ಓದುಗರ ಪತ್ರ
ವಿಶ್ವವಿಖ್ಯಾತ ದಸರಾಕ್ಕೆ ಮೈಸೂರಿನಲ್ಲಿ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ರಾಜ್ಯದ ವಿವಿಧ ಆನೆ ಶಿಬಿರಗಳಿಂದ ಮೈಸೂರಿಗೆ ಆಗಮಿಸಿರುವ ಆನೆಗಳು ರಾಜ ಬೀದಿಯಲ್ಲಿ ಪ್ರತಿನಿತ್ಯ ತಾಲೀಮು ನಡೆಸುತ್ತಿವೆ. ಪ್ರತಿನಿತ್ಯ ಆನೆಗಳು ಸಾಗುವ ರಾಜಬೀದಿಯಲ್ಲಿ ಪಟಾಕಿ ಸದ್ದು, ಮೋಟಾರ್ ಗಾಡಿಗಳ ಕರ್ಕಶವಾದ ಶಬ್ದ, ತಮಟೆ, ಧ್ವನಿವರ್ಧಕಗಳ ಸದ್ದುಗಳಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಒಳಿತು.
ಆನೆಗಳು ರಸ್ತೆಗಿಳಿದ ಕೂಡಲೇ ಕರ್ಕಶವಾದ ಶಬ್ದಗಳಿಂದ ಗಾಬರಿಯಾಗಿ ದಿಕ್ಕೆಟ್ಟು ಓಡಿದರೆ ಅನಾಹುತಗಳಾಗುವ ಸಾಧ್ಯತೆಯಿರುತ್ತದೆ. ಆದ್ದರಿಂದ ದಸರಾ ಆನೆಗಳು ತಾಲೀಮಿಗೆ ಬರುವ ರಾಜ ಬೀದಿಗಳಲ್ಲಿ ನಿಶ್ಶಬ್ದ ವಾತಾವರಣವನ್ನು ಕಲ್ಪಿಸುವ ಮೂಲಕ ಅವು ನಮ್ಮ ಪರಿಸರಕ್ಕೆ ಹೊಂದಿಕೊಳ್ಳಲು ಅವಕಾಶ ನೀಡುವುದು ಅಗತ್ಯ.
-ಎಂ.ಎಸ್.ಉಷಾ ಪ್ರಕಾಶ್, ಎಸ್.ಬಿ.ಎಂ.ಕಾಲೋನಿ, ಮೈಸೂರು
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…