ಎಚ್.ಎಸ್.ದಿನೇಶ್ ಕುಮಾರ್
ಮೈಸೂರಿನ ಪ್ರಾದೇಶಿಕ ಸಾರಿಗೆ ಕಚೇರಿಗೆ ಸುಮಾರು ೧,೫೦೦ ಅರ್ಜಿಗಳು ಸಲ್ಲಿಕೆ
ಮೈಸೂರು: ನಗರದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಚಾಲಕರ ವಾಹನ ಚಾಲನಾ ಪರವಾನಗಿ (ಡಿಎಲ್) ಹಾಗೂ ನವೀಕರಣ (ರಿನ್ಯೂವಲ್)ಕ್ಕಾಗಿ ಕಳೆದ ಮೂರು ತಿಂಗಳುಗಳಿಂದ ಸಲ್ಲಿಕೆಯಾಗಿರುವ ಸುಮಾರು ೧,೫೦೦ ಅರ್ಜಿಗಳು ವಿಲೇವಾರಿಯಾಗದೆ ನನೆಗುದಿಗೆ ಬಿದ್ದಿವೆ.
ಪ್ರಾದೇಶಿಕ ಸಾರಿಗೆ ಕಚೇರಿಯಿಂದ ಡಿಎಲ್ ಪಡೆಯಲು ಜನರು ಸಾಕಷ್ಟು ಕಸರತ್ತು ನಡೆಸಬೇಕು. ಮೊದಲಿಗೆ ಎಲ್ಎಲ್ಆರ್ ಪಡೆಯಬೇಕು. ನಂತರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ, ಟ್ರ್ಯಾಕ್ನಲ್ಲಿ ವಾಹನ ಚಾಲನೆ ಮಾಡಿ ಯಶಸ್ವಿಯಾಗಬೇಕು. ಇಷ್ಟೆಲ್ಲಾ ಕಸರತ್ತು ಮಾಡುವ ಮೂಲಕ ಡಿಎಲ್ ಪಡೆಯಬೇಕು. ಆದರೆ, ಅರ್ಜಿ ಸಲ್ಲಿಸಿ ೩ ತಿಂಗಳಾದರೂ ಡಿಎಲ್ ಲಭ್ಯವಾಗದಿದ್ದರೆ ಹೇಗೆ? ಟ್ರ್ಯಾಕ್ ಪರೀಕ್ಷೆಯಲ್ಲಿ ಪಾಸಾದರೂ ನಮಗೆ ಡಿಎಲ್ ಬಂದಿಲ್ಲವಲ್ಲಾ ಎಂಬ ಬೇಸರ ದಲ್ಲಿಯೇ ಅವರು ಕಾಲ ಕಳೆಯುವಂತಾಗುತ್ತದೆ.
ಇದಕ್ಕೆ ಕಾರಣ ಕಾರ್ಡ್ಗಳ ಕೊರತೆ. ಡಿಎಲ್, ಡಿಎಲ್ ನವೀಕರಣ ಹಾಗೂ ವಾಹನ ನೋಂದಣಿ ಕಾರ್ಡ್ಗಳನ್ನು ಸರಬರಾಜು ಮಾಡುವ ಹೊಣೆ ಸಾರಿಗೆ ಇಲಾಖೆಯ ಕೇಂದ್ರ ಕಚೇರಿಯದ್ದು ಎಂಬುದು ಸ್ಥಳೀಯ ಅಧಿಕಾರಿಗಳ ಸಮಜಾಯಿಷಿ. ಕಾಲಕಾಲಕ್ಕೆ ಸರಿಯಾಗಿ ಕಾರ್ಡ್ಗಳನ್ನು ಸರಬರಾಜು ಮಾಡಿದರೆ ಇಂತಹ ಸಮಸ್ಯೆ ಎದುರಾಗುವುದಿಲ್ಲ. ಆದರೆ, ಕಳೆದ ಮೂರು ತಿಂಗಳುಗಳಿಂದ ಸಮರ್ಪಕವಾಗಿ ಕಾರ್ಡ್ಗಳು ಸರಬರಾಜಾಗುತ್ತಿಲ್ಲ.
ಹೀಗಾಗಿ ಡಿಎಲ್, ನವೀಕರಣ ಹಾಗೂ ವಾಹನ ನೋಂದಣಿ ಕಾರ್ಡ್ಗಳಿಗಾಗಿ ಅರ್ಜಿ ಸಲ್ಲಿಸಿರುವ ಸುಮಾರು ೧,೫೦೦ ಮಂದಿ ಕಾಯುವುದು ಅನಿವಾರ್ಯವಾಗಿದೆ. ಪ್ರತಿದಿನ ಬರುವ ಅಂಚೆ ಅಣ್ಣನನ್ನು ಕಾರ್ಡ್ ಬಂದಿದೆಯೇ ಎಂದು ಕೇಳುವಂತಾಗಿದೆ. ಇನ್ನು ಕೆಲವರು ಕಾರ್ಡ್ ಬಂದಿಲ್ಲ ಎಂಬ ದೂರಿನೊಂದಿಗೆ ಪ್ರತಿದಿನ ಸಾರಿಗೆ ಇಲಾಖೆಕಚೇರಿಗೆ ಎಡತಾಕುತ್ತಿದ್ದಾರೆ. ಅಂತಹವರಿಗೆ ಸೂಕ್ತ ಉತ್ತರ ನೀಡಲಾಗದೆ ಆರ್ಟಿಒ ಅಧಿಕಾರಿಗಳು ಹೈರಾಣಾಗುತ್ತಿದ್ದಾರೆ.
ಇನ್ನು ಮುಂದೆ ಕೇಂದ್ರ ಕಚೇರಿಯಲ್ಲೇ ಮುದ್ರಣ: ಇದೀಗ ಸಾರಿಗೆ ಇಲಾಖೆ ಹೊಸ ನಿಯವೊಂದನ್ನು ಜಾರಿಗೊಳಿಸುತ್ತಿದೆ. ಡಿಎಲ್, ನವೀಕರಣ ಹಾಗೂ ವಾಹನ ನೋಂದಣಿ ಕಾರ್ಡ್ಗಳನ್ನು ಇನ್ನು ಮುಂದೆ ಕೇಂದ್ರ ಕಚೇರಿಯಲ್ಲೇ ಮುದ್ರಿಸಲು ತೀರ್ಮಾಸಿದೆ.
ಈ ನಿಯಮ ನವೆಂಬರ್ ಅಂತ್ಯದ ವೇಳೆಗೆ ಜಾರಿಯಾಗಲಿದೆ. ಕಾರ್ಡ್ಗಳು ಬರುವುದು ತಡವಾದಲ್ಲಿ ಸಾರ್ವಜನಿಕರು ಯಾರಿಗೆ ದೂರು ಹೇಳಬೇಕು ಎಂಬುದೇ ಮುಖ್ಯ ಪ್ರಶ್ನೆ.ಇಲ್ಲವಾದಲ್ಲಿ ಕಾರ್ಡ್ ಬಂದಾಗ ಬರಲಿ ಎಂದು ಸುಮ್ಮನಿರಬೇಕಷ್ಟೆ.
ಕಾರ್ಡ್ಗಳ ಮುದ್ರಣ ಸಂಬಂಧ ಈಗಾಗಲೇ ರಾಜ್ಯ ಮಟ್ಟದಲ್ಲಿ ಟೆಂಡರ್ ಪ್ರಕ್ರಿಯೆಗಳು ಪೂರ್ಣಗೊಂಡಿವೆ. ಡಿಎಲ್ ಅಪ್ರೂವಲ್, ಆರ್ಸಿ ಅಪ್ರೂವಲ್ ಹಾಗೂ ನವೀಕರಣ ಪ್ರಕ್ರಿಯೆ ಗಳೆಲ್ಲವೂ ಇಲ್ಲಿಯೇ ನಡೆಯಲಿವೆ. ಆದರೆ, ಕಾರ್ಡ್ ಪಡೆಯಲು ಮಾತ್ರ ಬೆಂಗಳೂರಿನತ್ತ ಮುಖ ಮಾಡಬೇಕಿದೆ. ಈ ನೂತನ ಯೋಜನೆಯ ಸಾಧಕ-ಬಾಧಕಗಳನ್ನು ಕಾದು ನೋಡಬೇಕಿದೆ.
” ಕಳೆದ ಆರು ತಿಂಗಳುಗಳಿಂದ ಕಾರ್ಡ್ಗಳ ಕೊರತೆ ಎದುರಾಗಿದೆ. ಅಗತ್ಯಕ್ಕೆ ತಕ್ಕಂತೆ ಕಾರ್ಡ್ಗಳನ್ನು ಸರಬರಾಜು ಮಾಡುತ್ತಿಲ್ಲ. ಆಗಾಗ್ಗೆ ನೂರು ಅಥವಾ ಇನ್ನೂರು ಕಾರ್ಡ್ಗಳು ಬರುತ್ತವೆ. ಅಂತಹ ವೇಳೆ ಆದ್ಯತೆಯ ಮೇಲೆ ಕಾರ್ಡ್ಗಳನ್ನು ನೀಡಲಾಗುತ್ತಿದೆ. ಆದಷ್ಟು ಶೀಘ್ರದಲ್ಲಿ ಹೆಚ್ಚಿನ ಕಾರ್ಡ್ಗಳನ್ನು ನೀಡುವುದಾಗಿ ಮೇಲಽಕಾರಿಗಳು ಭರವಸೆ ನೀಡಿದ್ದಾರೆ.”
-ಸಾರಿಗೆ ಇಲಾಖೆ ಅಧಿಕಾರಿ
ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…
ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ ಈ…
ಬೆಳಗಾವಿ: 532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ…
ರಾಕಿಂಗ್ ಸ್ಟಾರ್ ಯಶ್ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್ನ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…
ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್…