ಮಹಾದೇಶ್ ಎಂ.ಗೌಡ
ಕುಡಿಯುವ ನೀರು, ಚರಂಡಿ, ಸಾರಿಗೆ ವ್ಯವಸ್ಥೆ ಕಲ್ಪಿಸಲು ಗ್ರಾಮಸ್ಥರ ಆಗ್ರಹ
ಹನೂರು: ಕುಡಿಯುವ ನೀರಿಗೆ ಹಾಹಾಕಾರ, ಶಾಲೆಗೆ ಪ್ರತಿನಿತ್ಯ ಎರಡು ಕಿ.ಮೀ. ಕಾಲ್ನಡಿಗೆಯಲ್ಲಿ ತೆರಳುವ ಮಕ್ಕಳು… ಇದು ಹನೂರು ತಾಲ್ಲೂಕಿನ ರಾಮಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುನಿಯಪ್ಪನ ದೊಡ್ಡಿ ಗ್ರಾಮದ ದುಸ್ಥಿತಿ.
ರಾಮಾಪುರ ಗ್ರಾಪಂ ವ್ಯಾಪ್ತಿಯ ಗೆಜ್ಜಲನತ್ತ ವಾರ್ಡ್ಗೆ ಸೇರಿದ ಮುನಿಯಪ್ಪನ ದೊಡ್ಡಿ ಗ್ರಾಮದಲ್ಲಿ ೨೫ರಿಂದ ೩೦ ಮನೆಗಳು ಇದ್ದು ನೂರಕ್ಕೂ ಹೆಚ್ಚು ಜನರು ವಾಸ ಮಾಡುತ್ತಿದ್ದಾರೆ. ಆದರೆ ಇದುವರೆಗೂ ಯಾವುದೇ ಮೂಲಸೌಲಭ್ಯ ಸಿಗದೇ ಪ್ರತಿನಿತ್ಯ ಕಷ್ಟದಲ್ಲಿಯೇ ಜೀವನ ನಡೆಸುತ್ತಿದ್ದಾರೆ.
ಗ್ರಾಮದಲ್ಲಿ ಇದುವರೆಗೂ ಸುಸಜ್ಜಿತವಾದ ಚರಂಡಿಯನ್ನೇ ನಿರ್ಮಾಣ ಮಾಡಿಲ್ಲ. ಇದರಿಂದ ರಸ್ತೆಯಲ್ಲಿಯೇ ಚರಂಡಿ ನೀರು ಹರಿಯುತ್ತದೆ. ಅಧಿಕಾರಿಗಳು ಗ್ರಾಮಕ್ಕೆ ಅಗತ್ಯ ಸೌಲಭ್ಯ ಒದಗಿಸುವಲ್ಲಿ ವಿಫಲವಾಗಿದ್ದಾರೆ ಎನ್ನುವುದು ಗ್ರಾಮಸ್ಥರ ಆರೋಪ.
ಗ್ರಾಮದಿಂದ ರಾಮಾಪುರ ಗ್ರಾಮದ ಶಾಲಾ ಕಾಲೇಜುಗಳಿಗೆ ೩೦ಕ್ಕೂ ಹೆಚ್ಚು ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು ಪ್ರತಿನಿತ್ಯ ಹೋಗುವಾಗ ೨ ಕಿ.ಮೀ., ಬರುವಾಗ ೨ ಕಿ.ಮೀ. ನಡೆದುಕೊಂಡು ಬರಬೇಕಿದೆ. ಅನೇಕರು ಶಾಲೆ ಬಿಡುವಂತಹ ಸನ್ನಿವೇಶ ಸೃಷ್ಟಿಯಾಗಿದೆ. ಹಾಗಾಗಿ ತಾತ್ಕಾಲಿಕವಾಗಿಯಾದರೂ ವಾಹನ ವ್ಯವಸ್ಥೆಯನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮಾಡಬೇಕೆನ್ನುವುದು ಗ್ರಾಮಸ್ಥರ ಆಗ್ರಹ.
ಗ್ರಾಮದಲ್ಲಿ ಕುಡಿಯುವ ನೀರಿನ ಅಭಾವ ಎದುರಾಗಿದೆ. ಒಂದು ಮನೆಗೆ ಐದು ಬಿಂದಿಗೆ ನೀರು ಸಿಗುವುದೇ ಕಷ್ಟಕರವಾಗಿದೆ. ಜೆಜೆಎಂ ಕಾಮಗಾರಿ ಪೂರ್ಣಗೊಳ್ಳದೆ ಇರುವುದರಿಂದ ಕುಡಿಯುವ ನೀರಿಗೂ ತೊಂದರೆಯಾಗಿದೆ.
ಗ್ರಾಮವು ರಾಮಾಪುರ ಗ್ರಾಪಂ ಕೇಂದ್ರ ಸ್ಥಾನದಿಂದ ಕೇವಲ ೨-೩ ಕಿ.ಮೀ. ದೂರದಲ್ಲಿದ್ದರೂ ಅಗತ್ಯ ಸೌಲಭ್ಯಗಳಿಂದ ವಂಚಿತವಾಗಿದೆ. ಮುಂದಿನ ದಿನಗಳಲ್ಲಿ ಸೌಲಭ್ಯ ಕಲ್ಪಿಸದಿದ್ದರೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
” ನಮ್ಮ ಗ್ರಾಮಕ್ಕೆ ಜನಪ್ರತಿನಿಧಿಗಳು ಮೂಲಸೌಲಭ್ಯ ಕಲ್ಪಿಸಿಕೊಡದೆ ಇರುವುದರಿಂದ ಬಹಳ ತೊಂದರೆಯಾಗುತ್ತಿದೆ. ಈ ಬಗ್ಗೆ ಹಲವಾರು ಬಾರಿ ಗ್ರಾಪಂಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಸಾರಿಗೆ ವ್ಯವಸ್ಥೆ ಇಲ್ಲದೆ ನಮ್ಮ ಮಕ್ಕಳು ಶಾಲೆಗೆ ನಡೆದುಕೊಂಡೇ ಹೋಗಬೇಕಿದೆ.”
ಸೆಲ್ವರಾಜ್, ಗ್ರಾಮಸ್ಥ.
” ಮುನಿಯಪ್ಪನ ದೊಡ್ಡಿ ಗ್ರಾಮದಲ್ಲಿ ಮೂಲಸೌಲಭ್ಯ ಇಲ್ಲದಿರುವುದು ನನ್ನ ಗಮನಕ್ಕೆ ಬಂದಿರಲಿಲ್ಲ. ಗ್ರಾಮಕ್ಕೆ ಭೇಟಿ ನೀಡಿ ಅಗತ್ಯ ಸೌಲಭ್ಯವನ್ನು ಕಲ್ಪಿಸಲು ಕ್ರಮ ವಹಿಸಲಾಗುವುದು.”
ಉಮೇಶ್, ತಾಪಂ ಇಒ
ಬೆಂಗಳೂರು : ಮಂಡ್ಯ, ಚಾಮರಾಜನಗರ, ಹೊಳೆನರಸೀಪುರದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುವ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ತುರ್ತು ಸೇವೆಗಳ ಅನುಕೂಲಕ್ಕಾಗಿ ಆಸ್ಪತ್ರೆಯಲ್ಲಿ…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್…
ಬೆಂಗಳೂರು: ರಾಜ್ಯದ ಸರ್ಕಾರಿ ವೈದ್ಯರು ತಮ್ಮ ದೀರ್ಘಕಾಲದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್.11ರಿಂದ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಕರೆ…
ಬೆಂಗಳೂರು: ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು…
ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಅವರ ಪಿಎ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರು ನಗರದ ಉಪ್ಪಾರಪೇಟೆ…
ಚೆನ್ನೈ: ನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ವಿಜಯ್ ಅವರಿಗೆ ಸಿಬಿಐ ಮತ್ತೆ ಸಮನ್ಸ್ ನೀಡಿದೆ. ಕಳೆದ…