ಚಂದ್ರಶೇಖರ್
ವಿಜಯನಗರದ ಐಟಿ ಉದ್ಯೋಗಿ ಚಂದ್ರಶೇಖರ್ ಸಂತಸ
ಮೈಸೂರು: ಮಧುಮೇಹದಿಂದ ಬಳಲುತ್ತಿದ್ದ ನಾನು, ಕೆಲವು ವೈದ್ಯರ ಬಳಿ ಚಿಕಿತ್ಸೆ ಪಡೆದರೂಕಾಯಿಲೆ ನಿಯಂತ್ರಣಕ್ಕೆ ಬಾರದೆ ಆತಂಕದಲ್ಲಿದ್ದೆ. ಇಂತಹ ಸಂಕಷ್ಟದ ಸ್ಥಿತಿಯಲ್ಲಿ ಡಾ.ಎ.ಆರ್.ರೇಣುಕಾಪ್ರಸಾದ್ ಅವರ ಸಂಪರ್ಕ ಸಿಕ್ಕಿತು. ಚಿಕಿತ್ಸೆ ಪಡೆದು ಇದೀಗ ಸಂಪೂರ್ಣ ಮಧುಮೇಹ ಮುಕ್ತನಾಗಿ ಆರೋಗ್ಯವಾಗಿದ್ದೇನೆ ಎಂದು ನಗರದ ವಿಜಯನಗರದ ಐಟಿ ಉದ್ಯೋಗಿ ಚಂದ್ರಶೇಖರ್ ಸಂತಸ ವ್ಯಕ್ತಪಡಿಸಿದರು.
‘ಆಂದೋಲನ’ದೊಂದಿಗೆ ಮಾತನಾಡಿದ ಅವರು, ಡಾ.ಎ.ಆರ್. ರೇಣುಕಾಪ್ರಸಾದ್ ಮಧುಮೇಹ ಕಾಯಿಲೆಗೆ ಉತ್ತಮ ಚಿಕಿತ್ಸೆ ನೀಡುತ್ತಾರೆ. ಈ ಕಾಯಿಲೆ ಜೀವನ ಪೂರ್ತಿ ಬಾಧಿಸಲಿದೆ ಎಂಬ ಚಿಂತೆ ನನ್ನನ್ನು ಕಾಡಿತ್ತು. ಆದರೆ, ನಾಲ್ಕು ವರ್ಷಗಳಿಂದ ಮುಕ್ತನಾಗಿದ್ದೇನೆ ಎಂದರು.
ಕೆಲವು ವರ್ಷಗಳ ಹಿಂದೆ ಮಧುಮೇಹ ರೋಗಕ್ಕೆ ತುತ್ತಾದೆ. ಹಲವು ವೈದ್ಯರ ಬಳಿ ಚಿಕಿತ್ಸೆ ಪಡೆದೆ. ಆದರೆ, ಪ್ರಯೋಜನ ಆಗಲಿಲ್ಲ. ನನ್ನ ಸ್ನೇಹಿತರೊಬ್ಬರು ಡಾ.ಎ.ಆರ್.ರೇಣುಕಾ ಪ್ರಸಾದ್ ಅವರ ಬಳಿ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡಿದರು. ಚಿಕಿತ್ಸೆ ಪಡೆದ ಬಳಿಕ ನಿಧಾನವಾಗಿ ಮಧುಮೇಹ ನಿಯಂತ್ರಣಕ್ಕೆ ಬರಲಾರಂಭಿಸಿತು. ಇದಕ್ಕೆ ಪೂರಕವಾಗಿ ನಾನು ವ್ಯಾಯಾಮ ಆರಂಭಿಸಿದೆ. ಈಗ ಸಂಪೂರ್ಣ ಗುಣಮುಖನಾಗಿದ್ದೇನೆ. ಕಳೆದ ಮೂರೂವರೆ ವರ್ಷಗಳಿಂದ ಯಾವುದೇ ಔಷಧ, ಮಾತ್ರೆ ಸೇರಿದಂತೆ ಮಧುಮೇಹಕ್ಕೆ ಚಿಕಿತ್ಸೆ ಪಡೆಯುವು ದನ್ನೇ ನಿಲ್ಲಿಸಿದ್ದೇನೆ ಎಂದು ಹೇಳಿದರು.
ನಿತ್ಯ ವಾಕಿಂಗ್-ಜಾಗಿಂಗ್, ಜಿಮ್: ಮಧು ಮೇಹದ ನಿಯಂತ್ರಣಕ್ಕೆ ದೈಹಿಕ ವ್ಯಾಯಾಮ ಅತ್ಯವಶ್ಯ. ಹೀಗಾಗಿ ನಿತ್ಯ ೫-೬ ಕಿ.ಮೀ. ರನ್ನಿಂಗ್ ಅಥವಾ ವಾಕಿಂಗ್ ಮಾಡಬೇಕು ಅಥವಾ ಆಟೋಟಗಳಲ್ಲಿ ಭಾಗವಹಿಸಬೇಕು. ವಾಲಿಬಾಲ್, ಶಟಲ್ ಬ್ಯಾಡ್ಮಿಂಟನ್, ಕ್ರಿಕೆಟ್, ಫುಟ್ಬಾಲ್ ಯಾವುದೇ ಆಟ, ಜಿಮ್ ಅಥವಾ ಸಾಮಾನ್ಯ ವ್ಯಾಯಾಮಗಳನ್ನು ಮಾಡುವಮೂಲಕ ಮಧುಮೇಹಕ್ಕೆ ಕಡಿವಾಣ ಹಾಕಬಹುದು ಎಂದು ಹೇಳಿದರು.
ಸಿಹಿ ಪದಾರ್ಥಗಳಿಗೆ ಕಡಿವಾಣ: ಟೀ ಅಥವಾ ಕಾಫಿ ಸೇರಿದಂತೆ ನೇರವಾಗಿ ಸಕ್ಕರೆ ಬಳಸುವ ಪದಾರ್ಥಗಳ ಸೇವನೆಯನ್ನು ಸಾಕಷ್ಟು ಕಡಿಮೆಗೊಳಿಸಿದೆ. ಕುರುಕಲು ತಿಂಡಿಗಳನ್ನು ದೂರ ಮಾಡಿದೆ. ತರಕಾರಿಯಿಂದ ಸಿದ್ಧಪಡಿಸಿದ ಪದಾರ್ಥಗಳನ್ನು ಹೆಚ್ಚು ಬಳಸಲು ಆರಂಭಿಸಿದೆ ಎಂದು ಅವರು ತಿಳಿಸಿದರು.
ಹಣ್ಣು, ತರಕಾರಿ ಸೇವನೆ…:
ಅನ್ನ ತಿಂದರೂ ಅದರ ಜತೆಗೆ ತರಕಾರಿ ಮತ್ತು ಹಣ್ಣಿನ ಪದಾರ್ಥಗಳನ್ನು ಸೇವನೆ ಮಾಡುತ್ತ ಬಂದೆ. ಇದೀಗ ನಾನು ಮಧುಮೇಹ ಮುಕ್ತನಾಗಿದ್ದೇನೆ. ಇದಕ್ಕೆಲ್ಲ ಡಾ.ಎ.ಆರ್.ರೇಣುಕಾಪ್ರಸಾದ್ರ ಚಿಕಿತ್ಸೆ, ಸಲಹೆ ಮತ್ತು ಸೂಚನೆಗಳೇ ಕಾರಣ ಎಂದು ಚಂದ್ರಶೇಖರ್ ಹರ್ಷದಿಂದ ಹೇಳಿದರು.
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…