Andolana originals

ಮುಸುಕಿನ ಜೋಳಕ್ಕೆ ರೋಗ ಬಾಧೆ; ಸಂಕಷ್ಟಕ್ಕೆ ಸಿಲುಕಿದ ರೈತರು

ಮಂಜು ಕೋಟೆ

ಕೋಟೆ: ಔಷಧ ಸಿಂಪಡಿಸಿದ ಬಿತ್ತನೆ ಬೀಜ ವಿತರಿಸಿದರೂ ಪ್ರಯೋಜನವಾಗದೆ ಲಕ್ಷಾಂತರ ರೂ. ನಷ್ಟ 

ಎಚ್.ಡಿ.ಕೋಟೆ: ಸಾವಿರಾರು ಎಕರೆಯಲ್ಲಿ ಬೆಳೆಯಲಾಗಿದ್ದ ಮುಸುಕಿನ ಜೋಳದ ಬೆಳೆಗೆ ರೋಗ ಮತ್ತು ಕೀಟ ಬಾಧೆ ಹೆಚ್ಚಾಗಿದ್ದು ಬೆಳೆಗಳು ನಾಶವಾಗಿ ಈ ಬಾರಿಯೂ ನೂರಾರು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ತಾಲ್ಲೂಕಿನಲ್ಲಿ ಕಬಿನಿ, ತಾರಕ, ನುಗು, ಹೆಬ್ಬಾಳ ಜಲಾಶಯಗಳಿದ್ದರೂ ಈ ಭಾಗದ ರೈತರ ಅನು ಕೂಲಕ್ಕಿಂತ ಹೊರಗಿನವರಿಗೆ ಹೆಚ್ಚು ಅನುಕೂಲವಾಗಿವೆ. ಹೀಗಾಗಿ ಈ ಭಾಗದ ರೈತರು ಆರ್ಥಿಕ ಬೆಳೆಗಳಾದ ಮುಸುಕಿನ ಜೋಳ, ಹತ್ತಿ, ಹೊಗೆ ಸೊಪ್ಪುಗಳಂತಹ ಮಳೆ ಆಶ್ರಿತ ಬೆಳೆಗಳನ್ನೇ ಅವಲಂಬಿಸಿದ್ದಾರೆ.

ಮುಂಗಾರು ಮಳೆ ಅಭಾವದಿಂದಾಗಿ ತಾಲ್ಲೂಕಿನ ಸಾವಿರಾರು ರೈತರು ತಮ್ಮ ಜಮೀನುಗಳಲ್ಲಿ ೨ತಿಂಗಳ ಹಿಂದೆ ಸರ್ಕಾರ, ವಿಜ್ಞಾನಿಗಳು, ಕೃಷಿ ಇಲಾಖೆಯವರು ಪರೀಕ್ಷಿಸಿದ್ದ, ರೋಗ ನಿರೋಧಕ ಶಕ್ತಿ ಒಳಗೊಂಡ ಮುಸುಕಿನ ಜೋಳದ ಬೀಜಗಳನ್ನು ಬಿತ್ತನೆ ಮಾಡಿದ್ದರು. ಆದರೆ ಕಳೆದ ೧೦-೧೫ ದಿನಗಳಿಂದ ನೂರಾರು ರೈತರ ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆದಿರುವ ಮುಸುಕಿನ ಜೋಳದ ಬೆಳೆಗೆ ಬಿಳಿ ಸುಳಿ ರೋಗ ಮತ್ತು ಸೈನಿಕ ಹುಳುವಿನ ಕೀಟಬಾಧೆ ಕಾಣಿಸಿಕೊಂಡಿದೆ.

ತಾಲ್ಲೂಕಿನ ಹಂಪಾಪುರ, ಮಾದಾಪುರ, ಕೋಳಗಾಲ, ಚಕ್ಕೋಡನಹಳ್ಳಿ, ಮೇಟಿಕುಪ್ಪೆ, ನೂರಲಕುಪ್ಪೆ, ಅಂತರಸಂತೆ, ಬೆಳಗನಹಳ್ಳಿ, ಅಣ್ಣೂರು, ಹೊಸಳ್ಳಿ, ಟೈಗರ್ ಬ್ಲಾಕ್, ನಾಯಕನ ಹುಂಡಿ, ಯರಹಳ್ಳಿ, ಚಾಕಹಳ್ಳಿ, ನಾಗನಹಳ್ಳಿ, ರಾಮೇನಹಳ್ಳಿ, ಗಣೇಶನ ಗುಡಿ, ನೇರಳೆ, ಜಿ.ಬಿ.ಸರಗೂರು, ಕಣಿಯನಹುಂಡಿ ಮುಂತಾದ ಗ್ರಾಮಗಳ ವ್ಯಾಪ್ತಿಯಲ್ಲಿ ಬೆಳೆಗೆ ರೋಗಬಾಧೆ ಕಾಣಿಸಿಕೊಂಡು ಕೀಟನಾಶಕಗಳನ್ನು ಸಿಂಪಡಿಸಿದರೂ ನಿಯಂತ್ರಣಕ್ಕೆ ಬಾರದೆ ಬೆಳೆಗಳು ಸಂಪೂರ್ಣವಾಗಿ ನಾಶವಾಗುತ್ತಿರುವುದು ರೈತರನ್ನು ಕಂಗಾಲಾಗಿಸಿದೆ.

ರೈತರು ಸಾಲ ಮಾಡಿ ಬೆಳೆ ಬೆಳೆದರೂ ರೋಗ ಮತ್ತು ಕೀಟ ಬಾಧೆಯಿಂದಾಗಿ ಬೆಳೆಗಳು ನಾಶವಾಗುತ್ತಿರುವುದರಿಂದ ಈಗಾಗಲೇ ನೂರಾರು ರೈತರುಗಳು ಬೆಳೆಗಳನ್ನೇ ಉತ್ತುಹಾಕುತ್ತಿದ್ದಾರೆ. ಮತ್ತೆ ಕೆಲವರು ಔಷಧಗಳನ್ನು ಸಿಂಪಡಿಸುತ್ತಿದ್ದಾರೆ. ಕಳೆದ ಬಾರಿಯೂ ಮುಸುಕಿನ ಜೋಳಕ್ಕೆ ಇದೇ ರೀತಿ ಕೀಟಬಾಧೆ ಮತ್ತು ರೋಗಬಾಧೆ ಕಾಣಿಸಿಕೊಂಡು ಬೆಳೆಗಳು ನಾಶವಾಗಿದ್ದರಿಂದ ಸರ್ಕಾರ ಮತ್ತು ಕೃಷಿ ಅಧಿಕಾರಿಗಳು ಹಾಗೂ ವಿಜ್ಞಾನಿಗಳು ಮುಸುಕಿನ ಜೋಳದ ಬಿತ್ತನೆ ಬೀಜಕ್ಕೆ ಮತ್ತಷ್ಟು ಉಪಚಾರ ಮತ್ತು ರೋಗನಿರೋಧಕ ಶಕ್ತಿಯನ್ನು ಒಳಗೊಂಡ ರಾಸಾಯನಿಕಗಳನ್ನು ಮಿಶ್ರಣ ಮಾಡಿ ಮಾರಾಟ ಮಾಡಿಸಿದ್ದರು.

ಹಾಗಿದ್ದರೂ ಈ ಬಾರಿಯೂ ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆದ ಮುಸುಕಿನ ಜೋಳಕ್ಕೆ ಕೀಟ ಬಾಧೆ ಕಾಣಿಸಿಕೊಂಡು ನೂರಾರು ರೈತರ ಬದುಕು ಬೀದಿ ಪಾಲಾಗುತ್ತಿದೆ. ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು, ಸಚಿವರಾದ ಯತೀಂದ್ರ ಸಿದ್ದರಾಮಯ್ಯ, ಸಂಸದ ಸುನಿಲ್ ಬೋಸ್, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಕೃಷಿಇಲಾಖೆ ಜಂಟಿ ನಿರ್ದೇಶಕ ರವಿ ಮತ್ತು ವಿಜ್ಞಾನಿಗಳು ಈ ಬಗ್ಗೆ ಕ್ರಮ ಕೈಗೊಂಡು ರೈತರನ್ನು ಸಂಕಷ್ಟದಿಂದ ಕಾಪಾಡಲು ಮುಂದಾಗಬೇಕಿದೆ.

” ತಾಲ್ಲೂಕಿನಲ್ಲಿ ಮುಸುಕಿನ ಜೋಳ ಬೆಳೆಯಲ್ಲಿ ಕಾಣಿಸಿಕೊಂಡಿರುವ ಬೂಜುರೋಗ /ಬಿಳಿ ಸುಳಿರೋಗವನ್ನು ಪರಿಶೀಲಿಸಿ, ರೈತರೊಂದಿಗೆ ಸಂವಾದ ನಡೆಸಿ, ರೋಗದ ನಿಯಂತ್ರಣ ಕ್ರಮಗಳು, ಬೆಳೆ ನಿರ್ವಹಣೆ ಹಾಗೂ ಅಗತ್ಯ ಮುಂಜಾಗ್ರತಾ ಕ್ರಮಗಳ ಕುರಿತು ಸಲಹೆ ಹಾಗೂ ಸೂಚನೆಗಳನ್ನು ನೀಡಲು ಮಂಡ್ಯ ವಿ.ಸಿ. ಫಾರಂನ ಕೃಷಿ ವಿಜ್ಞಾನಿಗಳಾದ ಡಾ. ಮಹದೇವ್, ಡಾ.ಮಲ್ಲಿಕಾರ್ಜುನ್, ಕೃಷಿ ಇಲಾಖೆ ಉಪ ನಿರ್ದೇಶಕರಾದ ಧನಂಜಯ್, ಸಹಾಯಕ ಕೃಷಿ ನಿರ್ದೇಶಕರಾದ ಪ್ರಸಾದ್, ಕೃಷಿ ಅಧಿಕಾರಿಗಳಾದ ಸಿದ್ದಪ್ಪ ಸ್ವಾಮಿ, ಪ್ರವೀಣ್ ಅವರ ನಿಯೋಗಕ್ಕೆ ತಿಳಿಸಲಾಗಿದೆ. ಈ ಕುರಿತು ರೈತರು ಜಾಗೃತರಾಗಬೇಕಾಗಿದೆ.”

-ಪ್ರಸಾದ್ ಅರಸ್, ಸಹಾಯಕ ಕೃಷಿ ನಿರ್ದೇಶಕರು

” ೧೨ ಎಕರೆ ಪ್ರದೇಶದಲ್ಲಿ ಮುಸುಕಿನ ಜೋಳ ಬೆಳೆ ಬೆಳೆದಿದ್ದು, ಯಾವುದೇ ಔಷಧಗಳನ್ನು ಸಿಂಪಡಿಸಿದರೂ ರೋಗ ಮತ್ತು ಕೀಟಬಾಧೆ ನಿಯಂತ್ರಣವಾಗಿಲ್ಲ. ಹೀಗಾಗಿ ಸಂಪೂರ್ಣವಾಗಿ ಬೆಳೆಯನ್ನು ಹುತ್ತುಹಾಕಿದ್ದೇನೆ. ಲಕ್ಷಾಂತರ ರೂಪಾಯಿ ನಷ್ಟವಾಗಿದೆ.”

-ಸುರೇಂದ್ರ, ರೈತ, ಕೋಳಗಾಲ

 

 

ಆಂದೋಲನ ಡೆಸ್ಕ್

Recent Posts

ಕೊಡಗಿನಲ್ಲಿ ಹೆಚ್‌ಪಿವಿ ಲಸಿಕೆ ಪಡೆಯಲು ಹಿಂದೇಟು

ನವೀನ್ ಡಿಸೋಜ ಜಿಲ್ಲೆಯಲ್ಲಿ ಶೇ.೩೦.೮೫ರಷ್ಟು ಮಂದಿಗೆ ಮಾತ್ರ ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಕಡ್ಡಾಯ: ಆರೋಗ್ಯ ಇಲಾಖೆ ಮನವಿ…

1 hour ago

ರಾಷ್ಟ್ರೀಯ ಕೆಟಲ್‌ಬಾಲ್ ಟೂರ್ನಿಯಲ್ಲಿ ಮಿಂಚಿದ ಪ್ರತಿಭೆಗಳು

ಹೇಮಂತ್‌ಕುಮಾರ್ ೧೦ ಚಿನ್ನ, ೬ ಬೆಳ್ಳಿ, ೩ ಕಂಚಿನ ಪದಕಗಳನ್ನು ಬಾಚಿದ ಆಕ್ಸ್‌ಫರ್ಡ್ ಅಕಾಡೆಮಿ ಮಂಡ್ಯ: ಪರಿಶ್ರಮವಿದ್ದೆಡೆ ಸಾಧನೆ ಸಾಧ್ಯ ಎಂಬುದಕ್ಕೆ ಶ್ರೀರಂಗಪಟ್ಟಣ…

1 hour ago

ಕಾವೇರಿ ನದಿಗಿಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆ

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…

10 hours ago

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

12 hours ago

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

14 hours ago