Andolana originals

ಮಗುವಿನ ಉಳಿವಿಗೆ ಬೇಕಿದೆ ದಾನಿಗಳ ನೆರವು ‌

ಎಸ್‌ಎಂಎ ಎಂಬ ಮಾರಣಾಂತಿಕ ಕಾಯಿಲೆಗೆ ತುತ್ತಾದ ಮಗು; ಚಿಕಿತ್ಸೆಗೆ ಬೇಕು 16 ಕೋಟಿ ರೂ

ಅನಿಲ್ ಅಂತರಸಂತೆ
ಅಂತರಸಂತೆ: ಅಪರೂಪದ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ಮಗುವೊಂದಕ್ಕೆ ಚಿಕಿತ್ಸೆಗಾಗಿ ಬರೋಬ್ಬರಿ ೧೬ ಕೋಟಿ ರೂ. ವೆಚ್ಚವಾಗಲಿದ್ದು, ಪೋಷಕರು ದಾನಿಗಳಿಂದ ನೆರವು ಅಪೇಕ್ಷಿಸಿದ್ದಾರೆ.

ಎಚ್. ಡಿ. ಕೋಟೆ ತಾಲ್ಲೂಕಿನ ಹೆಬ್ಬಲಗುಪ್ಪೆ ಗ್ರಾಮದವರಾದ, ಈಗ ಮೈಸೂರಿನಲ್ಲಿ ನೆಲೆಸಿರುವ ಎಚ್. ನಾಗಶ್ರೀ ಮತ್ತು ಎನ್. ಕಿಶೋರ್ ದಂಪತಿಯ ಪುತ್ರಿ ಒಂದು ವರ್ಷ ಹತ್ತು ತಿಂಗಳಿನ ಕೆ. ಕೀರ್ತನ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿದ್ದಾಳೆ.

ಕೀರ್ತನಾ ಎಸ್‌ಎಂಎ (ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ) ಅಂದರೆ ಬೆನ್ನು ಮೂಳೆಯ ಸ್ನಾಯು ಕ್ಷೀಣತೆಯಾಗುವ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿದ್ದು, ಸಂಪೂರ್ಣ ಚಿಕಿತ್ಸೆಗೆ ೧೬ ಕೋಟಿ ರೂ. ವೆಚ್ಚವಾಗಲಿದೆ ಎಂದು ವೈದ್ಯರು ಸೂಚಿಸಿದ್ದಾರೆ.

ಮಗುವಿಗೆ ಬಂದಿರುವ ಕಾಯಿಲೆಯಿಂದ ಕುಟುಂಬ ಸ್ಥರು ಕಂಗಾಲಾಗಿದ್ದು, ಅಷ್ಟೊಂದು ಮೊತ್ತವನ್ನು ಭರಿಸಲು ಸಾಧ್ಯವಾಗದೆ, ಮಗುವಿನ ಚಿಕಿತ್ಸೆಗೆ ದಾನಿಗಳು ಸಹಾಯ ಮಾಡುವಂತೆ ಅಂಗಲಾಚಿದ್ದಾರೆ.

ಕಾಯಿಲೆಗೆ ತುತ್ತಾಗಿರುವ ಕೀರ್ತನಾಗೆ ದಿನೇ ದಿನೇ ಉಸಿರಾಟದ ಸಮಸ್ಯೆ ಹೆಚ್ಚಾಗುತ್ತಿದೆ. ಮೂಳೆಯ ಸ್ನಾಯು ಕ್ಷೀಣಿಸುತ್ತಾ ಬಂದಿದ್ದು, ಮಗುವನ್ನು ಉಳಿಸಿ ಕೊಳ್ಳಲು ಕುಟುಂಬ ಹರಸಾಹಸ ಪಡುತ್ತಿದೆ. ಮಗುವಿನ ತಾಯಿ ನಾಗಶ್ರೀ ಎಚ್. ಡಿ. ಕೋಟೆಯ ಹುಣಸೇಕುಪ್ಪೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ. ತಂದೆ ಕಿಶೋರ್ ಸರ್ಕಾರಿ ನೌಕರರಾಗಿದ್ದಾರೆ.

ಸದ್ಯ ಕಾಯಿಲೆಯಿಂದ ಬಳಲುತ್ತಿರುವ ಮಗುವಿಗೆ ಸೊಂಟದಿಂದ ಕೆಳಗಿನ ಅವಯವಗಳು ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವೇ ತಿಂಗಳೊಳಗೆ ಚಿಕಿತ್ಸೆ ಮತ್ತು ಔಷಧ ಸಿಗದಿದ್ದರೆ ಇನ್ನಿತರ ಅಂಗಗಳೂ ಸಾಮರ್ಥ್ಯ ಕಳೆದುಕೊಳ್ಳಬಹುದು ಎಂದು ವೈದ್ಯರು ತಿಳಿಸಿದ್ದಾರೆ. ಇದರೊಂದಿಗೆ ಸ್ನಾಯು ದುರ್ಬಲಗೊಂಡು, ಚಲನೆ ಕಷ್ಟವಾಗುತ್ತಿದೆ. ಮಿದುಳಿನ ಕೋಶ ಮತ್ತು ಬೆನ್ನೆಲುಬಿನ ರಕ್ತನಾಳ ಕೊಳೆಯಲು ಆರಂಭಿಸುತ್ತವೆ. ಇದರಿಂದ ಉಸಿರಾಟಕ್ಕೆ ತೊಂದರೆಯಾಗುತ್ತದೆ.

ಇಂತಹ ಮಾರಣಾಂತಿಕ ಕಾಯಿಲೆಗೆ ಅಮೆರಿಕಾದಿಂದ ಜೆಲ್‌ಜೆನ್ಸ್‌ಮಾ ಎಂಬ ಔಷಧಿಯನ್ನು ತರಿಸಿ ಚಿಕಿತ್ಸೆ ಕೊಡಿಸಬೇಕಿದೆ. ಇದರ ಬೆಲೆ ೧೬ ಕೋಟಿ ರೂ. ಗಳಾಗಿದೆ. ಮಗುವಿನ ಉಳಿವಿಗಾಗಿ ತಂದೆ, ತಾಯಿ ಸಹಾಯಕ್ಕಾಗಿ ಮನವಿ ಮಾಡಿದ್ದಾರೆ. ಸಹಾಯ ಮಾಡ ಬಯಸುವ ದಾನಿಗಳ ನೆರವಿನಿಂದ ಮಗುವಿನ ಜೀವ ಉಳಿಸಬಹುದಾಗಿದೆ.

ನಮ್ಮ ಒಬ್ಬಳೇ ಮಗಳಾದ ಕೆ. ಕೀರ್ತನ ಸ್ಪೈನಲ್ ಮಸ್ಕ್ಯುಲರ್ ಆಟ್ರೋಫಿ ಎಂಬ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿದ್ದು, ಅವಳ ಲೋಯರ್ ಲಿಂಬ್ಸ್ ಸಂಪೂರ್ಣವಾಗಿ ದುರ್ಬಲವಾಗುತ್ತಿದೆ. ಓರಲ್ ಚಿಕಿತ್ಸೆಗೆ ಪ್ರತಿ ವರ್ಷಕ್ಕೆ ೫೦ ಲಕ್ಷ ರೂ. ಬೇಕಾಗಿದ್ದು, ಸಂಪೂರ್ಣ ಗುಣವಾಗಲು ಶಾಶ್ವತ ಜೀನ್ ಥೆರಪಿ ಮಾಡಿಸಬೇಕಿದೆ. ಇದಕ್ಕಾಗಿ ೧೬ ಕೋಟಿ ರೂ. ವೆಚ್ಚ ತಗುಲಲಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇಷ್ಟು ಹಣವನ್ನು ನಮ್ಮಿಂದ ಹೊಂದಿಸಲು ಸಾಧ್ಯವಿಲ್ಲ. ದಾನಿಗಳು ತಮ್ಮ ಸಹಾಯಸ್ತ ಚಾಚಿದರೆ ನಾವು ನಮ್ಮ ಮಗುವನ್ನು ಉಳಿಸಿಕೊಳ್ಳುತ್ತೇವೆ.
ಎಚ್. ನಾಗಶ್ರೀ ಮತ್ತು ಎನ್. ಕಿಶೋರ್, ಮೈಸೂರು.

ಸಹಾಯ ಮಾಡಲು ಇಚ್ಛಿಸುವವರು ಸ್ಟೇಟ್ ಬ್ಯಾಂಕ್ ಆ- ಇಂಡಿಯಾ ಶಾಖೆ: ದೇವರಾಜ ಅರಸ್ ರಸ್ತೆ, ಮೈಸೂರು. ಖಾತೆದಾರರ ಹೆಸರು: ಕೆ. ಕೀರ್ತನಾ ಖಾತೆ ಸಂಖ್ಯೆ: ೪೩೫೩೨೫೮೮೪೨೯ ಐಎಫ್ಎಸ್‌ಸಿ ಕೋಡ್: ಎಸ್‌ಬಿಐಎನ್ ೦೦೭೦೨೭೦ ಸಂಪರ್ಕ ಸಂಖ್ಯೆ: ೯೯೮೦೬೯೦೨೩೪, ೯೯೦೧೨೬೨೨೦೬

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

6 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

7 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

8 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

8 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

13 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

13 hours ago