Andolana originals

ಸುಳ್ಳು ಸುದ್ದಿ ನಂಬಬೇಡಿ: ಪ್ರಮೋದಾದೇವಿ ಒಡೆಯರ್‌

ರಾಜಮನೆತನದ ಆಸ್ತಿ ಹೆಸರಿನಲ್ಲಿ ವಂಚನೆ ಹುನ್ನಾರ 

ಮೈಸೂರು: ನಗರದ ಹಲವು ಕಡೆಗಳಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬೇರೊಬ್ಬರಿಗೆ ಮಾರಾಟ ಮಾಡಿ ವಂಚಿಸುತ್ತಿರುವ ಪ್ರಕರಣಗಳು ನಡೆಯುತ್ತಲೇ ಇದ್ದು, ಇದೀಗ ರಾಜಮನೆತನಕ್ಕೆ ಸೇರಿದ ಜಮೀನಿನ ವಿಚಾರದಲ್ಲಿ ಕೆಲವರು ಸುಳ್ಳು ಸುದ್ದಿ ಹಬ್ಬಿಸಿರುವ ಪ್ರಕರಣ ನಡೆದಿದೆ.

ಮೈಸೂರಿನ ಕಸಬಾ ಹೋಬಳಿಯ ಕುರುಬರಹಳ್ಳಿಯ ಸರ್ವೆ ನಂಬರ್ ೪ರಲ್ಲಿ ಕಾನೂನುಬದ್ಧ ನಮ್ಮ ಸ್ವಾಽನದಲ್ಲಿರುವ ಸುಮಾರು ೧೪ ಎಕರೆ ಭೂಮಿಗೆ ಸಂಬಂಧಿಸಿದಂತೆ ಕೆಲವು ದುಷ್ಕರ್ಮಿಗಳು ವಾಟ್ಸಾಪ್ ಮೂಲಕ ಸುಳ್ಳು, ದಾರಿತಪ್ಪಿಸುವಮತ್ತು ಮೋಸದ ಮಾಹಿತಿಯನ್ನು ಹರಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ ಎಂದು ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಹೇಳಿದ್ದಾರೆ.

ಒ.ಎಸ್.ಸಂಖ್ಯೆ ೧೪೦೦/೨೦೨೪ರಲ್ಲಿನ ಮೊಕದ್ದಮೆಗೆ ಸಂಬಂಧಿಸಿದಂತೆ ಮೈಸೂರಿನ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯದ ಮುಂದೆ ಪ್ರಕರಣ ಬಾಕಿ ಇದೆ. ಇದರಲ್ಲಿ ಆಸ್ತಿಯ ಸ್ವರೂಪ ಮತ್ತು ಸ್ವಾಧೀನಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವ ಮಧ್ಯಂತರ ಆದೇಶ ಜಾರಿಯಲ್ಲಿರುವ ಜತೆಗೆ, ನ್ಯಾಯಾಲಯದಲ್ಲಿ ಈ ವಿಷಯವು ಪ್ರಸ್ತುತ ವಿಚಾರಣೆಯಲ್ಲಿದೆ. ಲಲಿತ ಮಹಲ್ ಬಳಿಯ ಈ ೧೪ ಎಕರೆ ಭೂಮಿಯನ್ನು ನಮ್ಮ ಸ್ವಎಚ್ಚರಿಕೆ ಅಡಿಯಲ್ಲಿ ಜಂಟಿ ಉದ್ಯಮಕ್ಕಾಗಿ ನೀಡಲಾಗುತ್ತಿದೆ ಎಂದು ಸುಳ್ಳು ಹೇಳುವ ಸಂದೇಶದೊಂದಿಗೆ ಈ ವಿಡಿಯೋವನ್ನು ಸೇರಿಸಲಾಗಿದೆ ಮತ್ತು ಎನ್‌ಒಸಿ ಖಚಿತವಾಗಿದೆ ಎಂದು ಮತ್ತಷ್ಟು ಸುಳ್ಳು ಹೇಳಲಾಗಿದೆ. ಈ ವಾಟ್ಸಾಪ್ ಸುದ್ದಿ ಸಂಪೂರ್ಣವಾಗಿ ಸುಳ್ಳು, ಆಧಾರರಹಿತವಾಗಿದೆ. ಈ ಸಂದೇಶವು ೨೦ ಕೋಟಿ ರೂ. ಮರು ಪಾವತಿಸಬಹುದಾದ ಮುಂಗಡ ವನ್ನು ಸಹ ಕೋರುತ್ತದೆ. ಇದು ಸಾರ್ವ ಜನಿಕರನ್ನು ವಂಚಿಸಲು ಉದ್ದೇಶಪೂರ್ವಕ ಪ್ರಯತ್ನವಲ್ಲದೆ ಬೇರೇನೂ ಅಲ್ಲ ಎಂದು ಹೇಳಿದ್ದಾರೆ.

ಜಮೀನಿಗೆ ಸಂಬಂಧಿಸಿದಂತೆ ಸುಳ್ಳು ಹೇಳಲಾದ ವ್ಯಕ್ತಿಗಳ ವಂಚನೆ, ತಪ್ಪು ನಿರೂಪಣೆ ಮತ್ತು ಕ್ರಿಮಿನಲ್ ವಂಚನೆ ಮತ್ತು ಕಾನೂನು ಬಾಹಿರವಾಗಿ ದುರುಪಯೋಗಪಡಿಸಿ ಕೊಳ್ಳಲು ಉದ್ದೇಶಿಸಿರುವ ಕೃತ್ಯವೆಂದು ಹೇಳಬಹುದಾಗಿದೆ. ಈ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಈ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ ಮತ್ತು ಈ ವ್ಯಕ್ತಿಗಳ ಇಂತಹ ಸುಳ್ಳು ನಿರೂಪಣೆಗಳ ಆಧಾರದ ಮೇಲೆ ವಂಚನೆಗೆ ಬಲಿ ಯಾಗಬೇಡಿ ಹಾಗೂ ಹೇಳಲಾದ ಆಸ್ತಿಗೆ ಸಂಬಂಧಿಸಿದಂತೆ ಯಾವುದೇ ವಹಿವಾಟಿನಲ್ಲಿ ಭಾಗವಹಿಸಬೇಡಿ ಎಂದು ಮನವಿ ಮಾಡಿದ್ದಾರೆ.

ಮೈಸೂರು: ನಗರದ ಹಲವು ಕಡೆಗಳಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬೇರೊಬ್ಬರಿಗೆ ಮಾರಾಟ ಮಾಡಿ ವಂಚಿಸುತ್ತಿರುವ ಪ್ರಕ ರಣಗಳು ನಡೆಯುತ್ತಲೇ ಇದ್ದು, ಇದೀಗ ರಾಜಮನೆತನಕ್ಕೆ ಸೇರಿದ ಜಮೀನಿನ ವಿಚಾರದಲ್ಲಿ ಕೆಲವರು ಸುಳ್ಳು ಸುದ್ದಿ ಹಬ್ಬಿ ಸಿರುವ ಪ್ರಕರಣ ನಡೆದಿದೆ.

ಕಸಬಾ ಹೋಬಳಿಯ ಕುರುಬರ ಹಳ್ಳಿಯ ಸ.ನಂ.೪ರಲ್ಲಿ ನಮ್ಮ ಸ್ವಾಧೀನದಲ್ಲಿರುವ ೧೪ ಎಕರೆ ಅಳತೆಯ ಭೂಮಿಗೆ ಸಂಬಂಧಿಸಿದ ವಿಡಿಯೋವನ್ನು ಕೆಲವು ದುಷ್ಕರ್ಮಿಗಳು ವಾಟ್ಸಾಪ್ ಮೂಲಕ ಸಾರ್ವಜನಿಕರಿಗೆ ಸುಳ್ಳು, ದಾರಿತಪ್ಪಿಸುವ ಮತ್ತು ಮೋಸದ ಮಾಹಿತಿಯನ್ನು ಹರಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ ಎಂದು ರಾಜವಂಶಸ್ಥ ರಾದ ಪ್ರಮೋದಾದೇವಿ ಒಡೆಯರ್ ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

5 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

7 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

7 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

8 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

11 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

11 hours ago