Andolana originals

ಎಲ್ಲೆಂದರಲ್ಲಿ ಕಸ ಎಸೆಯಲು ವಿದ್ಯೆ ಕಲಿಯಬೇಕೆ?!

ಟಿ.ಕೆ.ಹರೀಶ್ (ಲೇಖಕರು ಹಿರಿಯ ಸಹಾಯಕ ನಿರ್ದೇಶಕರು) 

ಬಾಲ್ಯದಿಂದಲೇ ಶಿಕ್ಷಣದ ಜೊತೆಗೆ ಪರಿಸರ ಜಾಗೃತಿ ಮೂಡಿಸಬೇಕು

ಮೈಸೂರು ತನ್ನದೇ ಆದ ಸುಂದರವಾದ ಇತಿಹಾಸ, ಸ್ವಚ್ಛತೆ ಮತ್ತು ಹಸಿರಿನಿಂದಾಗಿ ಜಗತ್ಪ್ರಸಿದ್ಧವಾಗಿದೆ. ಮೈಸೂರು ಮಹಾರಾಜರು ಅದರಲ್ಲಿಯೂ ವಿಶೇಷವಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ನಗರವನ್ನು ಯೋಜನಾಬದ್ಧವಾಗಿ ಕಟ್ಟಿದರು. ಈಗಲೂ ಮೈಸೂರು ದೇಶದ ಅತ್ಯಂತ ಸ್ವಚ್ಛ ನಗರಗಳಲ್ಲಿ ಒಂದಾಗಿರುವುದು ಹೆಮ್ಮೆಯ ಸಂಗತಿ.

ಇಂತಹ ಮೈಸೂರಿನ ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವುದರಿಂದ ನಗರದ ಸೌಂದರ್ಯ ಹಾಳಾಗುವುದಲ್ಲದೆ, ಪರಿಸರ ಮಾಲಿನ್ಯ ಮತ್ತು ಸಾಂಕ್ರಾಮಿಕ ರೋಗಗಳೂ ಹರಡುತ್ತವೆ. ಸ್ವಚ್ಛತೆಗೆ ಒತ್ತು ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತು ಸ್ಥಳೀಯ ಆಡಳಿತಗಳು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿವೆ. ಆದರೆ, ಬಹಳಷ್ಟು ಜನರು ನಿತ್ಯದ ಕಸವನ್ನು ರಸ್ತೆ ಬದಿ, ಪಾರ್ಕ್‌ಗಳು ಮತ್ತು ಹೊರ ವರ್ತುಲ ರಸ್ತೆಗಳಲ್ಲಿ ಬಿಸಾಡುತ್ತಿರುವುದು ಮೈಸೂರಿನ ನೈರ್ಮಲ್ಯಕ್ಕೆ ಕಂಟಕವಾಗಿದೆ.

ವಿದ್ಯಾವಂತರು ಅಥವಾ ಉನ್ನತ ಪದವಿ ಪಡೆದ ಬಹಳಷ್ಟು ಮಂದಿಯಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವ ಮನೋಭಾವ ಕಂಡುಬರುತ್ತಿದೆ. ಪರಿಸರ ಪ್ರಜ್ಞೆ ಮತ್ತು ಸಾಮಾಜಿಕ ಜವಾಬ್ದಾರಿಯ ಕೊರತೆಯೇ ಅವರ ಈ ಮನೋಭಾವಕ್ಕೆ ಮೂಲ ಕಾರಣವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆದಾಗ ಸಿಗುವ ಶಿಕ್ಷೆ ಅಥವಾ ದಂಡದ ಬಗ್ಗೆ ಅನೇಕ ವಿದ್ಯಾವಂತರಿಗೆ ಭಯ ಇಲ್ಲ ಅನಿಸುತ್ತದೆ ಅಥವಾ ನಾನು ಓದಿದ್ದೇನೆ, ಆದರೆ ನನ್ನ ಸ್ವಚ್ಛತೆಯ ಕೆಲಸವನ್ನು ಪಾಲಿಕೆ ಅಥವಾ ಸ್ವಚ್ಛತಾ ಸಿಬ್ಬಂದಿ ಮಾಡುತ್ತಾರೆ ಎಂಬ ಮನೋಭಾವದಿಂದ ಈ ರೀತಿ ಮಾಡುತ್ತಿದ್ದಾರೆ ಅನಿಸುತ್ತದೆ. ಹಾಗಾಗಿ ಬಾಲ್ಯದಿಂದಲೇ ಶಿಕ್ಷಣದ ಜೊತೆಗೆ ಪರಿಸರ ಜಾಗೃತಿಯನ್ನೂ ಕಡ್ಡಾಯವಾಗಿ ಮೂಡಿಸುವುದು ಸೂಕ್ತ.

ಸ್ವಚ್ಛ ಭಾರತ ಮತ್ತು ಆರೋಗ್ಯಕರ ಸಮಾಜದ ನಿರ್ಮಾಣಕ್ಕೆ ಪ್ರತಿಯೊಬ್ಬ ನಾಗರಿಕನೂ ಸ್ವಯಂಪ್ರೇರಿತನಾಗಿ ಜವಾಬ್ದಾರಿಯುತವಾಗಿ ವರ್ತಿಸುವುದು ಅತ್ಯಗತ್ಯ. ಸ್ವಚ್ಛತೆಯೇ ನೈಜ ಆರೋಗ್ಯ ಮತ್ತು ಪ್ರಗತಿಯ ಸಂಕೇತವಾಗಿದ್ದು, ಈ ಬಗ್ಗೆ ಜನರಲ್ಲಿ ಅರಿವು ಮೂಡಿದದ ಹೊರತು ಇದಕ್ಕೆ ಶಾಶ್ವತ ಪರಿಹಾರ ಸಿಗುವುದಿಲ್ಲ.

” ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ, ಚರಂಡಿ ಅಥವಾ ಖಾಲಿ ನಿವೇಶನಗಳಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವುದು ಶಿಕ್ಷಾರ್ಹ ಅಪರಾಧವಾಗಿದೆ. ನಿಯಮ ಉಲ್ಲಂಸಿ ಕಸ ಹಾಕುವವರಿಗೆ ಪಾಲಿಕೆಯು ೫೦೦ ರೂ.ಗಳಿಂದ ೧ ಸಾವಿರ ರೂ. ವರೆಗೆ ದಂಡ ವಿಧಿಸುತ್ತದೆ”

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

5 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

5 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

5 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

5 hours ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

5 hours ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

5 hours ago