Andolana originals

ಡಿಎಲ್-ನವೀಕರಣ ಅರ್ಜಿಗಳು ನನೆಗುದಿಗೆ

ಎಚ್.ಎಸ್.ದಿನೇಶ್ ಕುಮಾರ್

ಮೈಸೂರಿನ ಪ್ರಾದೇಶಿಕ ಸಾರಿಗೆ ಕಚೇರಿಗೆ ಸುಮಾರು ೧,೫೦೦ ಅರ್ಜಿಗಳು ಸಲ್ಲಿಕೆ 

ಮೈಸೂರು: ನಗರದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಚಾಲಕರ ವಾಹನ ಚಾಲನಾ ಪರವಾನಗಿ (ಡಿಎಲ್) ಹಾಗೂ ನವೀಕರಣ (ರಿನ್ಯೂವಲ್)ಕ್ಕಾಗಿ ಕಳೆದ ಮೂರು ತಿಂಗಳುಗಳಿಂದ ಸಲ್ಲಿಕೆಯಾಗಿರುವ ಸುಮಾರು ೧,೫೦೦ ಅರ್ಜಿಗಳು ವಿಲೇವಾರಿಯಾಗದೆ ನನೆಗುದಿಗೆ ಬಿದ್ದಿವೆ.

ಪ್ರಾದೇಶಿಕ ಸಾರಿಗೆ ಕಚೇರಿಯಿಂದ ಡಿಎಲ್ ಪಡೆಯಲು ಜನರು ಸಾಕಷ್ಟು ಕಸರತ್ತು ನಡೆಸಬೇಕು. ಮೊದಲಿಗೆ ಎಲ್‌ಎಲ್‌ಆರ್ ಪಡೆಯಬೇಕು. ನಂತರ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ಟ್ರ್ಯಾಕ್‌ನಲ್ಲಿ ವಾಹನ ಚಾಲನೆ ಮಾಡಿ ಯಶಸ್ವಿಯಾಗಬೇಕು. ಇಷ್ಟೆಲ್ಲಾ ಕಸರತ್ತು ಮಾಡುವ ಮೂಲಕ ಡಿಎಲ್ ಪಡೆಯಬೇಕು. ಆದರೆ, ಅರ್ಜಿ ಸಲ್ಲಿಸಿ ೩ ತಿಂಗಳಾದರೂ ಡಿಎಲ್ ಲಭ್ಯವಾಗದಿದ್ದರೆ ಹೇಗೆ? ಟ್ರ್ಯಾಕ್ ಪರೀಕ್ಷೆಯಲ್ಲಿ ಪಾಸಾದರೂ ನಮಗೆ ಡಿಎಲ್ ಬಂದಿಲ್ಲವಲ್ಲಾ ಎಂಬ ಬೇಸರ ದಲ್ಲಿಯೇ ಅವರು ಕಾಲ ಕಳೆಯುವಂತಾಗುತ್ತದೆ.

ಇದಕ್ಕೆ ಕಾರಣ ಕಾರ್ಡ್‌ಗಳ ಕೊರತೆ. ಡಿಎಲ್, ಡಿಎಲ್ ನವೀಕರಣ ಹಾಗೂ ವಾಹನ ನೋಂದಣಿ ಕಾರ್ಡ್‌ಗಳನ್ನು ಸರಬರಾಜು ಮಾಡುವ ಹೊಣೆ ಸಾರಿಗೆ ಇಲಾಖೆಯ ಕೇಂದ್ರ ಕಚೇರಿಯದ್ದು ಎಂಬುದು ಸ್ಥಳೀಯ ಅಧಿಕಾರಿಗಳ ಸಮಜಾಯಿಷಿ. ಕಾಲಕಾಲಕ್ಕೆ ಸರಿಯಾಗಿ ಕಾರ್ಡ್‌ಗಳನ್ನು ಸರಬರಾಜು ಮಾಡಿದರೆ ಇಂತಹ ಸಮಸ್ಯೆ ಎದುರಾಗುವುದಿಲ್ಲ. ಆದರೆ, ಕಳೆದ ಮೂರು ತಿಂಗಳುಗಳಿಂದ ಸಮರ್ಪಕವಾಗಿ ಕಾರ್ಡ್ಗಳು ಸರಬರಾಜಾಗುತ್ತಿಲ್ಲ.

ಹೀಗಾಗಿ ಡಿಎಲ್, ನವೀಕರಣ ಹಾಗೂ ವಾಹನ ನೋಂದಣಿ ಕಾರ್ಡ್‌ಗಳಿಗಾಗಿ ಅರ್ಜಿ ಸಲ್ಲಿಸಿರುವ ಸುಮಾರು ೧,೫೦೦ ಮಂದಿ ಕಾಯುವುದು ಅನಿವಾರ್ಯವಾಗಿದೆ. ಪ್ರತಿದಿನ ಬರುವ ಅಂಚೆ ಅಣ್ಣನನ್ನು ಕಾರ್ಡ್ ಬಂದಿದೆಯೇ ಎಂದು ಕೇಳುವಂತಾಗಿದೆ. ಇನ್ನು ಕೆಲವರು ಕಾರ್ಡ್ ಬಂದಿಲ್ಲ ಎಂಬ ದೂರಿನೊಂದಿಗೆ ಪ್ರತಿದಿನ ಸಾರಿಗೆ ಇಲಾಖೆಕಚೇರಿಗೆ ಎಡತಾಕುತ್ತಿದ್ದಾರೆ. ಅಂತಹವರಿಗೆ ಸೂಕ್ತ ಉತ್ತರ ನೀಡಲಾಗದೆ ಆರ್‌ಟಿಒ ಅಧಿಕಾರಿಗಳು ಹೈರಾಣಾಗುತ್ತಿದ್ದಾರೆ.

ಇನ್ನು ಮುಂದೆ ಕೇಂದ್ರ ಕಚೇರಿಯಲ್ಲೇ ಮುದ್ರಣ: ಇದೀಗ ಸಾರಿಗೆ ಇಲಾಖೆ ಹೊಸ ನಿಯವೊಂದನ್ನು ಜಾರಿಗೊಳಿಸುತ್ತಿದೆ. ಡಿಎಲ್, ನವೀಕರಣ ಹಾಗೂ ವಾಹನ ನೋಂದಣಿ ಕಾರ್ಡ್ಗಳನ್ನು ಇನ್ನು ಮುಂದೆ ಕೇಂದ್ರ ಕಚೇರಿಯಲ್ಲೇ ಮುದ್ರಿಸಲು ತೀರ್ಮಾಸಿದೆ.

ಈ ನಿಯಮ ನವೆಂಬರ್ ಅಂತ್ಯದ ವೇಳೆಗೆ ಜಾರಿಯಾಗಲಿದೆ. ಕಾರ್ಡ್‌ಗಳು ಬರುವುದು ತಡವಾದಲ್ಲಿ ಸಾರ್ವಜನಿಕರು ಯಾರಿಗೆ ದೂರು ಹೇಳಬೇಕು ಎಂಬುದೇ ಮುಖ್ಯ ಪ್ರಶ್ನೆ.ಇಲ್ಲವಾದಲ್ಲಿ ಕಾರ್ಡ್ ಬಂದಾಗ ಬರಲಿ ಎಂದು ಸುಮ್ಮನಿರಬೇಕಷ್ಟೆ.

ಕಾರ್ಡ್‌ಗಳ ಮುದ್ರಣ ಸಂಬಂಧ ಈಗಾಗಲೇ ರಾಜ್ಯ ಮಟ್ಟದಲ್ಲಿ ಟೆಂಡರ್ ಪ್ರಕ್ರಿಯೆಗಳು ಪೂರ್ಣಗೊಂಡಿವೆ. ಡಿಎಲ್ ಅಪ್ರೂವಲ್, ಆರ್‌ಸಿ ಅಪ್ರೂವಲ್ ಹಾಗೂ ನವೀಕರಣ ಪ್ರಕ್ರಿಯೆ ಗಳೆಲ್ಲವೂ ಇಲ್ಲಿಯೇ ನಡೆಯಲಿವೆ. ಆದರೆ, ಕಾರ್ಡ್ ಪಡೆಯಲು ಮಾತ್ರ ಬೆಂಗಳೂರಿನತ್ತ ಮುಖ ಮಾಡಬೇಕಿದೆ. ಈ ನೂತನ ಯೋಜನೆಯ ಸಾಧಕ-ಬಾಧಕಗಳನ್ನು ಕಾದು ನೋಡಬೇಕಿದೆ.

” ಕಳೆದ ಆರು ತಿಂಗಳುಗಳಿಂದ ಕಾರ್ಡ್‌ಗಳ ಕೊರತೆ ಎದುರಾಗಿದೆ. ಅಗತ್ಯಕ್ಕೆ ತಕ್ಕಂತೆ ಕಾರ್ಡ್‌ಗಳನ್ನು ಸರಬರಾಜು ಮಾಡುತ್ತಿಲ್ಲ. ಆಗಾಗ್ಗೆ ನೂರು ಅಥವಾ ಇನ್ನೂರು ಕಾರ್ಡ್ಗಳು ಬರುತ್ತವೆ. ಅಂತಹ ವೇಳೆ ಆದ್ಯತೆಯ ಮೇಲೆ ಕಾರ್ಡ್‌ಗಳನ್ನು ನೀಡಲಾಗುತ್ತಿದೆ. ಆದಷ್ಟು ಶೀಘ್ರದಲ್ಲಿ ಹೆಚ್ಚಿನ ಕಾರ್ಡ್‌ಗಳನ್ನು ನೀಡುವುದಾಗಿ ಮೇಲಽಕಾರಿಗಳು ಭರವಸೆ ನೀಡಿದ್ದಾರೆ.”

-ಸಾರಿಗೆ ಇಲಾಖೆ ಅಧಿಕಾರಿ

ಆಂದೋಲನ ಡೆಸ್ಕ್

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

5 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

5 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

6 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

7 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

7 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

10 hours ago