DK Shivakumar
ಕುಟುಂಬದವರೊಡನೆ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಉಪ ಮುಖ್ಯಮಂತ್ರಿ
ಮಂಜು ಕೋಟೆ
ಎಚ್. ಡಿ. ಕೋಟೆ: ತಾಲ್ಲೂಕಿನ ಸಂಬಂಧಿಕರ ರೆಸಾರ್ಟ್ ನಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಕುಟುಂಬ ಸಮೇತವಾಗಿ ಆಗಮಿಸಿ ತಮ್ಮ ಹುಟ್ಟುಹಬ್ಬ ವನ್ನು ಸರಳವಾಗಿ ಆಚರಿಸಿಕೊಂಡರು.
ರಾಜಕೀಯ, ಅಧಿಕಾರದ ಒತ್ತಡಗಳ ನಡುವೆಯೂ ಮೂರು ದಿನಗಳ ಕಾಲ ತಮ್ಮ ಹುಟ್ಟುಹಬ್ಬದ ನಿಮಿತ್ತ ಕುಟುಂಬಸ್ಥರೊಡನೆ ಕಾಲ ಕಳೆಯಲು ತಾಲ್ಲೂಕಿನ ಕಾರಾಪುರ ಸಮೀಪದ ಸೆರಾಯಿ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿದ್ದಾರೆ.
ಬುಧವಾರ ಸಂಜೆ ಡಿ. ಕೆ. ಶಿವಕುಮಾರ್ ಅವರು ತಮ್ಮ ಪತ್ನಿ, ಮಗಳು, ಅಳಿಯ ಹಾಗೂ ಕುಟುಂಬಸ್ಥರೊಡನೆ ರೆಸಾರ್ಟ್ನಲ್ಲಿ ಉಳಿದಿದ್ದು, ಗುರುವಾರ ಬೆಳಿಗ್ಗೆ ಜಂಗಲ್ ಲಾಡ್ಜ್ ನ ವಾಹನಗಳಲ್ಲಿ ನಾಗರಹೊಳೆ ಅಭಯಾರಣ್ಯದ ದಮ್ಮನಕಟ್ಟೆಯ ಸಫಾರಿ ವಲಯವನ್ನು ವೀಕ್ಷಣೆ ಮಾಡಿದ್ದಾರೆ.
ಈ ವೇಳೆ ಹುಲಿ, ಚಿರತೆ, ಆನೆ, ಜಿಂಕೆ, ಕಡವೆ ಇನ್ನಿತರ ಪ್ರಾಣಿಗಳು ಕಾಣಿಸಿಕೊಂಡಾಗ ಖುಷಿ ವ್ಯಕ್ತಪಡಿಸಿದ್ದಾರೆ.
ಅರಣ್ಯದ ಉತ್ತಮವಾದ ವಾತಾವರಣ ನೋಡಿ ಎಲ್ಲರೂ ಖುಷಿಪಟ್ಟಿದ್ದಾರೆ. ಸಂಜೆ ಕಬಿನಿ ಹಿನ್ನೀರಿನಲ್ಲಿ ಬೋಟ್ ಸಫಾರಿ ನಡೆಸಿ ಆನಂದಪಟ್ಟಿದ್ದಾರೆ.
ತದನಂತರ ಕುಟುಂಬಸ್ಥರು ಡಿ. ಕೆ. ಶಿವಕುಮಾರ್ ಅವರ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿದರು. ತೆರೆದ ವಾಹನದಲ್ಲಿ ಸಫಾರಿಗೆ ಹೋಗುತ್ತಿದ್ದಾಗ ಅಕ್ಕ ಪಕ್ಕದ ಗ್ರಾಮಸ್ಥರು, ನಿವಾಸಿಗಳು ಡಿ. ಕೆ. ಶಿವಕುಮಾರ್ ಅವರಿಗೆ ಜೈಕಾರ ಕೂಗಿ ಮುಂದಿನ ಮುಖ್ಯಮಂತ್ರಿ ನೀವೇ ಎಂದು ಘೋಷಣೆ ಕೂಗಿದರು. ಈ ವೇಳೆ ಡಿಕೆಶಿ ಎಲ್ಲರತ್ತ ಕೈ ಬೀಸಿ ವಿಶ್ ಮಾಡಿದರು.
ಡಿ. ಕೆ. ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಆದ ನಂತರ ತಮ್ಮ ಕುಟುಂಬ ಸಮೇತವಾಗಿ ತಾಲ್ಲೂಕಿನಲ್ಲಿ ಮೂರು ದಿನಗಳ ಕಾಲ ವಾಸ್ತವ್ಯ ಹೂಡಿರುವುದು ಇದೇ ಮೊದಲು.
ಈ ವರ್ಷ ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿ ಕಬಿನಿಯಲ್ಲಿ ಕಾಲ ಕಳೆಯುವ ಮೂಲಕ ಆಚರಿಸಿದೆ. ಪ್ರಕೃತಿಯೊಂದಿಗೆ ಒಂದಾದ ಭಾವ, ಕಬಿನಿಯ ಸೌಂದರ್ಯ, ವನ್ಯ ಸಂಪತ್ತನ್ನು ಕಣ್ತುಂಬಿಕೊಂಡು ಪ್ರಶಾಂತವಾದ ಜಗತ್ತಿಗೆ ಕಾಲಿಟ್ಟ ಅನುಭವವಾಯಿತು. ಡಿ. ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿ
ಮೈಸೂರು : 50 ಕೋಟಿ ಖರ್ಚು ಮಾಡಿ ಇಂದಿನ ಚುನಾವಣೆ ಎದುರಿಸುವಷ್ಟು ಶಕ್ತಿ ನನ್ನಲ್ಲಿ ಇಲ್ಲ. ಹೀಗಾಗಿ ಮುಂದೆ ಯಾವ…
ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ…
ಮೈಸೂರು: ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರರಾವ್ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್ ಎಚ್.ವಿಶ್ವನಾಥ್…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್ ಅವರ ಟಿವಿಕೆ ಪಕ್ಷ…
ನವದೆಹಲಿ: ಕುಟುಂಬದೊಂದಿಗೆ ಪ್ರವಾಸದಲ್ಲಿದ್ದ 26 ಜೀವಗಳನ್ನು ಬಲಿ ಪಡೆದ ಉಗ್ರರಿಗೆ ತಕ್ಕ ಪಾಠ ಕಲಿಸಿದ ಆಪರೇಷನ್ ಸಿಂಧೂರಕ್ಕೆ ಒಂದು ವರ್ಷವಾಗಿದೆ.…
ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರುವುದು ನಿಜ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.…