ಓದುಗರ ಪತ್ರ
ವಿಶ್ವವಿಖ್ಯಾತ ದಸರಾಕ್ಕೆ ಮೈಸೂರಿನಲ್ಲಿ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ರಾಜ್ಯದ ವಿವಿಧ ಆನೆ ಶಿಬಿರಗಳಿಂದ ಮೈಸೂರಿಗೆ ಆಗಮಿಸಿರುವ ಆನೆಗಳು ರಾಜ ಬೀದಿಯಲ್ಲಿ ಪ್ರತಿನಿತ್ಯ ತಾಲೀಮು ನಡೆಸುತ್ತಿವೆ. ಪ್ರತಿನಿತ್ಯ ಆನೆಗಳು ಸಾಗುವ ರಾಜಬೀದಿಯಲ್ಲಿ ಪಟಾಕಿ ಸದ್ದು, ಮೋಟಾರ್ ಗಾಡಿಗಳ ಕರ್ಕಶವಾದ ಶಬ್ದ, ತಮಟೆ, ಧ್ವನಿವರ್ಧಕಗಳ ಸದ್ದುಗಳಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಒಳಿತು.
ಆನೆಗಳು ರಸ್ತೆಗಿಳಿದ ಕೂಡಲೇ ಕರ್ಕಶವಾದ ಶಬ್ದಗಳಿಂದ ಗಾಬರಿಯಾಗಿ ದಿಕ್ಕೆಟ್ಟು ಓಡಿದರೆ ಅನಾಹುತಗಳಾಗುವ ಸಾಧ್ಯತೆಯಿರುತ್ತದೆ. ಆದ್ದರಿಂದ ದಸರಾ ಆನೆಗಳು ತಾಲೀಮಿಗೆ ಬರುವ ರಾಜ ಬೀದಿಗಳಲ್ಲಿ ನಿಶ್ಶಬ್ದ ವಾತಾವರಣವನ್ನು ಕಲ್ಪಿಸುವ ಮೂಲಕ ಅವು ನಮ್ಮ ಪರಿಸರಕ್ಕೆ ಹೊಂದಿಕೊಳ್ಳಲು ಅವಕಾಶ ನೀಡುವುದು ಅಗತ್ಯ.
-ಎಂ.ಎಸ್.ಉಷಾ ಪ್ರಕಾಶ್, ಎಸ್.ಬಿ.ಎಂ.ಕಾಲೋನಿ, ಮೈಸೂರು
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…