Andolana originals

ದಮ್ಮನಕಟ್ಟೆ ಸಫಾರಿ ವಲಯ ವೀಕ್ಷಿಸಿದ ಡಿಕೆಶಿ

ಕುಟುಂಬದವರೊಡನೆ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಉಪ ಮುಖ್ಯಮಂತ್ರಿ
ಮಂಜು ಕೋಟೆ

ಎಚ್. ಡಿ. ಕೋಟೆ: ತಾಲ್ಲೂಕಿನ ಸಂಬಂಧಿಕರ ರೆಸಾರ್ಟ್ ನಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಕುಟುಂಬ ಸಮೇತವಾಗಿ ಆಗಮಿಸಿ ತಮ್ಮ ಹುಟ್ಟುಹಬ್ಬ ವನ್ನು ಸರಳವಾಗಿ ಆಚರಿಸಿಕೊಂಡರು.

ರಾಜಕೀಯ, ಅಧಿಕಾರದ ಒತ್ತಡಗಳ ನಡುವೆಯೂ ಮೂರು ದಿನಗಳ ಕಾಲ ತಮ್ಮ ಹುಟ್ಟುಹಬ್ಬದ ನಿಮಿತ್ತ ಕುಟುಂಬಸ್ಥರೊಡನೆ ಕಾಲ ಕಳೆಯಲು ತಾಲ್ಲೂಕಿನ ಕಾರಾಪುರ ಸಮೀಪದ ಸೆರಾಯಿ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ.

ಬುಧವಾರ ಸಂಜೆ ಡಿ. ಕೆ. ಶಿವಕುಮಾರ್ ಅವರು ತಮ್ಮ ಪತ್ನಿ, ಮಗಳು, ಅಳಿಯ ಹಾಗೂ ಕುಟುಂಬಸ್ಥರೊಡನೆ ರೆಸಾರ್ಟ್‌ನಲ್ಲಿ ಉಳಿದಿದ್ದು, ಗುರುವಾರ ಬೆಳಿಗ್ಗೆ ಜಂಗಲ್ ಲಾಡ್ಜ್ ನ ವಾಹನಗಳಲ್ಲಿ ನಾಗರಹೊಳೆ ಅಭಯಾರಣ್ಯದ ದಮ್ಮನಕಟ್ಟೆಯ ಸಫಾರಿ ವಲಯವನ್ನು ವೀಕ್ಷಣೆ ಮಾಡಿದ್ದಾರೆ.

ಈ ವೇಳೆ ಹುಲಿ, ಚಿರತೆ, ಆನೆ, ಜಿಂಕೆ, ಕಡವೆ ಇನ್ನಿತರ ಪ್ರಾಣಿಗಳು ಕಾಣಿಸಿಕೊಂಡಾಗ ಖುಷಿ ವ್ಯಕ್ತಪಡಿಸಿದ್ದಾರೆ.

ಅರಣ್ಯದ ಉತ್ತಮವಾದ ವಾತಾವರಣ ನೋಡಿ ಎಲ್ಲರೂ ಖುಷಿಪಟ್ಟಿದ್ದಾರೆ. ಸಂಜೆ ಕಬಿನಿ ಹಿನ್ನೀರಿನಲ್ಲಿ ಬೋಟ್ ಸಫಾರಿ ನಡೆಸಿ ಆನಂದಪಟ್ಟಿದ್ದಾರೆ.

ತದನಂತರ ಕುಟುಂಬಸ್ಥರು ಡಿ. ಕೆ. ಶಿವಕುಮಾರ್ ಅವರ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿದರು. ತೆರೆದ ವಾಹನದಲ್ಲಿ ಸಫಾರಿಗೆ ಹೋಗುತ್ತಿದ್ದಾಗ ಅಕ್ಕ ಪಕ್ಕದ ಗ್ರಾಮಸ್ಥರು, ನಿವಾಸಿಗಳು ಡಿ. ಕೆ. ಶಿವಕುಮಾರ್ ಅವರಿಗೆ ಜೈಕಾರ ಕೂಗಿ ಮುಂದಿನ ಮುಖ್ಯಮಂತ್ರಿ ನೀವೇ ಎಂದು ಘೋಷಣೆ ಕೂಗಿದರು. ಈ ವೇಳೆ ಡಿಕೆಶಿ ಎಲ್ಲರತ್ತ ಕೈ ಬೀಸಿ ವಿಶ್ ಮಾಡಿದರು.

ಡಿ. ಕೆ. ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಆದ ನಂತರ ತಮ್ಮ ಕುಟುಂಬ ಸಮೇತವಾಗಿ ತಾಲ್ಲೂಕಿನಲ್ಲಿ ಮೂರು ದಿನಗಳ ಕಾಲ ವಾಸ್ತವ್ಯ ಹೂಡಿರುವುದು ಇದೇ ಮೊದಲು.

ಈ ವರ್ಷ ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿ ಕಬಿನಿಯಲ್ಲಿ ಕಾಲ ಕಳೆಯುವ ಮೂಲಕ ಆಚರಿಸಿದೆ. ಪ್ರಕೃತಿಯೊಂದಿಗೆ ಒಂದಾದ ಭಾವ, ಕಬಿನಿಯ ಸೌಂದರ್ಯ, ವನ್ಯ ಸಂಪತ್ತನ್ನು ಕಣ್ತುಂಬಿಕೊಂಡು ಪ್ರಶಾಂತವಾದ ಜಗತ್ತಿಗೆ ಕಾಲಿಟ್ಟ ಅನುಭವವಾಯಿತು. ಡಿ. ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

6 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

6 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

6 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

6 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

6 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

6 hours ago