Andolana originals

ಡಾ. ವಸತಿ ಶಾಲೆಗಳಿಗೆ ದಾಖಲಾಗಲು ನಿರಾಸಕ್ತಿ

ಪ್ರಸಾದ್ ಲಕ್ಕೂರು

ಕನಿಷ್ಠ ಪ್ರಮಾಣದ ಪ್ರವೇಶಾತಿಯೂ ಇಲ್ಲ; ಮುಂದಿನ ವರ್ಷದಿಂದ ಹೆಚ್ಚು ದಾಖಲಾತಿಗೆ ಕ್ರಮ

ಚಾಮರಾಜನಗರ: ಜಿಲ್ಲಾ ಕೇಂದ್ರದಲ್ಲಿರುವ ೨ ಕ್ರೀಡಾ ವಸತಿ ಶಾಲೆಗಳಿಗೆ ಪ್ರವೇಶಾತಿ ಪಡೆಯಲು ವಿದ್ಯಾರ್ಥಿಗಳು ನಿರಾಸಕ್ತಿ ತೋರುತ್ತಿದ್ದಾರೆ. ಪೋಷಕರು ಕೂಡ ಮಕ್ಕಳನ್ನು ಸೇರಿಸಲು ಹಿಂದೇಟು ಹಾಕುತ್ತಿದ್ದಾರೆ.

ಈ ವಸತಿ ಶಾಲೆಗಳನ್ನು ಸರಿಯಾಗಿ ನಿರ್ವಹಣೆ ಮಾಡದಿರುವುದು, ಮಕ್ಕಳಿಗೆ ಸಮರ್ಪಕವಾಗಿ ಕ್ರೀಡಾ ತರಬೇತಿ ಸಿಗದಿರುವುದು, ಮೆನು ಪ್ರಕಾರ ಊಟ, ತಿಂಡಿ ದೊರಕದಿರುವುದು ಹಾಗೂ ಶಾಲೆಯ ಮಕ್ಕಳು ವಿಭಾಗೀಯ, ರಾಜ್ಯ, ರಾಷ್ಟ್ರ ಮಟ್ಟದ ಅಥ್ಲೆಟಿಕ್ಸ್ ಕ್ರೀಡೆಗಳಲ್ಲಿ ಪಾಲ್ಗೊಂಡು ಸಾಧನೆ ತೋರದಿರುವುದು ಮುಂತಾದ ಕಾರಣಗಳಿಂದ ದಾಖಲಾತಿ ಚೇತರಿಕೆ ಕಾಣುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ.

ಇದಲ್ಲದೆ ರಾಜ್ಯ ಸರ್ಕಾರದಿಂದ ನಿರೀಕ್ಷಿತ ಅನುದಾನ ಮತ್ತು ಅಗತ್ಯ ಮೂಲಸೌಕರ್ಯಗಳು ಸಿಗುತ್ತಿಲ್ಲ. ಶಾಲೆಗಳು ಅಥ್ಲೆಟಿಕ್ಸ್ ಕೀಡೆಯಲ್ಲಿ ಮುಂಚೂಣಿಲ್ಲಿರುವ ಮಕ್ಕಳನ್ನು ಕ್ರೀಡಾ ವಸತಿ ಶಾಲೆಗಳಿಗೆ ಕಳುಹಿಸಲು ಹಿಂದೇಟು ಹಾಕುತ್ತಿವೆ.

ಇದರಿಂದಲೂ ಪ್ರವೇಶಾತಿ ಹೆಚ್ಚಳ ಆಗುತ್ತಿಲ್ಲ ಎಂಬ ಅಭಿಪ್ರಾಯವೂ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ. ಮಂಡ್ಯ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿರುವ ಕ್ರೀಡಾ ವಸತಿ ಶಾಲೆಗಳಿಗೆ ಮಕ್ಕಳು ದಾಖಲಾಗಲು ತೀವ್ರ ಆಸಕ್ತಿ ತೋರುತ್ತಾರೆ. ಆದರೆ, ಜಿಲ್ಲೆಯ ಮಕ್ಕಳು ನಿರಾಸಕ್ತಿ ಹೊಂದಿದ್ದಾರೆ. ಕ್ರೀಡಾಳುಗಳಾದರೆ ಏನೇನು ಅವಕಾಶಗಳಿವೆ ಎಂಬುದರ ಬಗ್ಗೆ ಅರಿವು ಇಲ್ಲದಿರುವುದೇ ಇದಕ್ಕೆ ಕಾರಣ ಎಂಬ ಮಾತುಗಳು ಕೇಳಿಬಂದಿವೆ.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಬಾಲಕರ ಮತ್ತು ಬಾಲಕಿಯರ ಕ್ರೀಡಾ ವಸತಿ ಶಾಲೆಗಳಿವೆ. ಜಿಲ್ಲೆಯ ಶಾಲೆಗಳಲ್ಲಿ ೫ ರಿಂದ ೯ನೇ ತರಗತಿಗಳ ತನಕ ಓದುತ್ತಿದ್ದು, ಆಟೋಟಗಳಲ್ಲಿ ಆಸಕ್ತಿ ಇರುವ ಮಕ್ಕಳನ್ನು ಕ್ರೀಡಾ ವಸತಿ ಶಾಲೆಗಳಿಗೆ ಸೇರಿಸಿಕೊಳ್ಳಲಾಗುತ್ತದೆ. ಪ್ರತಿ ವರ್ಷ ಒಂದು ಶಾಲೆಗೆ ೨೫ ಮಕ್ಕಳನ್ನು ದಾಖಲು ಮಾಡಲಾಗುತ್ತದೆ. ಆದರೆ, ಬಾಲಕರ ಕ್ರೀಡಾ ವಸತಿ ಶಾಲೆಯಲ್ಲಿ ಈ ವರ್ಷ ೧೨ ಮಕ್ಕಳು ದಾಖಲಾಗಿದ್ದಾರೆ. ಹಿಂದಿನ ವರ್ಷಗಳಲ್ಲಿ ಈ ಶಾಲೆಯಲ್ಲಿದ್ದ ಮಕ್ಕಳಿಗೆ ಸರಿಯಾಗಿ ಊಟ, ತರಬೇತಿಯೂ ಸಿಗುತ್ತಿರಲಿಲ್ಲ. ಸದ್ಯ ಪರಿಸ್ಥಿತಿ ಸುಧಾರಣೆ ಕಂಡಿದೆ.

ಮತ್ತೊಂದು ಬಾಲಕಿಯರ ಕ್ರೀಡಾ ವಸತಿ ಶಾಲೆಯ ನೂತನ ಕಟ್ಟಡ ಕೆ.ಆರ್.ಐ.ಡಿ.ಎಲ್.ನಿಂದ ನಿರ್ಮಾಣವಾಗಿದ್ದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಹಸ್ತಾಂತರ ಮಾಡುವುದು ಬಾಕಿಯಿದೆ. ಮುಂದಿನ ಶೈಕ್ಷಣಿಕ ಅವಧಿಯೊಳಗೆ ಹಸ್ತಾಂತರ ನಡೆದು ಶಾಲೆ ಆರಂಭವಾಗಲಿದೆ. ಪ್ರವೇಶಾತಿಗೆ ನಿರಾಸಕ್ತಿಗೆ ಕಾರಣಗಳನ್ನು ಪತ್ತೆ ಹಚ್ಚಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ದಾಖಲಾತಿ ಹೆಚ್ಚಳಕ್ಕೆ ಕೆಲವು ಕ್ರಮಗಳನ್ನು ಕೈಗೊಂಡಿದೆ. ಜಿಲ್ಲೆಯ ಶಾಲೆಗಳಿಗೆ ಇಲಾಖೆಯ ಸಹಾಯಕ ನಿರ್ದೇಶಕರು ಒಂದು ಸುತ್ತು ಭೇಟಿ ನೀಡಿ ಕ್ರೀಡಾಸಕ್ತಿ ಇರುವ ಮಕ್ಕಳನ್ನು ವಸತಿ ಶಾಲೆಗೆ ದಾಖಲಿಸುವಂತೆ ಮನವಿ ಮಾಡಿದ್ದಾರೆ.

ಕ್ರೀಡಾ ವಸತಿ ಶಾಲೆಗಳಲ್ಲಿರುವ ಸೌಲಭ್ಯ ಹಾಗೂ ಕ್ರೀಡಾಳುವಾಗಿ ರೂಪುಗೊಂಡರೆ ಆಗುವ ಪ್ರಯೋಜನಗಳಬಗ್ಗೆಯೂ ಮನವರಿಕೆ ಮಾಡಿದ್ದಾರೆ. ನಗರದಲ್ಲಿರುವ ಕ್ರೀಡಾ ಶಾಲೆಯ ಪರಿಸ್ಥಿತಿಯನ್ನು ಸುಧಾರಿಸಲು ಕೆಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ತರಬೇತುದಾರರಿಂದ ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಮಕ್ಕಳಿಗೆ ಕ್ರೀಡಾ ತರಬೇತಿ ಕೊಡಿಸಲಾಗುತ್ತಿದೆ.

ಇತರೆ ಶಾಲೆ ಮಕ್ಕಳಿಗೂ ತರಬೇತಿ:  ಕ್ರೀಡಾ ವಸತಿ ಶಾಲೆಯಿಂದ ಇತರೆ ಶಾಲೆಗಳ ಮಕ್ಕಳಿಗೂ ಅಥ್ಲೆಟಿಕ್ಸ್ ತರಬೇತಿ ನೀಡಲು ಉದ್ದೇಶಿಸಲಾಗಿದೆ. ಈ ನಿಟ್ಟಿನಲ್ಲಿ ಪ್ರಯತ್ನ ಸಾಗಿದ್ದು ಜಿಲ್ಲಾ ಖೋ ಖೋ ಅಸೋಸಿಯೇಷನ್, ನೆಟ್‌ಬಾಲ್ ಅಸೋಸಿಯೇಷನ್ ಜೊತೆ ಮಾತನಾಡಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

” ಜಿಲ್ಲೆಯ ಶಾಲೆಗಳಿಗೆ ಡಿಸೆಂಬರ್‌ನಿಂದ ಭೇಟಿ ನೀಡಿ ಕ್ರೀಡೆಯಲ್ಲಿ ಮುಂದಿರುವ ಮಕ್ಕಳನ್ನು ಮುಂಬರುವ ಶೈಕ್ಷಣಿಕ ಸಾಲಿನಲ್ಲಿ ಕ್ರೀಡಾ ವಸತಿ ಶಾಲೆಗೆ ದಾಖಲಿಸುವಂತೆ ಮನವಿ ಮಾಡುತ್ತೇವೆ. ಎರಡೂ ಶಾಲೆಗಳಿಗೆ ಕನಿಷ್ಠ ತಲಾ ೨೫ ಮಕ್ಕಳನ್ನು ಸೇರಿಸಿಕೊಳ್ಳಲು ಪ್ರಯತ್ನ ಮಾಡಲಾಗುವುದು.”

ಕೆ.ಸುರೇಶ್, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

7 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

10 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

14 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

16 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

17 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

18 hours ago