Andolana originals

ಡಿಕೆಶಿ ಬರಿಗೈಲಿ ವಾಪಸ್

ರವಿಚಂದ್ರ ಚಿಕ್ಕೆಂಪಿಹುಂಡಿ

ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ

ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್

ಹೈಕಮಾಂಡ್ ನಾಯಕರಿಂದ ಸಿಗದ ಸ್ಪಷ್ಟತೆ; ಡಿಕೆಶಿಗೆ ನಿರಾಸೆ 

ಬೆಂಗಳೂರು: ನಾಯಕತ್ವದ ಗೊಂದಲ, ಬಣಗಳ ಬಲ ಪ್ರದರ್ಶನದ ನಡುವೆ ಅಧಿಕಾರ ಹಂಚಿಕೆ ವಿಚಾರ ತಾರಕಕ್ಕೆ ಏರಿದ್ದು, ಇದರ ಬೆನ್ನಲ್ಲೆದಿಲ್ಲಿಗೆ ತೆರಳಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ಹಂಚಿಕೆ ವಿಚಾರವನ್ನು ಹೈಕಮಾಂಡ್ ನಾಯಕರ ಬಳಿ ಪ್ರಸ್ತಾಪ ಮಾಡಿಯೂ ಅವರಿಂದ ಯಾವುದೇ ಸ್ಪಷ್ಟ ನಿರ್ದೇಶನ ಸಿಗದೆ ಬರಿಗೈಯಲ್ಲಿ ವಾಪಸ್ ಆಗುವಂತಾಗಿದೆ.

ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿಸಿ, ಹಿಂದೆ ಆಗಿದ್ದ ಒಪ್ಪಂದದಂತೆ ತಮಗೆ ಸಿಎಂ ಹುದ್ದೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದು, ರಾಹುಲ್ ಅವರ ಮಾತು ಡಿ.ಕೆ.ಶಿವಕುಮಾರ್ ಅವರಲ್ಲಿ ನಿರಾಶಾಭಾವ ಮೂಡಿಸಿದೆ.

ಬೆಳಗಾವಿ ಅಧಿವೇಶನ ಮುಗಿಯುವವರೆಗೆ ನಾಯಕತ್ವದ ವಿಚಾರದಲ್ಲಿ ಯಾರೂ ಕೂಡ ಹೇಳಿಕೆಗಳನ್ನು ನೀಡಬಾರದು ಎಂದು ಹೈಕಮಾಂಡ್ ಸೂಚನೆ ನೀಡಿದ್ದರೂ, ಅಧಿವೇಶನದ ನಡುವೆಯೇ ಎರಡೂ ಬಣಗಳ ಡಿನ್ನರ್ ಮೀಟಿಂಗ್, ನಾಯಕತ್ವ ಕುರಿತ ಹೇಳಿಕೆ; ಪ್ರತಿ ಹೇಳಿಕೆಗಳು ಮತ್ತೆ ಕಿಡಿ ಹೊತ್ತಿಸಿದ್ದವು. ಈ ಪರಿಸ್ಥಿತಿಯನ್ನು ಪೂರಕವಾಗಿ ಬಳಸಿಕೊಳ್ಳಲು ಮುಂದಾದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಭಾನುವಾರ ದಿಲ್ಲಿಯಲ್ಲಿ ಎಐಸಿಸಿ ಹಮ್ಮಿ ಕೊಂಡಿದ್ದ ವೋಟ್ ಚೋರಿ ವಿರುದ್ಧದ ಆಂದೋಲನದಲ್ಲಿ ಭಾಗವಹಿಸಿದ್ದಾಗ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆ.

ಇದಕ್ಕೆ ರಾಹುಲ್ ಅವರಿಂದ ತಕ್ಕ ಸ್ಪಂದನೆ ಸಿಗದೆ ನಿರಾಸೆಯಿಂದ ರಾಜ್ಯಕ್ಕೆ ಮರಳಿದ್ದಾರೆ. ದಿಲ್ಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳಿದ್ದ ರಾಜ್ಯ ನಾಯಕರೂ ಸೇರಿದಂತೆ ಕಾಂಗ್ರೆಸ್‌ನ ಪ್ರಮುಖರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೋಜನ ಕೂಟ ಆಯೋಜಿಸಿದ್ದರು. ಅದರಲ್ಲಿ ಆಯ್ದ ನಾಯಕರಿಗೆ ಮಾತ್ರ ಭೋಜನ ಕೂಟಕ್ಕೆ ಆಹ್ವಾನ ನೀಡಲಾಗಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬಿ.ಕೆ. ಹರಿಪ್ರಸಾದ್ ಅವರಿಗೂ ಆಹ್ವಾನ ಇತ್ತು. ಸಿದ್ದರಾಮಯ್ಯ ಅವರು ತಡವಾಗಿ ದೆಹಲಿಗೆ ಆಗಮಿಸಿದ್ದರು. ಡಿ.ಕೆ. ಶಿವಕುಮಾರ್ ಶನಿವಾರವೇ ದಿಲ್ಲಿಗೆ ತೆರಳಿ ತಮ್ಮ ರಾಜಕೀಯ ಚಟುವಟಿಕೆಗಳನ್ನು ಆರಂಭಿಸಿದ್ದರು. ಕರ್ನಾಟಕ ಭವನದಲ್ಲಿ ಹಲವಾರು ಶಾಸಕರು, ಸಚಿವರು ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ಪ್ರತಿಭಟನೆ ಬಳಿಕ ಔತಣ ಕೂಟದಲ್ಲಿ ಭಾಗವಹಿಸಿದ್ದ ಡಿ.ಕೆ.ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಪ್ರಮುಖ ನಾಯಕರನ್ನು ಭೇಟಿ ಮಾಡಿದ್ದರು. ಈ ವೇಳೆ ಡಿ.ಕೆ.ಶಿವಕುಮಾರ್ ಅವರು ತಮ್ಮ ವಾದವನ್ನು ರಾಷ್ಟ್ರ ನಾಯಕರ ಮುಂದೆ ಮಂಡಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ವೇಳೆ ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಮಾತುಕತೆ ನಡೆಸಿದ ಡಿ.ಕೆ.ಶಿವಕುಮಾರ್ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಅಧಿಕಾರ ಹಂಚಿಕೆಯ ಒಪ್ಪಂದವಾಗಿತ್ತು. ಅದರಂತೆ ಮೊದಲರ್ಧ ಅವಧಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದು, ಉಳಿದರ್ಧ ಅವಧಿ ನಾನು ಮುಖ್ಯಮಂತ್ರಿ ಆಗಬೇಕು. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಈಗಾಗಲೇ ಎರಡೂವರೆ ವರ್ಷಗಳು ಕಳೆದಿದ್ದು, ಅಧಿಕಾರ ಹಂಚಿಕೆ ವಿಳಂಬವಾಗುತ್ತಿದೆ. ಹಾಗಾಗಿ ನೀವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕಾರ ಹಂಚಿಕೆ ಬಗ್ಗೆ ತಿಳಿಸಿ ನನಗೆ ಮುಖ್ಯಮಂತ್ರಿ ಹುದ್ದೆ ನೀಡಬೇಕೆಂದು ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇದಕ್ಕೆ ರಾಹುಲ್ ಗಾಂಧಿ ಅವರು, ಅಧಿಕಾರ ಹಂಚಿಕೆ ಬಗ್ಗೆ ನನಗೆ ಗೊತ್ತಿಲ್ಲ. ಅಧಿಕಾರ ಹಂಚಿಕೆ ವಿಚಾರ ಯಾವ ನಾಯಕರ ಮಧ್ಯೆ ಆಗಿದೆ ಎಂಬುದು ನನಗೆ ತಿಳಿದಿಲ್ಲ. ಹಾಗಾಗಿ ಅಧಿಕಾರ ಹಂಚಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಈ ಕ್ಷಣದಲ್ಲಿ ಮಾತನಾಡುವುದು ಸೂಕ್ತವಲ್ಲ ಎಂದು ತಿಳಿಸಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ. ಸದ್ಯ ನಾವು ಜರ್ಮನಿಗೆ ತೆರಳುತ್ತಿದ್ದು, ಈಗ ಮಾತ ನಾಡುವುದು ಬೇಡ. ಡಿ.೨೦ಕ್ಕೆ ಜರ್ಮನಿಯಿಂದ ವಾಪಸಾ ಗುತ್ತೇನೆ. ಬಳಿಕ ಈ ವಿಚಾರದ ಬಗ್ಗೆ ಮಾತನಾಡೋಣ ಎಂದು ರಾಹುಲ್ ಹೇಳಿರುವುದಾಗಿ ಮೂಲಗಳು ತಿಳಿಸಿವೆ.

ಇದ ರಿಂದ ಡಿ.ಕೆ.ಶಿವಕುಮಾರ್ ಅವರ ಸಿಎಂ ಕನಸಿಗೆ ಸದ್ಯಕ್ಕೆ ತಣ್ಣೀರು ಬಿದ್ದಿರುವುದಲ್ಲದೆ, ಅಧಿಕಾರ ಹಂಚಿಕೆ ವಿಚಾರ ಮತ್ತಷ್ಟು ವಿಳಂಬವಾಗಲಿದ್ದು, ಡಿಕೆಶಿ ಅವರಲ್ಲಿ ನಿರಾಶಾಭಾವ ಮೂಡಿದೆ.

ಡಿಕೆಶಿ ಹೇಳಿದ್ದೇನು?: 

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಅಧಿಕಾರ ಹಂಚಿಕೆಯ ಒಪ್ಪಂದವಾಗಿತ್ತು. ಅದರಂತೆ ಮೊದಲರ್ಧ ಅವಧಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗುವುದು, ಉಳಿದರ್ಧ ಅವಧಿ ನಾನು ಮುಖ್ಯಮಂತ್ರಿ ಆಗಬೇಕು. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಈಗಾಗಲೇ ಎರಡೂವರೆ ವರ್ಷಗಳು ಕಳೆದಿದ್ದು, ಅಧಿಕಾರ ಹಂಚಿಕೆ ವಿಳಂಬವಾಗುತ್ತಿದೆ. ಹಾಗಾಗಿ ನೀವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕಾರ ಹಂಚಿಕೆ ಬಗ್ಗೆ ತಿಳಿಸಿ ನನಗೆ ಸಿಎಂ ಹುದ್ದೆ ನೀಡಬೇಕೆಂದು ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ರಾಹುಲ್ ಹೇಳಿದ್ದೇನು?: 

ಬೆಂಗಳೂರು: ಅಧಿಕಾರ ಹಂಚಿಕೆ ಬಗ್ಗೆ ನನಗೆ ಗೊತ್ತಿಲ್ಲ. ಅಧಿಕಾರ ಹಂಚಿಕೆ ವಿಚಾರ ಯಾವ ನಾಯಕರ ಮಧ್ಯೆ ಆಗಿದೆ ಎಂಬುದು ನನಗೆ ತಿಳಿದಿಲ್ಲ. ಹಾಗಾಗಿ ಅಧಿಕಾರ ಹಂಚಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಈ ಕ್ಷಣದಲ್ಲಿ ಮಾತನಾಡುವುದು ಸೂಕ್ತವಲ್ಲ. ಸದ್ಯ ನಾನು ಜರ್ಮನಿಗೆ ತೆರಳುತ್ತಿದ್ದು, ಈಗ ಮಾತನಾಡುವುದು ಬೇಡ. ಡಿ.೨೦ಕ್ಕೆ ಜರ್ಮನಿಯಿಂದ ವಾಪಸಾಗುತ್ತೇನೆ. ಬಳಿಕ ಈ ವಿಚಾರದ ಬಗ್ಗೆ ಮಾತನಾಡೋಣ ಎಂದು ರಾಹುಲ್ ಗಾಂಽ ಹೇಳಿರುವುದಾಗಿ ಮೂಲಗಳು ತಿಳಿಸಿವೆ.

 

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

6 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

6 hours ago

ಎರಡನೇ ಆಷಾಢ ಶುಕ್ರವಾರದ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…

1 day ago