ಟಿ.ಕೆ.ಹರೀಶ್ (ಲೇಖಕರು ಹಿರಿಯ ಸಹಾಯಕ ನಿರ್ದೇಶಕರು)
ಬಾಲ್ಯದಿಂದಲೇ ಶಿಕ್ಷಣದ ಜೊತೆಗೆ ಪರಿಸರ ಜಾಗೃತಿ ಮೂಡಿಸಬೇಕು
ಮೈಸೂರು ತನ್ನದೇ ಆದ ಸುಂದರವಾದ ಇತಿಹಾಸ, ಸ್ವಚ್ಛತೆ ಮತ್ತು ಹಸಿರಿನಿಂದಾಗಿ ಜಗತ್ಪ್ರಸಿದ್ಧವಾಗಿದೆ. ಮೈಸೂರು ಮಹಾರಾಜರು ಅದರಲ್ಲಿಯೂ ವಿಶೇಷವಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ನಗರವನ್ನು ಯೋಜನಾಬದ್ಧವಾಗಿ ಕಟ್ಟಿದರು. ಈಗಲೂ ಮೈಸೂರು ದೇಶದ ಅತ್ಯಂತ ಸ್ವಚ್ಛ ನಗರಗಳಲ್ಲಿ ಒಂದಾಗಿರುವುದು ಹೆಮ್ಮೆಯ ಸಂಗತಿ.
ಇಂತಹ ಮೈಸೂರಿನ ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವುದರಿಂದ ನಗರದ ಸೌಂದರ್ಯ ಹಾಳಾಗುವುದಲ್ಲದೆ, ಪರಿಸರ ಮಾಲಿನ್ಯ ಮತ್ತು ಸಾಂಕ್ರಾಮಿಕ ರೋಗಗಳೂ ಹರಡುತ್ತವೆ. ಸ್ವಚ್ಛತೆಗೆ ಒತ್ತು ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತು ಸ್ಥಳೀಯ ಆಡಳಿತಗಳು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿವೆ. ಆದರೆ, ಬಹಳಷ್ಟು ಜನರು ನಿತ್ಯದ ಕಸವನ್ನು ರಸ್ತೆ ಬದಿ, ಪಾರ್ಕ್ಗಳು ಮತ್ತು ಹೊರ ವರ್ತುಲ ರಸ್ತೆಗಳಲ್ಲಿ ಬಿಸಾಡುತ್ತಿರುವುದು ಮೈಸೂರಿನ ನೈರ್ಮಲ್ಯಕ್ಕೆ ಕಂಟಕವಾಗಿದೆ.
ವಿದ್ಯಾವಂತರು ಅಥವಾ ಉನ್ನತ ಪದವಿ ಪಡೆದ ಬಹಳಷ್ಟು ಮಂದಿಯಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವ ಮನೋಭಾವ ಕಂಡುಬರುತ್ತಿದೆ. ಪರಿಸರ ಪ್ರಜ್ಞೆ ಮತ್ತು ಸಾಮಾಜಿಕ ಜವಾಬ್ದಾರಿಯ ಕೊರತೆಯೇ ಅವರ ಈ ಮನೋಭಾವಕ್ಕೆ ಮೂಲ ಕಾರಣವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆದಾಗ ಸಿಗುವ ಶಿಕ್ಷೆ ಅಥವಾ ದಂಡದ ಬಗ್ಗೆ ಅನೇಕ ವಿದ್ಯಾವಂತರಿಗೆ ಭಯ ಇಲ್ಲ ಅನಿಸುತ್ತದೆ ಅಥವಾ ನಾನು ಓದಿದ್ದೇನೆ, ಆದರೆ ನನ್ನ ಸ್ವಚ್ಛತೆಯ ಕೆಲಸವನ್ನು ಪಾಲಿಕೆ ಅಥವಾ ಸ್ವಚ್ಛತಾ ಸಿಬ್ಬಂದಿ ಮಾಡುತ್ತಾರೆ ಎಂಬ ಮನೋಭಾವದಿಂದ ಈ ರೀತಿ ಮಾಡುತ್ತಿದ್ದಾರೆ ಅನಿಸುತ್ತದೆ. ಹಾಗಾಗಿ ಬಾಲ್ಯದಿಂದಲೇ ಶಿಕ್ಷಣದ ಜೊತೆಗೆ ಪರಿಸರ ಜಾಗೃತಿಯನ್ನೂ ಕಡ್ಡಾಯವಾಗಿ ಮೂಡಿಸುವುದು ಸೂಕ್ತ.
ಸ್ವಚ್ಛ ಭಾರತ ಮತ್ತು ಆರೋಗ್ಯಕರ ಸಮಾಜದ ನಿರ್ಮಾಣಕ್ಕೆ ಪ್ರತಿಯೊಬ್ಬ ನಾಗರಿಕನೂ ಸ್ವಯಂಪ್ರೇರಿತನಾಗಿ ಜವಾಬ್ದಾರಿಯುತವಾಗಿ ವರ್ತಿಸುವುದು ಅತ್ಯಗತ್ಯ. ಸ್ವಚ್ಛತೆಯೇ ನೈಜ ಆರೋಗ್ಯ ಮತ್ತು ಪ್ರಗತಿಯ ಸಂಕೇತವಾಗಿದ್ದು, ಈ ಬಗ್ಗೆ ಜನರಲ್ಲಿ ಅರಿವು ಮೂಡಿದದ ಹೊರತು ಇದಕ್ಕೆ ಶಾಶ್ವತ ಪರಿಹಾರ ಸಿಗುವುದಿಲ್ಲ.
” ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ, ಚರಂಡಿ ಅಥವಾ ಖಾಲಿ ನಿವೇಶನಗಳಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವುದು ಶಿಕ್ಷಾರ್ಹ ಅಪರಾಧವಾಗಿದೆ. ನಿಯಮ ಉಲ್ಲಂಸಿ ಕಸ ಹಾಕುವವರಿಗೆ ಪಾಲಿಕೆಯು ೫೦೦ ರೂ.ಗಳಿಂದ ೧ ಸಾವಿರ ರೂ. ವರೆಗೆ ದಂಡ ವಿಧಿಸುತ್ತದೆ”
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…
ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…
ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…
ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…