Andolana originals

ದೀಪಾವಳಿ: ಈ ಬಾರಿ ಪಟಾಕಿ ಮಾರಾಟ ಕುಸಿತ

ವ್ಯಾಪಾರಕ್ಕೆ ಮಂದ ಬೆಳಕು; ಜಾಗೃತಿ ಹಿನ್ನೆಲೆಯಲ್ಲಿ ಖರೀದಿಸಲು ಆಸಕ್ತಿ ತೋರದ ಜನರು 

ಭಾರತೀನಗರ: ಪಟಾಕಿ ಸಿಡಿತದಿಂದ ಉಂಟಾಗುವ ಅನಾಹುತಗಳ ಬಗ್ಗೆ ನಿರಂತರವಾಗಿ ಜನಜಾಗೃತಿ ಮೂಡಿಸುವ ಜಾಹೀರಾತುಗಳಿಂದ ಬೆಳಕಿನ ಹಬ್ಬ ದೀಪಾವಳಿಯಲ್ಲಿ ಪಟಾಕಿ ಸಿಡಿಸುವ ಸಂಭ್ರಮ ಗಣನೀಯವಾಗಿ ಕುಸಿದಿದೆ.

ಪ್ರತಿ ವರ್ಷವೂ ಭಾರತೀನಗರ ಪಟ್ಟಣದಲ್ಲಿ ವ್ಯಾಪಾರ ಬಲು ಜೋರಾಗಿ ನಡೆಯುತ್ತಿತ್ತು. ಆದರೆ ಈ ಬಾರಿ ಪಟ್ಟಣದಿಂದ ೧.೫ ಕಿ.ಮೀ. ದೂರದ ಮೆಳ್ಳಹಳ್ಳಿಯ ಬಳಿ ಜಿಲ್ಲಾಡಳಿತದ ಆದೇಶದ ಮೇರೆಗೆ ಪಟಾಕಿ ಮಾರಾಟದ ಮಳಿಗೆಗಳನ್ನು ಇಡಲಾಗಿದ್ದು, ಇದು ಹಸಿರು ಪಟಾಕಿಗೆ ಮಾತ್ರ ಸೀಮಿತವಾಗಿದೆ.

ಮದ್ದೂರು-ಮಳವಳ್ಳಿ ಸೇರಿದಂತೆ ವಿವಿಧೆಡೆ ವಿವಿಧ ಅಂಗಡಿ ಮಾಲೀಕರ ನಿರೀಕ್ಷೆಗೆ ತಕ್ಕಂತೆ ವ್ಯಾಪಾರವಾಗದೆ ಶೇ.೫೦ರಷ್ಟು ಕುಸಿತ ಕಂಡಿದೆ. ಕೆಲವರು ಮಕ್ಕಳನ್ನು ಸಂತೋಷಪಡಿಸಲು ಅಪಾಯಕಾರಿಯಲ್ಲದ ಸಣ್ಣಪುಟ್ಟ ಪಟಾಕಿಗಳನ್ನು ಖರೀದಿಸುತ್ತಿರುವುದು ಕಂಡುಬಂದಿತು.

ಅಂಗಡಿ ಮಾಲೀಕರ ನಿರೀಕ್ಷೆಯಷ್ಟು ಜನರು ಪಟಾಕಿ ಕೊಂಡುಕೊಳ್ಳದ ಕಾರಣ ಪಟಾಕಿಗಳ ಸದ್ದು, ಗದ್ದಲ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಾ ಬರುತ್ತಿದೆ. ದೀಪಾವಳಿ ಶಬ್ದಮಾಲಿನ್ಯ ಮುಕ್ತವಾಗಬೇಕೆಂಬ ಅರಿವು ಎಲ್ಲೆಡೆ ಹೆಚ್ಚಾಗುತ್ತಿರುವುದರಿಂದ ಪಟಾಕಿಗಳ ಖರೀದಿಗೆ ಜನರು ಹಿಂದೇಟು ಹಾಕುತ್ತಿದ್ದಾರೆ.

ಪರಿಸರಕ್ಕೆ ಮಾರಕವಾಗಿರುವ ಹಾಗೂ ಪ್ರಾಣಿ-ಪಕ್ಷಿಗಳಿಗೆ ಕಿರಿಕಿರಿಯಾಗುವ ಪಟಾಕಿಗಳನ್ನು ಮಾರಾಟ ಮಾಡದಂತೆ ಜಿಲ್ಲಾಡಳಿತ ಸೂಚಿಸಿದೆ. ಎಲ್ಲೆಡೆ ಈ ಬಾರಿ ಪಟಾಕಿಗಳ ಅಬ್ಬರವಿಲ್ಲದೆ, ಜನರು ಮನೆಗಳಲ್ಲೇ ಹಣತೆ ಹಚ್ಚುವ ಮೂಲಕ ದೀಪಾವಳಿ ಆಚರಿಸುತ್ತಿದ್ದಾರೆ. ಹಾಗಾಗಿ ಮಕ್ಕಳ ದೃಷ್ಟಿಯಲ್ಲಿ ಪಟಾಕಿ ಹಬ್ಬವೆಂದೇ ಕರೆಯಲಾಗುವ ದೀಪಾವಳಿ ಈ ಬಾರಿ ಕಳೆಗುಂದಿದೆ.

ಇದನ್ನು ಓದಿ: ದೀಪಾವಳಿ ಜಾತ್ರೆ: ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ

ಅಗತ್ಯ ವಸ್ತುಗಳ ಬೆಲೆ ಏರಿಕೆಯ ನಡುವೆಯೂ ದೀಪಾವಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸುತ್ತಿರುವ ಜನತೆ ಪಟಾಕಿಗಳತ್ತ ಹೆಚ್ಚು ಮುಖ ಮಾಡದಿರುವುದು ಪಟಾಕಿ ವ್ಯಾಪಾರಸ್ಥರಲ್ಲಿ ಅಸಮಾಧಾನ ಮೂಡಿಸಿದೆ. ಅದರಲ್ಲೂ ಪಟಾಕಿ ವ್ಯಾಪಾರಿಗಳ ಉತ್ಸಾಹಕ್ಕೆ ಈ ಬಾರಿ ತಣ್ಣೀರೆರಚಿದಂತಾಗಿದೆ. ಲಾಭಗಳಿಸುವುದಿರಲಿ, ಹಾಕಿದ ಬಂಡವಾಳವೂ ಇಲ್ಲದಂತಾಗಿದೆ.

ಹೊರರಾಜ್ಯಗಳಿಂದ ಪಟಾಕಿಗಳನ್ನು ತಂದು ವ್ಯಾಪಾರ ಮಾಡುತ್ತಿರುವ ಮಾಲೀಕರು ಪಟಾಕಿಗಳನ್ನು ಹೆಚ್ಚಾಗಿ ಕೊಂಡುಕೊಳ್ಳದ ಕಾರಣ ನಷ್ಟ ಅನುಭವಿಸಬೇಕಾಗಿದೆ. ತಂದ ಬೆಲೆಗೆ ಮಾರಾಟ ಮಾಡಬೇಕಿದೆ ಎನ್ನುತ್ತಾರೆ ಸೌಭಾಗ್ಯ ಟ್ರೇಡರ‍್ಸ್ ಪಟಾಕಿ ಮಳಿಗೆಯ ಮಾಲೀಕ ವಿ.ರಾಘು ಹಾಗೂ ಪಟಾಕಿ ವ್ಯಾಪಾರಿ ಧನಪಾಲ್‌ಶೆಟ್ಟಿ. ವರ್ಷದಿಂದ ವರ್ಷಕ್ಕೆ ಹೋಲಿಸಿದರೆ ಪಟಾಕಿಯಿಂದ ಸಂಭವಿಸಿದ ಹಾನಿ ಪ್ರಮಾಣ  ಕಡಿಮೆಗೊಳ್ಳುತ್ತಿದೆ ಎನ್ನುತ್ತಾರೆ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಅರ್ಜುನ್ ಕುಮಾರ್.

” ಪಟಾಕಿಗಳನ್ನು ಸಿಡಿಸುವುದರಿಂದ ಮನಸ್ಸಿಗೆ ಖುಷಿ ತರಬಹುದು. ಆದರೆ, ಅದೇ ಪಟಾಕಿಯಿಂದ ಪರಿಸರ ನಾಶಗೊಳ್ಳುತ್ತದೆ. ಇದರಿಂದ ಉಂಟಾಗುವ ಸಮಸ್ಯೆಗಳು ಕೆಲವು ಪ್ರತ್ಯಕ್ಷವಾದರೆ ಹಲವು ಪರೋಕ್ಷವಾಗಿ ಪರಿಣಾಮ ಬೀರುತ್ತವೆ. ಆದ್ದರಿಂದ ಎಲ್ಲರೂ ಪರಿಸರ ಪ್ರೇಮಿಗಳಾಗಿ ಅತ್ಯಮೂಲ್ಯವಾದ ಪರಿಸರವನ್ನು ಉಳಿಸಿ ಬೆಳೆಸಲು ಪಣತೊಡಬೇಕು.”

-ಡಿ.ಸಿ.ತಮ್ಮಣ್ಣ, ಮಾಜಿ ಸಚಿವರು

” ಪ್ರತಿ ವರ್ಷವೂ ತಮಿಳುನಾಡಿನಿಂದ ಪಟಾಕಿಗಳನ್ನು ತಂದು ವ್ಯಾಪಾರ ಮಾಡುತ್ತಿದ್ದೆ. ಕಳೆದ ಎರಡು ಮೂರು ವರ್ಷಗಳಿಗಿಂತ ಶೇ.೫೦ರಷ್ಟು ವ್ಯಾಪಾರ ಕುಸಿತ ಕಂಡಿದೆ.”

-ವಿ.ರಾಘು, ಪಟಾಕಿ ಸ್ಟಾಲ್ ಮಾಲೀಕ

ಅಣ್ಣೂರು ಸತೀಶ್

ಆಂದೋಲನ ಡೆಸ್ಕ್

Recent Posts

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

17 mins ago

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…

26 mins ago

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌…

39 mins ago

ಭಾರತ-ರಷ್ಯಾ ನಡುವೆ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…

1 hour ago

ವಾಚ್‌ ವಿಚಾರವಾಗಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…

1 hour ago

ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ: ಸಚಿವ ದಿನೇಶ್‌ ಗುಂಡೂರಾವ್‌

ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.…

2 hours ago