ಓದುಗರ ಪತ್ರ
ಮೈಸೂರಿನಲ್ಲಿ ‘ಮನೆ ಮನೆಗೆ ಪೊಲೀಸ್’ ವಿನೂತನಕಾರ್ಯಕ್ರಮವನ್ನು ಮೈಸೂರು ನಗರ ಪೊಲೀಸ್ ಆಯುಕ್ತರು ಪರಿಚಯಿಸಿರುವುದು ಒಳ್ಳೆಯ ಬೆಳವಣಿಗೆ. ಇದು ಜನರು ಹಾಗೂ ಪೊಲೀಸರ ನಡುವಣ ಅಂತರವನ್ನು ಕಡಿಮೆ ಮಾಡಲಿದೆ.
ಜಾವಗಲ್ ಶ್ರೀನಾಥ್ ಅವರು ಜನರನ್ನು ಕೆಲಸದಿಂದ ಸಮಾಧಾನಪಡಿಸುವುದು ಕಷ್ಟವಿದೆ,ಪೊಲೀಸರು ಮನೆ ಮನೆಗೆ ಭೇಟಿ ನೀಡಿದರೆ ಕಾನೂನು ಸುವ್ಯವಸ್ಥೆ ಬಗ್ಗೆ ಜನರಲ್ಲಿ ಅರಿವು ಮೂಡಿ ಎಲ್ಲರಲ್ಲೂ ಸ್ನೇಹ ಭಾವ ಬೆಳೆದು ಇದೊಂದು ಅದ್ಭುತ ಕೆಲಸವಾಗುವುದರಲ್ಲಿ ಸಂಶಯವಿಲ್ಲ ಎಂದಿರುವುದು ನಿಜಕ್ಕೂ ವಾಸ್ತವ.
ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಸಮಾಜದಲ್ಲಿ ಶಾಂತಿಯುತ ವಾತಾವರಣ ನಿರ್ಮಾಣ ಮಾಡುವ ಉದ್ದೇಶದಿಂದ ಈ ಯೋಜನೆಯನ್ನು ಪರಿಚಯಿಸಿದ್ದು, ಮನೆ ಮನೆಗೆ ಬರುವ ಬೀಟ್ ಪೊಲೀಸರಿಗೆ ಜನರು ತಮ್ಮ ಬಡಾವಣೆಯ ಅನುಮಾನಾಸ್ಪದ ವಿಷಯಗಳ ಕುರಿತು ಸ್ಪಷ್ಟ ಮಾಹಿತಿ ನೀಡಬಹುದು. ಈ ಕಾರ್ಯಕ್ರಮ ಯಶಸ್ವಿಯಾಗಲು ನಾಗರಿಕರ ಬೆಂಬಲ ಅತ್ಯಗತ್ಯವಾಗಿದ್ದು, ನಗರದ ಶಾಂತಿ,ನೆಮ್ಮದಿಗಾಗಿ ನಾಗರಿಕರು ಪೊಲೀಸರ ಜೊತೆ ಸಹಕರಿಸಬೇಕಿದೆ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…