ಓದುಗರ ಪತ್ರ
ವಿಶ್ವವಿಖ್ಯಾತ ದಸರಾಕ್ಕೆ ಮೈಸೂರಿನಲ್ಲಿ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ರಾಜ್ಯದ ವಿವಿಧ ಆನೆ ಶಿಬಿರಗಳಿಂದ ಮೈಸೂರಿಗೆ ಆಗಮಿಸಿರುವ ಆನೆಗಳು ರಾಜ ಬೀದಿಯಲ್ಲಿ ಪ್ರತಿನಿತ್ಯ ತಾಲೀಮು ನಡೆಸುತ್ತಿವೆ. ಪ್ರತಿನಿತ್ಯ ಆನೆಗಳು ಸಾಗುವ ರಾಜಬೀದಿಯಲ್ಲಿ ಪಟಾಕಿ ಸದ್ದು, ಮೋಟಾರ್ ಗಾಡಿಗಳ ಕರ್ಕಶವಾದ ಶಬ್ದ, ತಮಟೆ, ಧ್ವನಿವರ್ಧಕಗಳ ಸದ್ದುಗಳಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಒಳಿತು.
ಆನೆಗಳು ರಸ್ತೆಗಿಳಿದ ಕೂಡಲೇ ಕರ್ಕಶವಾದ ಶಬ್ದಗಳಿಂದ ಗಾಬರಿಯಾಗಿ ದಿಕ್ಕೆಟ್ಟು ಓಡಿದರೆ ಅನಾಹುತಗಳಾಗುವ ಸಾಧ್ಯತೆಯಿರುತ್ತದೆ. ಆದ್ದರಿಂದ ದಸರಾ ಆನೆಗಳು ತಾಲೀಮಿಗೆ ಬರುವ ರಾಜ ಬೀದಿಗಳಲ್ಲಿ ನಿಶ್ಶಬ್ದ ವಾತಾವರಣವನ್ನು ಕಲ್ಪಿಸುವ ಮೂಲಕ ಅವು ನಮ್ಮ ಪರಿಸರಕ್ಕೆ ಹೊಂದಿಕೊಳ್ಳಲು ಅವಕಾಶ ನೀಡುವುದು ಅಗತ್ಯ.
-ಎಂ.ಎಸ್.ಉಷಾ ಪ್ರಕಾಶ್, ಎಸ್.ಬಿ.ಎಂ.ಕಾಲೋನಿ, ಮೈಸೂರು
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…