ಓದುಗರ ಪತ್ರ
ಮೈಸೂರಿನಲ್ಲಿ ‘ಮನೆ ಮನೆಗೆ ಪೊಲೀಸ್’ ವಿನೂತನಕಾರ್ಯಕ್ರಮವನ್ನು ಮೈಸೂರು ನಗರ ಪೊಲೀಸ್ ಆಯುಕ್ತರು ಪರಿಚಯಿಸಿರುವುದು ಒಳ್ಳೆಯ ಬೆಳವಣಿಗೆ. ಇದು ಜನರು ಹಾಗೂ ಪೊಲೀಸರ ನಡುವಣ ಅಂತರವನ್ನು ಕಡಿಮೆ ಮಾಡಲಿದೆ.
ಜಾವಗಲ್ ಶ್ರೀನಾಥ್ ಅವರು ಜನರನ್ನು ಕೆಲಸದಿಂದ ಸಮಾಧಾನಪಡಿಸುವುದು ಕಷ್ಟವಿದೆ,ಪೊಲೀಸರು ಮನೆ ಮನೆಗೆ ಭೇಟಿ ನೀಡಿದರೆ ಕಾನೂನು ಸುವ್ಯವಸ್ಥೆ ಬಗ್ಗೆ ಜನರಲ್ಲಿ ಅರಿವು ಮೂಡಿ ಎಲ್ಲರಲ್ಲೂ ಸ್ನೇಹ ಭಾವ ಬೆಳೆದು ಇದೊಂದು ಅದ್ಭುತ ಕೆಲಸವಾಗುವುದರಲ್ಲಿ ಸಂಶಯವಿಲ್ಲ ಎಂದಿರುವುದು ನಿಜಕ್ಕೂ ವಾಸ್ತವ.
ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಸಮಾಜದಲ್ಲಿ ಶಾಂತಿಯುತ ವಾತಾವರಣ ನಿರ್ಮಾಣ ಮಾಡುವ ಉದ್ದೇಶದಿಂದ ಈ ಯೋಜನೆಯನ್ನು ಪರಿಚಯಿಸಿದ್ದು, ಮನೆ ಮನೆಗೆ ಬರುವ ಬೀಟ್ ಪೊಲೀಸರಿಗೆ ಜನರು ತಮ್ಮ ಬಡಾವಣೆಯ ಅನುಮಾನಾಸ್ಪದ ವಿಷಯಗಳ ಕುರಿತು ಸ್ಪಷ್ಟ ಮಾಹಿತಿ ನೀಡಬಹುದು. ಈ ಕಾರ್ಯಕ್ರಮ ಯಶಸ್ವಿಯಾಗಲು ನಾಗರಿಕರ ಬೆಂಬಲ ಅತ್ಯಗತ್ಯವಾಗಿದ್ದು, ನಗರದ ಶಾಂತಿ,ನೆಮ್ಮದಿಗಾಗಿ ನಾಗರಿಕರು ಪೊಲೀಸರ ಜೊತೆ ಸಹಕರಿಸಬೇಕಿದೆ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…