Andolana originals

ಮಾಂದಲ್‌ಪಟ್ಟಿ ಜೀಪ್ ಸಫಾರಿಗೆ ದುಪ್ಪಟ್ಟು ಹಣ ವಸೂಲಿ..!

ಪ್ರವಾಸಿಗರ ಅಸಮಾಧಾನ; ವಿಡಿಯೋ ವೈರಲ್

ಮಡಿಕೇರಿ: ಕೊಡಗು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಮಾಂದಲ್‌ಪಟ್ಟಿ ಜೀಪ್ ಸಫಾರಿಗೆ ಪ್ರವಾಸಿಗರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿರುವ ಬಗ್ಗೆ ಪ್ರವಾಸಿಗರೊಬ್ಬರು ವಿಡಿಯೋವೊಂದನ್ನು ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಬೆಂಗಳೂರು ಮೂಲದ ಅಂಕಿತ್ ಎಂಬವರು ಕುಟುಂಬದೊಂದಿಗೆ ಜ.೨೫, ೨೬, ೨೭ ಕೊಡಗಿಗೆ ಪ್ರವಾಸ ಬಂದಿದ್ದರು. ಜ.೨೫ರ ಭಾನುವಾರ ಬೆಳಿಗ್ಗೆ ೪.೩೦ ಗಂಟೆಗೆ ಮಾಂದಲ್‌ಪಟ್ಟಿಗೆ ಜೀಪ್ ಸಫಾರಿಗೆ ತೆರಳಲು ನಿರ್ಧರಿಸಿದ್ದರು. ಜೀಪ್ ನಿಲ್ದಾಣದಲ್ಲಿ ಮಾಂದಲ್ ಪಟ್ಟಿಗೆ ೨,೫೦೦ ರೂ. ಎಂದು ಬೋರ್ಡ್ ಹಾಕಿದ್ದರೂ ಅಂಕಿತ್ ಕುಟುಂಬವನ್ನು ಕರೆದೊಯ್ದಿದ್ದ ಜೀಪ್ ಚಾಲಕ ೪,೦೦೦ ರೂ. ನೀಡಬೇಕೆಂದು ಪಟ್ಟುಹಿಡಿದಿದ್ದಾರೆ.

ಬಳಿಕ ಮಾಂದಲ್‌ಪಟ್ಟಿ ಬಳಿ ಒಳಗೆ ತೆರಳಲು ನಮ್ಮಿಂದ ಮತ್ತೆ ೫೦೦ ರೂ. ಪಡೆದುಕೊಂಡಿದ್ದಾರೆ. ಅಲ್ಲಿ ಜೀಪ್ ಚಾಲಕ ಸನ್‌ರೈಸ್ ನೋಡಲು ೪೦ ನಿಮಿಷ ಸಮಯವನ್ನು ನೀಡಿದ್ದರು. ಆದರೆ, ೧೦ ನಿಮಿಷ  ತಡವಾಗಿ ಬಂದಿದ್ದರಿಂದ ಮತ್ತೆ ೧,೦೦೦ ರೂ. ಹೆಚ್ಚಿಗೆ ನೀಡಬೇಕೆಂದು ಜೀಪ್ ಚಾಲಕ ಹೇಳಿದ್ದ ಎನ್ನಲಾಗಿದೆ. ಆದರೆ, ಇದಕ್ಕೆ ಒಪ್ಪದೆ ಒಟ್ಟು ೪,೫೦೦ ರೂ.ಗಳನ್ನು ಅಂಕಿತ್ ಪಾವತಿಸಿದ್ದರು. ಜೀಪ್ ಚಾಲಕ ಏರುದ್ವನಿಯಲ್ಲಿ ಮಾತನಾಡಿದಲ್ಲದೆ, ರ‍್ಯಾಶ್ ಆಗಿ ಜೀಪ್ ಚಲಾಯಿಸಿದ್ದರು.

ಈ ಸಂಬಂಧ ವೀಡಿಯೋ ಮೂಲಕ ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಆಡಳಿತಕ್ಕೆ ಮನವಿ ಮಾಡಿಕೊಂಡಿರುವ ಅಂಕಿತ್ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಅಲ್ಲದೆ, ಪ್ರವಾಸಿಗರು ಜೀಪ್ ಸಫಾರಿ ಹೋಗುವ ಮುನ್ನ ೨ ಬಾರಿ ಯೋಚಿಸುವಂತೆ ಮನವಿ ಮಾಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆ ಬಳಿಕ ಜೀಪ್ ಚಾಲಕ ಅಂಕಿತ್‌ಗೆ ಹೆಚ್ಚುವರಿಯಾಗಿ ಪಡೆದಿದ್ದ ಹಣವನ್ನು ಹಿಂತಿರುಗಿಸಿದ್ದಾರೆ ಎನ್ನಲಾಗಿದೆ.

ಸದ್ಯ ವೀಡಿಯೋ ವೈರಲ್ ಬೆನ್ನಲ್ಲೇ ಪೊಲೀಸರು ಕ್ರಮಕ್ಕೆ ಮುಂದಾಗಿದ್ದು, ಮಾಂದಲ್‌ಪಟ್ಟಿಗೆ ತೆರಳುವ ಜೀಪ್‌ಗಳ ದಾಖಲೆ ಪರಿಶೀಲನೆ ನಡೆಸಿ ಕ್ರಮ ಕೈಗೊಂಡಿದ್ದಾರೆ. ಈ ವೇಳೆ ಪ್ರವಾಸಿಗ ಆರೋಪ ಮಾಡಿದ್ದ ಜೀಪ್ ಚಾಲಕ ವೈಟ್ ಬೋರ್ಡ್ ವಾಹನಕ್ಕೆ ಯೆಲ್ಲೋ ಸ್ಟಿಕ್ಕರ್ ಹಾಕಿ ಚಲಾಯಿಸುತ್ತಿದ್ದದ್ದುದು ಬೆಳಕಿಗೆ ಬಂದಿದ್ದು, ಆರೋಪಿ ಶವಿನ್ ಕುಮಾರ್ ವಿರುದ್ಧ ಪ್ರಕರಣ ದಾಖಲಿಸಿ ವಾಹನ ಹಾಗೂ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಪೊಲೀಸ್, ಆರ್‌ಟಿಒ ಅಧಿಕಾರಿಗಳ ಎಚ್ಚರಿಕೆ: ಈ ವಿಚಾರ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಬುಧವಾರ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಆರ್ ಟಿಒ, ಜೀಪ್ ಚಾಲಕರ ಸಭೆ ನಡೆದಿದ್ದು, ನಿಗದಿತ ದರಕ್ಕಿಂತ ಹೆಚ್ಚಿನ ಹಣ ಪಡೆಯದಂತೆ ಸೂಚನೆ ನೀಡಲಾಗಿದೆ. ಜೊತೆಗೆ ಜೀಪ್ ಚಾಲಕರು ನಿಯಮವನ್ನು ಪಾಲಿಸಬೇಕೆಂದು ಸೂಚಿಸಲಾಗಿದೆ. ರ‍್ಯಾಶ್ ಡ್ರೈವಿಂಗ್, ಸಾರ್ವಜನಿಕರಿಗೆ ತೊಂದರೆ ನೀಡುವುದು, ಪ್ರವಾಸಿಗರೊಂದಿಗೆ ಉದ್ಧಟತನದಿಂದ ವರ್ತಿಸಿದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

16 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

19 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

21 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

21 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

21 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

21 hours ago