುದರಿಂದ ನಿರ್ವಹಣೆ ಕೊರತೆಯಿಂದ ಪಾರ್ಕ್ ಕಸಮಯವಾಗಿದೆ.

ಕಟ್ಟಡ ತ್ಯಾಜ್ಯ: ಪಾರ್ಕ್‌ನಲ್ಲಿ ಕಟ್ಟಡ ತ್ಯಾಜ್ಯ ಹಾಗೂ ತುಕ್ಕು ಹಿಡಿದ ಕಬ್ಬಿಣದ ರಾಶಿಗಳು ವರ್ಷಗಳಿಂದ ಹಾಗೆಯೇ ಬಿದ್ದಿವೆ. ಇದರಿಂದ ಗಿಡ-ಗಂಟಿಗಳು ಬೆಳೆದು ನಿಂತಿದ್ದು, ಮಕ್ಕಳು ಆಟವಾಡಲು ಬಂದಾಗ ಅಪಾಯ ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ.

” ಪಾರ್ಕ್‌ನಲ್ಲಿರುವ ಸಮಸ್ಯೆಯನ್ನು ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಹಿಂದೆ ೧ ಕೋಟಿ ರೂ. ಅನುದಾನದಿಂದ ಪಾರ್ಕ್‌ನ್ನು ನಿರ್ಮಾಣ ಮಾಡಲಾಗಿತ್ತು. ಆದರೆ, ಸರಿಯಾದ ನಿರ್ವಹಣೆ ಇಲ್ಲದೆ ಪಾರ್ಕ್ ಹಾಳಾಗಿದೆ. ಪಾಲಿಕೆ ಸದಸ್ಯರಿಲ್ಲದೆ ಅಧಿಕಾರಿಗಳ ದರ್ಬಾರು ಹೆಚ್ಚಾಗಿದೆ. ಸಾರ್ವಜನಿಕರ ಸಮಸ್ಯೆಗೆ ಸರಿಯಾಗಿ ಸ್ಪಂದಿಸುತ್ತಿಲ್ಲ.”

-ಸಿ.ವೇದಾವತಿ, ನಗರಪಾಲಿಕೆ ಮಾಜಿ ಸದಸ್ಯೆ

” ಮನುಷ್ಯನ ಮೂಲ ಅವಶ್ಯಕತೆಗಳಲ್ಲಿ ಶೌಚಾಲಯವೂ ಒಂದು. ಉದ್ಯಾನವನಗಳಿಗೆ ಹಿರಿಯರು ಬೆಳಿಗ್ಗೆ ಹಾಗೂ ಸಂಜೆ ವೇಳೆ ಆಗಮಿಸುತ್ತಾರೆ. ಅವರಿಗೆ ಸೂಕ್ತ ಶೌಚಾಲಯ ವ್ಯವಸ್ಥೆಯನ್ನು ನಗರಪಾಲಿಕೆ ಕಲ್ಪಿಸಬೇಕು. ಈ ವಿಷಯದಲ್ಲಿ ಯಾರೂ ರಾಜಿಯಾಗುವುದಿಲ್ಲ.”

-ಪ್ರೀತಮ್, ವಾಯುವಿಹಾರಿ

 

 

ಆಂದೋಲನ ಡೆಸ್ಕ್

Recent Posts

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

6 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

6 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

11 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

11 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

11 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

11 hours ago