Andolana originals

ನಕ್ಸಲ್ ರವಿ ಪತ್ತೆಗೆ ಮಾರುವೇಷದ ಕಾರ್ಯಾಚರಣೆ ಯಶಸ್ವಿ

ಮಂಜು ಕೋಟೆ

ಎಚ್. ಡಿ. ಕೋಟೆ: ನಕ್ಸಲ್ ತಂಡದ ನಾಯಕ ಕೋಟೆ ಹೊಂಡಾರಳ್ಳಿ ರವಿ ಪತ್ತೆಗಾಗಿ ಕೋಟೆಯ ಪೊಲೀಸ್ ಪೇದೆ ರಮೇಶ್ ರಾವ್ ಮಾರುವೇಷದಲ್ಲಿ ತಿಂಗಳುಗಟ್ಟಲೆ ಕಾಡಿನಲ್ಲಿ ಓಡಾಡಿಕೊಂಡು ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿದ್ದಾರೆ.

ಕೋಟೆ ಪಟ್ಟಣದ ಹನುಮಂತನಗರದ ನಿವಾಸಿ, ರಾಜ್ಯ ಗುಪ್ತಚರ ಇಲಾಖೆಯ ಸಿಬ್ಬಂದಿ ರಮೇಶ್ ರಾವ್ ಅವರು ಲುಂಗಿ ಧರಿಸಿ, ಗಡ್ಡ ಬಿಟ್ಟು, ಹೆಗಲಿ ಗೊಂದು ಟವೆಲ್ ಹಾಕಿಕೊಂಡು ಸಾಮಾನ್ಯರಂತೆ ವಾರಗಟ್ಟಲೆ ಕೂಲಿ ಮಾಡಿಕೊಂಡು ಅಲ್ಲಿನ ಹಳ್ಳಿಗಳಲ್ಲಿ ಸಂಚರಿಸುತ್ತಾ ನಕ್ಸಲ್ ನಾಯಕನ ಪತ್ತೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಶೃಂಗೇರಿ ಸಮೀಪದ ಕೋಟೆ ಹೊಂಡಾರಳ್ಳಿ ರವಿ ಪತ್ತೆಗೆ ಇವರು ಮಾರುವೇಷದಲ್ಲಿ ಕಾಡಿನಲ್ಲಿರುವ ಒಂಟಿ ಮನೆ ಮನೆಗಳಿಗೆ ತೆರಳಿ ರಹಸ್ಯವಾಗಿ ಶೋಧ ಕಾರ್ಯದಲ್ಲಿ ತೊಡಗಿದ್ದರು. ಕಿಗ್ಗದ ಹುಲ್‌ಗಾರ್ ಬೈಲಿನ ವಾಸಿ ಗುಡಿಗರಡಿ ಅರಣ್ಯದಲ್ಲಿರುವ ಒಂಟಿ ಮನೆಯ ರಮೇಶ್ ಎಂಬವರ ಮನೆಗೆ ಶುಕ್ರವಾರ ರಾತ್ರಿ ಕೋಟೆ ರವಿ ಬರುತ್ತಾನೆ ಎಂಬ ಮಾಹಿತಿ ತಿಳಿದು, ಶರಣಾಗತಿ ಸಮಿತಿ ಸದಸ್ಯರಾದ ಶ್ರೀಪಾಲ್‌ರವರಿಗೆ ಗುಪ್ತಚರ ಅಧಿಕಾರಿಗಳು ಮಾಹಿತಿ ನೀಡಿದ್ದು, ರಮೇಶ್ ರಾವ್‌ರವರು ಕಾಡಿನಲ್ಲಿರುವ ಒಂಟಿ ಮನೆಗೆ ಭಯವಿಲ್ಲದೇ ಹೋಗಿ ರವಿಯನ್ನು ಪತ್ತೆ ಮಾಡಿ ಮಧ್ಯರಾತ್ರಿವರೆಗೆ ಮನವೊಲಿಸಿ, ಶರಣಾಗತಿ ಸಮಿತಿಯ ಶ್ರೀಪಾಲ್‌ರವರಿಗೆ ತಿಳಿಸಿ ಅವರಿಂದಲೂ ಮನವೊಲಿಕೆ ಯತ್ನ ನಡೆಸಿದ್ದರು.

ಸುಮಾರು ೧೦ ದಿನಗಳ ಗುಪ್ತ ಕಾರ್ಯಾ ಚರಣೆಯನ್ನು ಗುಪ್ತಚರ ಇಲಾಖೆಯ ಅಽಕಾರಿ ಗಳು ರಹಸ್ಯವಾಗಿ ನಡೆಸಿದ್ದರು. ಗುಪ್ತಚರ ಇಲಾಖೆಯ ಸಿಬ್ಬಂದಿ, ಮೈಸೂರಿನ ಎಚ್. ಡಿ. ಕೋಟೆಯ ರಮೇಶ್ ರಾವ್, ಶ್ರೀಪಾಲ ಮತ್ತು ಅಧಿಕಾರಿ ಗಿರೀಶ್‌ರವರು ಚಿಕ್ಕಮಗಳೂರಿನ ಜಿಲ್ಲಾಡಳಿತದ ಮುಂದೆ ಕೋಟೆ ಹೊಂಡಾರಳ್ಳಿ ರವಿಯನ್ನು ಕರೆದುಕೊಂಡು ಹೋಗಿ ಶರಣಾಗತಿ ಮಾಡಿಸಿದ್ದಾರೆ.

ರಮೇಶ್ ರಾವ್ ಮತ್ತು ಸಿಬ್ಬಂದಿ ಸೇವೆಗೆ ಶ್ಲಾಘನೆ ವ್ಯಕ್ತವಾಗಿದೆ. ಎಚ್. ಡಿ. ಕೋಟೆ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅನೇಕ ದರೋಡೆ, ಕೊಲೆ, ಕಳ್ಳತನ ಇನ್ನಿತರ ಪ್ರಕರಣಗಳನ್ನು ಭೇದಿಸಿ ಆರೋಪಿಗಳನ್ನು ಪತ್ತೆ ಮಾಡಿದ್ದರು. ಕೆಲಸದಲ್ಲಿ ಬಹಳ ನಿಷ್ಠೆ, ಶ್ರದ್ಧೆ ಹೊಂದಿರುವ ರಮೇಶ್ ರಾವ್ ಅವರಿಗೆ ಹತ್ತು ವರ್ಷಗಳ ಹಿಂದೆಯೇ ಮುಖ್ಯಮಂತ್ರಿಗಳ ಚಿನ್ನದ ಚಿನ್ನದ ಪದಕ ಲಭಿಸಿತ್ತು. ಈಗ ಮತ್ತೊಂದು ಸಾಧನೆ ಮಾಡಿರುವುದು ತಾಲ್ಲೂಕಿಗೆ ಹೆಮ್ಮೆಯ ಸಂಗತಿ ಎನ್ನುತ್ತಾರೆ ಅವರ ಪರಿಚಿತರು.

ಸರ್ಕಾರಿ ಹುದ್ದೆ ಅದರಲ್ಲೂ ಪೊಲೀಸ್ ಹುದ್ದೆ ಸಿಕ್ಕಿರುವುದು ಅದೃಷ್ಟ. ಕೋಟೆಯಲ್ಲಿ ಕೆಲಸ ಮಾಡುತ್ತಿದ್ದಾಗಲೂ ಉತ್ತಮವಾಗಿ ಸೇವೆ ಸಲ್ಲಿಸಿದ ತೃಪ್ತಿ ಇತ್ತು. ಈಗ ನಕ್ಸಲ್ ಕಾರ್ಯಾಚರಣೆಯಲ್ಲೂ ಪ್ರಾಮಾಣಿಕವಾಗಿ ಕೆಲಸ ಮಾಡಿ ಯಶಸ್ವಿಯಾಗಿದ್ದೇವೆ. ಪ್ರಾಮಾಣಿಕತೆಯಿಂದ ಕೆಲಸ ಮಾಡಿದರೆ ಯಶಸ್ಸು ಸಿಕ್ಕೇ ಸಿಗುತ್ತದೆ. -ರಮೇಶ್ ರಾವ್, ಗುಪ್ತಚರ ಇಲಾಖೆಯ ಸಿಬ್ಬಂದಿ

ಆಂದೋಲನ ಡೆಸ್ಕ್

Recent Posts

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

3 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

5 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

6 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

7 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

11 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

11 hours ago