Andolana originals

ಮೂಲಸೌಕರ್ಯ ವಂಚಿತ ಮುನಿಯಪ್ಪನ ದೊಡ್ಡಿ ಗ್ರಾಮ

ಮಹಾದೇಶ್ ಎಂ.ಗೌಡ

ಕುಡಿಯುವ ನೀರು, ಚರಂಡಿ, ಸಾರಿಗೆ ವ್ಯವಸ್ಥೆ ಕಲ್ಪಿಸಲು ಗ್ರಾಮಸ್ಥರ ಆಗ್ರಹ 

ಹನೂರು: ಕುಡಿಯುವ ನೀರಿಗೆ ಹಾಹಾಕಾರ, ಶಾಲೆಗೆ ಪ್ರತಿನಿತ್ಯ ಎರಡು ಕಿ.ಮೀ. ಕಾಲ್ನಡಿಗೆಯಲ್ಲಿ ತೆರಳುವ ಮಕ್ಕಳು… ಇದು ಹನೂರು ತಾಲ್ಲೂಕಿನ ರಾಮಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುನಿಯಪ್ಪನ ದೊಡ್ಡಿ ಗ್ರಾಮದ ದುಸ್ಥಿತಿ.

ರಾಮಾಪುರ ಗ್ರಾಪಂ ವ್ಯಾಪ್ತಿಯ ಗೆಜ್ಜಲನತ್ತ ವಾರ್ಡ್‌ಗೆ ಸೇರಿದ ಮುನಿಯಪ್ಪನ ದೊಡ್ಡಿ ಗ್ರಾಮದಲ್ಲಿ ೨೫ರಿಂದ ೩೦ ಮನೆಗಳು ಇದ್ದು ನೂರಕ್ಕೂ ಹೆಚ್ಚು ಜನರು ವಾಸ ಮಾಡುತ್ತಿದ್ದಾರೆ. ಆದರೆ ಇದುವರೆಗೂ ಯಾವುದೇ ಮೂಲಸೌಲಭ್ಯ ಸಿಗದೇ ಪ್ರತಿನಿತ್ಯ ಕಷ್ಟದಲ್ಲಿಯೇ ಜೀವನ ನಡೆಸುತ್ತಿದ್ದಾರೆ.

ಗ್ರಾಮದಲ್ಲಿ ಇದುವರೆಗೂ ಸುಸಜ್ಜಿತವಾದ ಚರಂಡಿಯನ್ನೇ ನಿರ್ಮಾಣ ಮಾಡಿಲ್ಲ. ಇದರಿಂದ ರಸ್ತೆಯಲ್ಲಿಯೇ ಚರಂಡಿ ನೀರು ಹರಿಯುತ್ತದೆ. ಅಧಿಕಾರಿಗಳು ಗ್ರಾಮಕ್ಕೆ ಅಗತ್ಯ ಸೌಲಭ್ಯ ಒದಗಿಸುವಲ್ಲಿ ವಿಫಲವಾಗಿದ್ದಾರೆ ಎನ್ನುವುದು ಗ್ರಾಮಸ್ಥರ ಆರೋಪ.

ಗ್ರಾಮದಿಂದ ರಾಮಾಪುರ ಗ್ರಾಮದ ಶಾಲಾ ಕಾಲೇಜುಗಳಿಗೆ ೩೦ಕ್ಕೂ ಹೆಚ್ಚು ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು ಪ್ರತಿನಿತ್ಯ ಹೋಗುವಾಗ ೨ ಕಿ.ಮೀ., ಬರುವಾಗ ೨ ಕಿ.ಮೀ. ನಡೆದುಕೊಂಡು ಬರಬೇಕಿದೆ. ಅನೇಕರು ಶಾಲೆ ಬಿಡುವಂತಹ ಸನ್ನಿವೇಶ ಸೃಷ್ಟಿಯಾಗಿದೆ. ಹಾಗಾಗಿ ತಾತ್ಕಾಲಿಕವಾಗಿಯಾದರೂ ವಾಹನ ವ್ಯವಸ್ಥೆಯನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮಾಡಬೇಕೆನ್ನುವುದು ಗ್ರಾಮಸ್ಥರ ಆಗ್ರಹ.

ಗ್ರಾಮದಲ್ಲಿ ಕುಡಿಯುವ ನೀರಿನ ಅಭಾವ ಎದುರಾಗಿದೆ. ಒಂದು ಮನೆಗೆ ಐದು ಬಿಂದಿಗೆ ನೀರು ಸಿಗುವುದೇ ಕಷ್ಟಕರವಾಗಿದೆ. ಜೆಜೆಎಂ ಕಾಮಗಾರಿ ಪೂರ್ಣಗೊಳ್ಳದೆ ಇರುವುದರಿಂದ ಕುಡಿಯುವ ನೀರಿಗೂ ತೊಂದರೆಯಾಗಿದೆ.

ಗ್ರಾಮವು ರಾಮಾಪುರ ಗ್ರಾಪಂ ಕೇಂದ್ರ ಸ್ಥಾನದಿಂದ ಕೇವಲ ೨-೩ ಕಿ.ಮೀ. ದೂರದಲ್ಲಿದ್ದರೂ ಅಗತ್ಯ ಸೌಲಭ್ಯಗಳಿಂದ ವಂಚಿತವಾಗಿದೆ. ಮುಂದಿನ ದಿನಗಳಲ್ಲಿ ಸೌಲಭ್ಯ ಕಲ್ಪಿಸದಿದ್ದರೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

” ನಮ್ಮ ಗ್ರಾಮಕ್ಕೆ ಜನಪ್ರತಿನಿಧಿಗಳು ಮೂಲಸೌಲಭ್ಯ ಕಲ್ಪಿಸಿಕೊಡದೆ ಇರುವುದರಿಂದ ಬಹಳ ತೊಂದರೆಯಾಗುತ್ತಿದೆ. ಈ ಬಗ್ಗೆ ಹಲವಾರು ಬಾರಿ ಗ್ರಾಪಂಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಸಾರಿಗೆ ವ್ಯವಸ್ಥೆ ಇಲ್ಲದೆ ನಮ್ಮ ಮಕ್ಕಳು ಶಾಲೆಗೆ ನಡೆದುಕೊಂಡೇ ಹೋಗಬೇಕಿದೆ.”

ಸೆಲ್ವರಾಜ್, ಗ್ರಾಮಸ್ಥ.

” ಮುನಿಯಪ್ಪನ ದೊಡ್ಡಿ ಗ್ರಾಮದಲ್ಲಿ ಮೂಲಸೌಲಭ್ಯ ಇಲ್ಲದಿರುವುದು ನನ್ನ ಗಮನಕ್ಕೆ ಬಂದಿರಲಿಲ್ಲ. ಗ್ರಾಮಕ್ಕೆ ಭೇಟಿ ನೀಡಿ ಅಗತ್ಯ ಸೌಲಭ್ಯವನ್ನು ಕಲ್ಪಿಸಲು ಕ್ರಮ ವಹಿಸಲಾಗುವುದು.”

ಉಮೇಶ್, ತಾಪಂ ಇಒ

ಆಂದೋಲನ ಡೆಸ್ಕ್

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

12 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

14 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

15 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

15 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

18 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago