Andolana originals

ದೀಪಾವಳಿ: ಈ ಬಾರಿ ಪಟಾಕಿ ಮಾರಾಟ ಕುಸಿತ

ವ್ಯಾಪಾರಕ್ಕೆ ಮಂದ ಬೆಳಕು; ಜಾಗೃತಿ ಹಿನ್ನೆಲೆಯಲ್ಲಿ ಖರೀದಿಸಲು ಆಸಕ್ತಿ ತೋರದ ಜನರು 

ಭಾರತೀನಗರ: ಪಟಾಕಿ ಸಿಡಿತದಿಂದ ಉಂಟಾಗುವ ಅನಾಹುತಗಳ ಬಗ್ಗೆ ನಿರಂತರವಾಗಿ ಜನಜಾಗೃತಿ ಮೂಡಿಸುವ ಜಾಹೀರಾತುಗಳಿಂದ ಬೆಳಕಿನ ಹಬ್ಬ ದೀಪಾವಳಿಯಲ್ಲಿ ಪಟಾಕಿ ಸಿಡಿಸುವ ಸಂಭ್ರಮ ಗಣನೀಯವಾಗಿ ಕುಸಿದಿದೆ.

ಪ್ರತಿ ವರ್ಷವೂ ಭಾರತೀನಗರ ಪಟ್ಟಣದಲ್ಲಿ ವ್ಯಾಪಾರ ಬಲು ಜೋರಾಗಿ ನಡೆಯುತ್ತಿತ್ತು. ಆದರೆ ಈ ಬಾರಿ ಪಟ್ಟಣದಿಂದ ೧.೫ ಕಿ.ಮೀ. ದೂರದ ಮೆಳ್ಳಹಳ್ಳಿಯ ಬಳಿ ಜಿಲ್ಲಾಡಳಿತದ ಆದೇಶದ ಮೇರೆಗೆ ಪಟಾಕಿ ಮಾರಾಟದ ಮಳಿಗೆಗಳನ್ನು ಇಡಲಾಗಿದ್ದು, ಇದು ಹಸಿರು ಪಟಾಕಿಗೆ ಮಾತ್ರ ಸೀಮಿತವಾಗಿದೆ.

ಮದ್ದೂರು-ಮಳವಳ್ಳಿ ಸೇರಿದಂತೆ ವಿವಿಧೆಡೆ ವಿವಿಧ ಅಂಗಡಿ ಮಾಲೀಕರ ನಿರೀಕ್ಷೆಗೆ ತಕ್ಕಂತೆ ವ್ಯಾಪಾರವಾಗದೆ ಶೇ.೫೦ರಷ್ಟು ಕುಸಿತ ಕಂಡಿದೆ. ಕೆಲವರು ಮಕ್ಕಳನ್ನು ಸಂತೋಷಪಡಿಸಲು ಅಪಾಯಕಾರಿಯಲ್ಲದ ಸಣ್ಣಪುಟ್ಟ ಪಟಾಕಿಗಳನ್ನು ಖರೀದಿಸುತ್ತಿರುವುದು ಕಂಡುಬಂದಿತು.

ಅಂಗಡಿ ಮಾಲೀಕರ ನಿರೀಕ್ಷೆಯಷ್ಟು ಜನರು ಪಟಾಕಿ ಕೊಂಡುಕೊಳ್ಳದ ಕಾರಣ ಪಟಾಕಿಗಳ ಸದ್ದು, ಗದ್ದಲ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಾ ಬರುತ್ತಿದೆ. ದೀಪಾವಳಿ ಶಬ್ದಮಾಲಿನ್ಯ ಮುಕ್ತವಾಗಬೇಕೆಂಬ ಅರಿವು ಎಲ್ಲೆಡೆ ಹೆಚ್ಚಾಗುತ್ತಿರುವುದರಿಂದ ಪಟಾಕಿಗಳ ಖರೀದಿಗೆ ಜನರು ಹಿಂದೇಟು ಹಾಕುತ್ತಿದ್ದಾರೆ.

ಪರಿಸರಕ್ಕೆ ಮಾರಕವಾಗಿರುವ ಹಾಗೂ ಪ್ರಾಣಿ-ಪಕ್ಷಿಗಳಿಗೆ ಕಿರಿಕಿರಿಯಾಗುವ ಪಟಾಕಿಗಳನ್ನು ಮಾರಾಟ ಮಾಡದಂತೆ ಜಿಲ್ಲಾಡಳಿತ ಸೂಚಿಸಿದೆ. ಎಲ್ಲೆಡೆ ಈ ಬಾರಿ ಪಟಾಕಿಗಳ ಅಬ್ಬರವಿಲ್ಲದೆ, ಜನರು ಮನೆಗಳಲ್ಲೇ ಹಣತೆ ಹಚ್ಚುವ ಮೂಲಕ ದೀಪಾವಳಿ ಆಚರಿಸುತ್ತಿದ್ದಾರೆ. ಹಾಗಾಗಿ ಮಕ್ಕಳ ದೃಷ್ಟಿಯಲ್ಲಿ ಪಟಾಕಿ ಹಬ್ಬವೆಂದೇ ಕರೆಯಲಾಗುವ ದೀಪಾವಳಿ ಈ ಬಾರಿ ಕಳೆಗುಂದಿದೆ.

ಇದನ್ನು ಓದಿ: ದೀಪಾವಳಿ ಜಾತ್ರೆ: ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ

ಅಗತ್ಯ ವಸ್ತುಗಳ ಬೆಲೆ ಏರಿಕೆಯ ನಡುವೆಯೂ ದೀಪಾವಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸುತ್ತಿರುವ ಜನತೆ ಪಟಾಕಿಗಳತ್ತ ಹೆಚ್ಚು ಮುಖ ಮಾಡದಿರುವುದು ಪಟಾಕಿ ವ್ಯಾಪಾರಸ್ಥರಲ್ಲಿ ಅಸಮಾಧಾನ ಮೂಡಿಸಿದೆ. ಅದರಲ್ಲೂ ಪಟಾಕಿ ವ್ಯಾಪಾರಿಗಳ ಉತ್ಸಾಹಕ್ಕೆ ಈ ಬಾರಿ ತಣ್ಣೀರೆರಚಿದಂತಾಗಿದೆ. ಲಾಭಗಳಿಸುವುದಿರಲಿ, ಹಾಕಿದ ಬಂಡವಾಳವೂ ಇಲ್ಲದಂತಾಗಿದೆ.

ಹೊರರಾಜ್ಯಗಳಿಂದ ಪಟಾಕಿಗಳನ್ನು ತಂದು ವ್ಯಾಪಾರ ಮಾಡುತ್ತಿರುವ ಮಾಲೀಕರು ಪಟಾಕಿಗಳನ್ನು ಹೆಚ್ಚಾಗಿ ಕೊಂಡುಕೊಳ್ಳದ ಕಾರಣ ನಷ್ಟ ಅನುಭವಿಸಬೇಕಾಗಿದೆ. ತಂದ ಬೆಲೆಗೆ ಮಾರಾಟ ಮಾಡಬೇಕಿದೆ ಎನ್ನುತ್ತಾರೆ ಸೌಭಾಗ್ಯ ಟ್ರೇಡರ‍್ಸ್ ಪಟಾಕಿ ಮಳಿಗೆಯ ಮಾಲೀಕ ವಿ.ರಾಘು ಹಾಗೂ ಪಟಾಕಿ ವ್ಯಾಪಾರಿ ಧನಪಾಲ್‌ಶೆಟ್ಟಿ. ವರ್ಷದಿಂದ ವರ್ಷಕ್ಕೆ ಹೋಲಿಸಿದರೆ ಪಟಾಕಿಯಿಂದ ಸಂಭವಿಸಿದ ಹಾನಿ ಪ್ರಮಾಣ  ಕಡಿಮೆಗೊಳ್ಳುತ್ತಿದೆ ಎನ್ನುತ್ತಾರೆ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಅರ್ಜುನ್ ಕುಮಾರ್.

” ಪಟಾಕಿಗಳನ್ನು ಸಿಡಿಸುವುದರಿಂದ ಮನಸ್ಸಿಗೆ ಖುಷಿ ತರಬಹುದು. ಆದರೆ, ಅದೇ ಪಟಾಕಿಯಿಂದ ಪರಿಸರ ನಾಶಗೊಳ್ಳುತ್ತದೆ. ಇದರಿಂದ ಉಂಟಾಗುವ ಸಮಸ್ಯೆಗಳು ಕೆಲವು ಪ್ರತ್ಯಕ್ಷವಾದರೆ ಹಲವು ಪರೋಕ್ಷವಾಗಿ ಪರಿಣಾಮ ಬೀರುತ್ತವೆ. ಆದ್ದರಿಂದ ಎಲ್ಲರೂ ಪರಿಸರ ಪ್ರೇಮಿಗಳಾಗಿ ಅತ್ಯಮೂಲ್ಯವಾದ ಪರಿಸರವನ್ನು ಉಳಿಸಿ ಬೆಳೆಸಲು ಪಣತೊಡಬೇಕು.”

-ಡಿ.ಸಿ.ತಮ್ಮಣ್ಣ, ಮಾಜಿ ಸಚಿವರು

” ಪ್ರತಿ ವರ್ಷವೂ ತಮಿಳುನಾಡಿನಿಂದ ಪಟಾಕಿಗಳನ್ನು ತಂದು ವ್ಯಾಪಾರ ಮಾಡುತ್ತಿದ್ದೆ. ಕಳೆದ ಎರಡು ಮೂರು ವರ್ಷಗಳಿಗಿಂತ ಶೇ.೫೦ರಷ್ಟು ವ್ಯಾಪಾರ ಕುಸಿತ ಕಂಡಿದೆ.”

-ವಿ.ರಾಘು, ಪಟಾಕಿ ಸ್ಟಾಲ್ ಮಾಲೀಕ

ಅಣ್ಣೂರು ಸತೀಶ್

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

7 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

7 hours ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

9 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

9 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

10 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

10 hours ago