ಚಂದ್ರಶೇಖರ್
ವಿಜಯನಗರದ ಐಟಿ ಉದ್ಯೋಗಿ ಚಂದ್ರಶೇಖರ್ ಸಂತಸ
ಮೈಸೂರು: ಮಧುಮೇಹದಿಂದ ಬಳಲುತ್ತಿದ್ದ ನಾನು, ಕೆಲವು ವೈದ್ಯರ ಬಳಿ ಚಿಕಿತ್ಸೆ ಪಡೆದರೂಕಾಯಿಲೆ ನಿಯಂತ್ರಣಕ್ಕೆ ಬಾರದೆ ಆತಂಕದಲ್ಲಿದ್ದೆ. ಇಂತಹ ಸಂಕಷ್ಟದ ಸ್ಥಿತಿಯಲ್ಲಿ ಡಾ.ಎ.ಆರ್.ರೇಣುಕಾಪ್ರಸಾದ್ ಅವರ ಸಂಪರ್ಕ ಸಿಕ್ಕಿತು. ಚಿಕಿತ್ಸೆ ಪಡೆದು ಇದೀಗ ಸಂಪೂರ್ಣ ಮಧುಮೇಹ ಮುಕ್ತನಾಗಿ ಆರೋಗ್ಯವಾಗಿದ್ದೇನೆ ಎಂದು ನಗರದ ವಿಜಯನಗರದ ಐಟಿ ಉದ್ಯೋಗಿ ಚಂದ್ರಶೇಖರ್ ಸಂತಸ ವ್ಯಕ್ತಪಡಿಸಿದರು.
‘ಆಂದೋಲನ’ದೊಂದಿಗೆ ಮಾತನಾಡಿದ ಅವರು, ಡಾ.ಎ.ಆರ್. ರೇಣುಕಾಪ್ರಸಾದ್ ಮಧುಮೇಹ ಕಾಯಿಲೆಗೆ ಉತ್ತಮ ಚಿಕಿತ್ಸೆ ನೀಡುತ್ತಾರೆ. ಈ ಕಾಯಿಲೆ ಜೀವನ ಪೂರ್ತಿ ಬಾಧಿಸಲಿದೆ ಎಂಬ ಚಿಂತೆ ನನ್ನನ್ನು ಕಾಡಿತ್ತು. ಆದರೆ, ನಾಲ್ಕು ವರ್ಷಗಳಿಂದ ಮುಕ್ತನಾಗಿದ್ದೇನೆ ಎಂದರು.
ಕೆಲವು ವರ್ಷಗಳ ಹಿಂದೆ ಮಧುಮೇಹ ರೋಗಕ್ಕೆ ತುತ್ತಾದೆ. ಹಲವು ವೈದ್ಯರ ಬಳಿ ಚಿಕಿತ್ಸೆ ಪಡೆದೆ. ಆದರೆ, ಪ್ರಯೋಜನ ಆಗಲಿಲ್ಲ. ನನ್ನ ಸ್ನೇಹಿತರೊಬ್ಬರು ಡಾ.ಎ.ಆರ್.ರೇಣುಕಾ ಪ್ರಸಾದ್ ಅವರ ಬಳಿ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡಿದರು. ಚಿಕಿತ್ಸೆ ಪಡೆದ ಬಳಿಕ ನಿಧಾನವಾಗಿ ಮಧುಮೇಹ ನಿಯಂತ್ರಣಕ್ಕೆ ಬರಲಾರಂಭಿಸಿತು. ಇದಕ್ಕೆ ಪೂರಕವಾಗಿ ನಾನು ವ್ಯಾಯಾಮ ಆರಂಭಿಸಿದೆ. ಈಗ ಸಂಪೂರ್ಣ ಗುಣಮುಖನಾಗಿದ್ದೇನೆ. ಕಳೆದ ಮೂರೂವರೆ ವರ್ಷಗಳಿಂದ ಯಾವುದೇ ಔಷಧ, ಮಾತ್ರೆ ಸೇರಿದಂತೆ ಮಧುಮೇಹಕ್ಕೆ ಚಿಕಿತ್ಸೆ ಪಡೆಯುವು ದನ್ನೇ ನಿಲ್ಲಿಸಿದ್ದೇನೆ ಎಂದು ಹೇಳಿದರು.
ನಿತ್ಯ ವಾಕಿಂಗ್-ಜಾಗಿಂಗ್, ಜಿಮ್: ಮಧು ಮೇಹದ ನಿಯಂತ್ರಣಕ್ಕೆ ದೈಹಿಕ ವ್ಯಾಯಾಮ ಅತ್ಯವಶ್ಯ. ಹೀಗಾಗಿ ನಿತ್ಯ ೫-೬ ಕಿ.ಮೀ. ರನ್ನಿಂಗ್ ಅಥವಾ ವಾಕಿಂಗ್ ಮಾಡಬೇಕು ಅಥವಾ ಆಟೋಟಗಳಲ್ಲಿ ಭಾಗವಹಿಸಬೇಕು. ವಾಲಿಬಾಲ್, ಶಟಲ್ ಬ್ಯಾಡ್ಮಿಂಟನ್, ಕ್ರಿಕೆಟ್, ಫುಟ್ಬಾಲ್ ಯಾವುದೇ ಆಟ, ಜಿಮ್ ಅಥವಾ ಸಾಮಾನ್ಯ ವ್ಯಾಯಾಮಗಳನ್ನು ಮಾಡುವಮೂಲಕ ಮಧುಮೇಹಕ್ಕೆ ಕಡಿವಾಣ ಹಾಕಬಹುದು ಎಂದು ಹೇಳಿದರು.
ಸಿಹಿ ಪದಾರ್ಥಗಳಿಗೆ ಕಡಿವಾಣ: ಟೀ ಅಥವಾ ಕಾಫಿ ಸೇರಿದಂತೆ ನೇರವಾಗಿ ಸಕ್ಕರೆ ಬಳಸುವ ಪದಾರ್ಥಗಳ ಸೇವನೆಯನ್ನು ಸಾಕಷ್ಟು ಕಡಿಮೆಗೊಳಿಸಿದೆ. ಕುರುಕಲು ತಿಂಡಿಗಳನ್ನು ದೂರ ಮಾಡಿದೆ. ತರಕಾರಿಯಿಂದ ಸಿದ್ಧಪಡಿಸಿದ ಪದಾರ್ಥಗಳನ್ನು ಹೆಚ್ಚು ಬಳಸಲು ಆರಂಭಿಸಿದೆ ಎಂದು ಅವರು ತಿಳಿಸಿದರು.
ಹಣ್ಣು, ತರಕಾರಿ ಸೇವನೆ…:
ಅನ್ನ ತಿಂದರೂ ಅದರ ಜತೆಗೆ ತರಕಾರಿ ಮತ್ತು ಹಣ್ಣಿನ ಪದಾರ್ಥಗಳನ್ನು ಸೇವನೆ ಮಾಡುತ್ತ ಬಂದೆ. ಇದೀಗ ನಾನು ಮಧುಮೇಹ ಮುಕ್ತನಾಗಿದ್ದೇನೆ. ಇದಕ್ಕೆಲ್ಲ ಡಾ.ಎ.ಆರ್.ರೇಣುಕಾಪ್ರಸಾದ್ರ ಚಿಕಿತ್ಸೆ, ಸಲಹೆ ಮತ್ತು ಸೂಚನೆಗಳೇ ಕಾರಣ ಎಂದು ಚಂದ್ರಶೇಖರ್ ಹರ್ಷದಿಂದ ಹೇಳಿದರು.
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…
ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…
ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…
ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…
ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…