Andolana originals

ದೀಪಾವಳಿ: ಈ ಬಾರಿ ಪಟಾಕಿ ಮಾರಾಟ ಕುಸಿತ

ವ್ಯಾಪಾರಕ್ಕೆ ಮಂದ ಬೆಳಕು; ಜಾಗೃತಿ ಹಿನ್ನೆಲೆಯಲ್ಲಿ ಖರೀದಿಸಲು ಆಸಕ್ತಿ ತೋರದ ಜನರು 

ಭಾರತೀನಗರ: ಪಟಾಕಿ ಸಿಡಿತದಿಂದ ಉಂಟಾಗುವ ಅನಾಹುತಗಳ ಬಗ್ಗೆ ನಿರಂತರವಾಗಿ ಜನಜಾಗೃತಿ ಮೂಡಿಸುವ ಜಾಹೀರಾತುಗಳಿಂದ ಬೆಳಕಿನ ಹಬ್ಬ ದೀಪಾವಳಿಯಲ್ಲಿ ಪಟಾಕಿ ಸಿಡಿಸುವ ಸಂಭ್ರಮ ಗಣನೀಯವಾಗಿ ಕುಸಿದಿದೆ.

ಪ್ರತಿ ವರ್ಷವೂ ಭಾರತೀನಗರ ಪಟ್ಟಣದಲ್ಲಿ ವ್ಯಾಪಾರ ಬಲು ಜೋರಾಗಿ ನಡೆಯುತ್ತಿತ್ತು. ಆದರೆ ಈ ಬಾರಿ ಪಟ್ಟಣದಿಂದ ೧.೫ ಕಿ.ಮೀ. ದೂರದ ಮೆಳ್ಳಹಳ್ಳಿಯ ಬಳಿ ಜಿಲ್ಲಾಡಳಿತದ ಆದೇಶದ ಮೇರೆಗೆ ಪಟಾಕಿ ಮಾರಾಟದ ಮಳಿಗೆಗಳನ್ನು ಇಡಲಾಗಿದ್ದು, ಇದು ಹಸಿರು ಪಟಾಕಿಗೆ ಮಾತ್ರ ಸೀಮಿತವಾಗಿದೆ.

ಮದ್ದೂರು-ಮಳವಳ್ಳಿ ಸೇರಿದಂತೆ ವಿವಿಧೆಡೆ ವಿವಿಧ ಅಂಗಡಿ ಮಾಲೀಕರ ನಿರೀಕ್ಷೆಗೆ ತಕ್ಕಂತೆ ವ್ಯಾಪಾರವಾಗದೆ ಶೇ.೫೦ರಷ್ಟು ಕುಸಿತ ಕಂಡಿದೆ. ಕೆಲವರು ಮಕ್ಕಳನ್ನು ಸಂತೋಷಪಡಿಸಲು ಅಪಾಯಕಾರಿಯಲ್ಲದ ಸಣ್ಣಪುಟ್ಟ ಪಟಾಕಿಗಳನ್ನು ಖರೀದಿಸುತ್ತಿರುವುದು ಕಂಡುಬಂದಿತು.

ಅಂಗಡಿ ಮಾಲೀಕರ ನಿರೀಕ್ಷೆಯಷ್ಟು ಜನರು ಪಟಾಕಿ ಕೊಂಡುಕೊಳ್ಳದ ಕಾರಣ ಪಟಾಕಿಗಳ ಸದ್ದು, ಗದ್ದಲ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಾ ಬರುತ್ತಿದೆ. ದೀಪಾವಳಿ ಶಬ್ದಮಾಲಿನ್ಯ ಮುಕ್ತವಾಗಬೇಕೆಂಬ ಅರಿವು ಎಲ್ಲೆಡೆ ಹೆಚ್ಚಾಗುತ್ತಿರುವುದರಿಂದ ಪಟಾಕಿಗಳ ಖರೀದಿಗೆ ಜನರು ಹಿಂದೇಟು ಹಾಕುತ್ತಿದ್ದಾರೆ.

ಪರಿಸರಕ್ಕೆ ಮಾರಕವಾಗಿರುವ ಹಾಗೂ ಪ್ರಾಣಿ-ಪಕ್ಷಿಗಳಿಗೆ ಕಿರಿಕಿರಿಯಾಗುವ ಪಟಾಕಿಗಳನ್ನು ಮಾರಾಟ ಮಾಡದಂತೆ ಜಿಲ್ಲಾಡಳಿತ ಸೂಚಿಸಿದೆ. ಎಲ್ಲೆಡೆ ಈ ಬಾರಿ ಪಟಾಕಿಗಳ ಅಬ್ಬರವಿಲ್ಲದೆ, ಜನರು ಮನೆಗಳಲ್ಲೇ ಹಣತೆ ಹಚ್ಚುವ ಮೂಲಕ ದೀಪಾವಳಿ ಆಚರಿಸುತ್ತಿದ್ದಾರೆ. ಹಾಗಾಗಿ ಮಕ್ಕಳ ದೃಷ್ಟಿಯಲ್ಲಿ ಪಟಾಕಿ ಹಬ್ಬವೆಂದೇ ಕರೆಯಲಾಗುವ ದೀಪಾವಳಿ ಈ ಬಾರಿ ಕಳೆಗುಂದಿದೆ.

ಇದನ್ನು ಓದಿ: ದೀಪಾವಳಿ ಜಾತ್ರೆ: ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ

ಅಗತ್ಯ ವಸ್ತುಗಳ ಬೆಲೆ ಏರಿಕೆಯ ನಡುವೆಯೂ ದೀಪಾವಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸುತ್ತಿರುವ ಜನತೆ ಪಟಾಕಿಗಳತ್ತ ಹೆಚ್ಚು ಮುಖ ಮಾಡದಿರುವುದು ಪಟಾಕಿ ವ್ಯಾಪಾರಸ್ಥರಲ್ಲಿ ಅಸಮಾಧಾನ ಮೂಡಿಸಿದೆ. ಅದರಲ್ಲೂ ಪಟಾಕಿ ವ್ಯಾಪಾರಿಗಳ ಉತ್ಸಾಹಕ್ಕೆ ಈ ಬಾರಿ ತಣ್ಣೀರೆರಚಿದಂತಾಗಿದೆ. ಲಾಭಗಳಿಸುವುದಿರಲಿ, ಹಾಕಿದ ಬಂಡವಾಳವೂ ಇಲ್ಲದಂತಾಗಿದೆ.

ಹೊರರಾಜ್ಯಗಳಿಂದ ಪಟಾಕಿಗಳನ್ನು ತಂದು ವ್ಯಾಪಾರ ಮಾಡುತ್ತಿರುವ ಮಾಲೀಕರು ಪಟಾಕಿಗಳನ್ನು ಹೆಚ್ಚಾಗಿ ಕೊಂಡುಕೊಳ್ಳದ ಕಾರಣ ನಷ್ಟ ಅನುಭವಿಸಬೇಕಾಗಿದೆ. ತಂದ ಬೆಲೆಗೆ ಮಾರಾಟ ಮಾಡಬೇಕಿದೆ ಎನ್ನುತ್ತಾರೆ ಸೌಭಾಗ್ಯ ಟ್ರೇಡರ‍್ಸ್ ಪಟಾಕಿ ಮಳಿಗೆಯ ಮಾಲೀಕ ವಿ.ರಾಘು ಹಾಗೂ ಪಟಾಕಿ ವ್ಯಾಪಾರಿ ಧನಪಾಲ್‌ಶೆಟ್ಟಿ. ವರ್ಷದಿಂದ ವರ್ಷಕ್ಕೆ ಹೋಲಿಸಿದರೆ ಪಟಾಕಿಯಿಂದ ಸಂಭವಿಸಿದ ಹಾನಿ ಪ್ರಮಾಣ  ಕಡಿಮೆಗೊಳ್ಳುತ್ತಿದೆ ಎನ್ನುತ್ತಾರೆ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಅರ್ಜುನ್ ಕುಮಾರ್.

” ಪಟಾಕಿಗಳನ್ನು ಸಿಡಿಸುವುದರಿಂದ ಮನಸ್ಸಿಗೆ ಖುಷಿ ತರಬಹುದು. ಆದರೆ, ಅದೇ ಪಟಾಕಿಯಿಂದ ಪರಿಸರ ನಾಶಗೊಳ್ಳುತ್ತದೆ. ಇದರಿಂದ ಉಂಟಾಗುವ ಸಮಸ್ಯೆಗಳು ಕೆಲವು ಪ್ರತ್ಯಕ್ಷವಾದರೆ ಹಲವು ಪರೋಕ್ಷವಾಗಿ ಪರಿಣಾಮ ಬೀರುತ್ತವೆ. ಆದ್ದರಿಂದ ಎಲ್ಲರೂ ಪರಿಸರ ಪ್ರೇಮಿಗಳಾಗಿ ಅತ್ಯಮೂಲ್ಯವಾದ ಪರಿಸರವನ್ನು ಉಳಿಸಿ ಬೆಳೆಸಲು ಪಣತೊಡಬೇಕು.”

-ಡಿ.ಸಿ.ತಮ್ಮಣ್ಣ, ಮಾಜಿ ಸಚಿವರು

” ಪ್ರತಿ ವರ್ಷವೂ ತಮಿಳುನಾಡಿನಿಂದ ಪಟಾಕಿಗಳನ್ನು ತಂದು ವ್ಯಾಪಾರ ಮಾಡುತ್ತಿದ್ದೆ. ಕಳೆದ ಎರಡು ಮೂರು ವರ್ಷಗಳಿಗಿಂತ ಶೇ.೫೦ರಷ್ಟು ವ್ಯಾಪಾರ ಕುಸಿತ ಕಂಡಿದೆ.”

-ವಿ.ರಾಘು, ಪಟಾಕಿ ಸ್ಟಾಲ್ ಮಾಲೀಕ

ಅಣ್ಣೂರು ಸತೀಶ್

ಆಂದೋಲನ ಡೆಸ್ಕ್

Recent Posts

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

9 mins ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

25 mins ago

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಈಶ್ವರ್‌ ಖಂಡ್ರೆ ಆಯ್ಕೆ

ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ…

47 mins ago

ಜಂಟಿ ಅಧಿವೇಶನದಲ್ಲಿ ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜನವರಿ.22ರಿಂದ ಜನವರಿ.31ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

1 hour ago

ಲಕ್ಕುಂಡಿ ಗ್ರಾಮದಲ್ಲಿ ಬಗೆದಷ್ಟು ಪತ್ತೆಯಾಗುತ್ತಿವೆ ಪುರಾತನ ವಸ್ತುಗಳು

ಗದಗ: ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಬಗೆದಷ್ಟೂ ಪುರಾತನ ವಸ್ತುಗಳು ಪತ್ತೆಯಾಗುತ್ತಲೇ ಇವೆ. ಇದೀಗ ಚೌಕಿಮಠ ಕುಟುಂಬದ ವಾಸದ ಮನೆಯೊಳಗೆ ಅಪರೂಪದ…

1 hour ago

ಹನೂರು| ಕಾಡಾನೆ ದಾಳಿಗೆ ಬೆಳೆ ನಾಶ: ಆತ್ಮಹತ್ಯೆ ಎಚ್ಚರಿಕೆ ನೀಡಿದ ಅನ್ನದಾತ

ಹನೂರು: ಜಮೀನಿನಲ್ಲಿ ಬೆಳೆದಿರುವ ತರಕಾರಿ ಬೆಳೆಗಳನ್ನು ಕಾಡಾನೆಗಳ ಹಿಂಡು ಕಳೆದ ಮೂರು ದಿನಗಳಿಂದ ರಾತ್ರಿ ವೇಳೆ ದಾಳಿ ನಡೆಸಿ ಬೆಳೆ…

2 hours ago