Andolana originals

‘ಮಧುಮೇಹಕ್ಕೆ ಮುಕ್ತಿ ನೀಡಿದ ಡಾ.ರೇಣುಕಾಪ್ರಸಾದ್’

ಚಂದ್ರಶೇಖರ್‌ 

ವಿಜಯನಗರದ ಐಟಿ ಉದ್ಯೋಗಿ ಚಂದ್ರಶೇಖರ್ ಸಂತಸ 

ಮೈಸೂರು: ಮಧುಮೇಹದಿಂದ ಬಳಲುತ್ತಿದ್ದ ನಾನು, ಕೆಲವು ವೈದ್ಯರ ಬಳಿ ಚಿಕಿತ್ಸೆ ಪಡೆದರೂಕಾಯಿಲೆ ನಿಯಂತ್ರಣಕ್ಕೆ ಬಾರದೆ ಆತಂಕದಲ್ಲಿದ್ದೆ. ಇಂತಹ ಸಂಕಷ್ಟದ ಸ್ಥಿತಿಯಲ್ಲಿ ಡಾ.ಎ.ಆರ್.ರೇಣುಕಾಪ್ರಸಾದ್ ಅವರ ಸಂಪರ್ಕ ಸಿಕ್ಕಿತು. ಚಿಕಿತ್ಸೆ ಪಡೆದು ಇದೀಗ ಸಂಪೂರ್ಣ ಮಧುಮೇಹ ಮುಕ್ತನಾಗಿ ಆರೋಗ್ಯವಾಗಿದ್ದೇನೆ ಎಂದು ನಗರದ ವಿಜಯನಗರದ ಐಟಿ ಉದ್ಯೋಗಿ ಚಂದ್ರಶೇಖರ್ ಸಂತಸ ವ್ಯಕ್ತಪಡಿಸಿದರು.

‘ಆಂದೋಲನ’ದೊಂದಿಗೆ ಮಾತನಾಡಿದ ಅವರು, ಡಾ.ಎ.ಆರ್. ರೇಣುಕಾಪ್ರಸಾದ್ ಮಧುಮೇಹ ಕಾಯಿಲೆಗೆ ಉತ್ತಮ ಚಿಕಿತ್ಸೆ ನೀಡುತ್ತಾರೆ. ಈ ಕಾಯಿಲೆ ಜೀವನ ಪೂರ್ತಿ ಬಾಧಿಸಲಿದೆ ಎಂಬ ಚಿಂತೆ ನನ್ನನ್ನು ಕಾಡಿತ್ತು. ಆದರೆ, ನಾಲ್ಕು ವರ್ಷಗಳಿಂದ ಮುಕ್ತನಾಗಿದ್ದೇನೆ ಎಂದರು.

ಕೆಲವು ವರ್ಷಗಳ ಹಿಂದೆ ಮಧುಮೇಹ ರೋಗಕ್ಕೆ ತುತ್ತಾದೆ. ಹಲವು ವೈದ್ಯರ ಬಳಿ ಚಿಕಿತ್ಸೆ ಪಡೆದೆ. ಆದರೆ, ಪ್ರಯೋಜನ ಆಗಲಿಲ್ಲ. ನನ್ನ ಸ್ನೇಹಿತರೊಬ್ಬರು ಡಾ.ಎ.ಆರ್.ರೇಣುಕಾ ಪ್ರಸಾದ್ ಅವರ ಬಳಿ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡಿದರು. ಚಿಕಿತ್ಸೆ ಪಡೆದ ಬಳಿಕ ನಿಧಾನವಾಗಿ ಮಧುಮೇಹ ನಿಯಂತ್ರಣಕ್ಕೆ ಬರಲಾರಂಭಿಸಿತು. ಇದಕ್ಕೆ ಪೂರಕವಾಗಿ ನಾನು ವ್ಯಾಯಾಮ ಆರಂಭಿಸಿದೆ. ಈಗ ಸಂಪೂರ್ಣ ಗುಣಮುಖನಾಗಿದ್ದೇನೆ. ಕಳೆದ ಮೂರೂವರೆ ವರ್ಷಗಳಿಂದ ಯಾವುದೇ ಔಷಧ, ಮಾತ್ರೆ ಸೇರಿದಂತೆ ಮಧುಮೇಹಕ್ಕೆ ಚಿಕಿತ್ಸೆ ಪಡೆಯುವು ದನ್ನೇ ನಿಲ್ಲಿಸಿದ್ದೇನೆ ಎಂದು ಹೇಳಿದರು.

ನಿತ್ಯ ವಾಕಿಂಗ್-ಜಾಗಿಂಗ್, ಜಿಮ್: ಮಧು ಮೇಹದ ನಿಯಂತ್ರಣಕ್ಕೆ ದೈಹಿಕ ವ್ಯಾಯಾಮ ಅತ್ಯವಶ್ಯ. ಹೀಗಾಗಿ ನಿತ್ಯ ೫-೬ ಕಿ.ಮೀ. ರನ್ನಿಂಗ್ ಅಥವಾ ವಾಕಿಂಗ್ ಮಾಡಬೇಕು ಅಥವಾ ಆಟೋಟಗಳಲ್ಲಿ ಭಾಗವಹಿಸಬೇಕು. ವಾಲಿಬಾಲ್, ಶಟಲ್ ಬ್ಯಾಡ್ಮಿಂಟನ್, ಕ್ರಿಕೆಟ್, ಫುಟ್‌ಬಾಲ್ ಯಾವುದೇ ಆಟ, ಜಿಮ್ ಅಥವಾ ಸಾಮಾನ್ಯ ವ್ಯಾಯಾಮಗಳನ್ನು ಮಾಡುವಮೂಲಕ ಮಧುಮೇಹಕ್ಕೆ ಕಡಿವಾಣ ಹಾಕಬಹುದು ಎಂದು ಹೇಳಿದರು.

ಸಿಹಿ ಪದಾರ್ಥಗಳಿಗೆ ಕಡಿವಾಣ: ಟೀ ಅಥವಾ ಕಾಫಿ ಸೇರಿದಂತೆ ನೇರವಾಗಿ ಸಕ್ಕರೆ ಬಳಸುವ ಪದಾರ್ಥಗಳ ಸೇವನೆಯನ್ನು ಸಾಕಷ್ಟು ಕಡಿಮೆಗೊಳಿಸಿದೆ. ಕುರುಕಲು ತಿಂಡಿಗಳನ್ನು ದೂರ ಮಾಡಿದೆ. ತರಕಾರಿಯಿಂದ ಸಿದ್ಧಪಡಿಸಿದ ಪದಾರ್ಥಗಳನ್ನು ಹೆಚ್ಚು ಬಳಸಲು ಆರಂಭಿಸಿದೆ ಎಂದು ಅವರು ತಿಳಿಸಿದರು.

ಹಣ್ಣು, ತರಕಾರಿ ಸೇವನೆ…: 

ಅನ್ನ ತಿಂದರೂ ಅದರ ಜತೆಗೆ ತರಕಾರಿ ಮತ್ತು ಹಣ್ಣಿನ ಪದಾರ್ಥಗಳನ್ನು ಸೇವನೆ ಮಾಡುತ್ತ ಬಂದೆ. ಇದೀಗ ನಾನು ಮಧುಮೇಹ ಮುಕ್ತನಾಗಿದ್ದೇನೆ. ಇದಕ್ಕೆಲ್ಲ ಡಾ.ಎ.ಆರ್.ರೇಣುಕಾಪ್ರಸಾದ್ರ ಚಿಕಿತ್ಸೆ, ಸಲಹೆ ಮತ್ತು ಸೂಚನೆಗಳೇ ಕಾರಣ ಎಂದು ಚಂದ್ರಶೇಖರ್ ಹರ್ಷದಿಂದ ಹೇಳಿದರು.

ಆಂದೋಲನ ಡೆಸ್ಕ್

Recent Posts

ಮೇ.13 ರಿಂದ 3 ದಿನಗಳ ಕಾಲ ಟ್ರಂಪ್‌ ಚೀನಾ ಪ್ರವಾಸ

ವಾಷಿಂಗ್ಟನ್:‌ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರ ಆಹ್ವಾನದ ಮೇರೆಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೇ.13ರಿಂದ 15ರವರೆಗೆ ಚೀನಾಗೆ…

6 mins ago

ʻಪ್ರೀತಿ ಎಲ್ಲಕ್ಕಿಂತ ಶಕ್ತಿಶಾಲಿʼ ವಿಜಯ್‌ ಮುಖ್ಯಮಂತ್ರಿ ಆದ ಬೆನ್ನಲ್ಲೇ ತ್ರಿಶಾ ಪೋಸ್ಟ್‌

ಚೆನ್ನೈ : ಜೋಸೆಫ್‌ ವಿಜಯ್ ತಮಿಳುನಾಡಿನ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಅವರ ಆಪ್ತ ಸ್ನೇಹಿತೆ, ನಟಿ…

46 mins ago

ಚಿನ್ನ ಖರೀದಿ ನಿಲ್ಸಿ ; ಇಂಧನ ಕಡಿಮೆ ಬಳಸಿ : ಬೆಲೆ ಏರಿಕೆ ಮುನ್ಸೂಚನೆ ಕೊಟ್ರಾ ಪ್ರಧಾನಿ ಮೋದಿ?

ಹೈದರಾಬಾದ್‌ : ಅಮೆರಿಕ-ಇರಾನ್‌ ಸಂಘರ್ಷವು ಜಾಗತಿಕ ತೈಲ ಮಾರುಕಟ್ಟೆ ಹಾಗೂ ಅರ್ಥ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಜಾಗತಿಕ ತೈಲ…

2 hours ago

ದ ಗ್ರೇಟ್‌ ನಿಕೋಬಾರ್‌ ಯೋಜನೆ : ವಿಕಾಸವೋ? ವಿನಾಶವೋ?

ಶುಭಾ ಖಟಾವಕರ ಮ್ಹೆತ್ರಸ್‌ 72,000 ಕೋಟಿ ರೂ.ಗಳಿಂದ 90,000 ಕೋಟಿ ರೂ.ವೆಚ್ಚದ ಯೋಜನೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ…

3 hours ago

ಕಳೆದ ಚುನಾವಣೆ : ಇಬ್ಬರು ಪರಿಣಿತರ ವಿಶ್ಲೇಷಣೆ

ರಾಜಕಾರಣಿಗಳು ಕೊನೆಗೂ ಕೇಳಿಕೊಳ್ಳಬೇಕಿರುವುದು ನೀವು ಯಾರೋ ಒಬ್ಬರ ಬದುಕು ಚಂದವಾಗಲು ಕಾರಣವಾದಿರಾ ಎಂಬ ಪ್ರಶ್ನೆ ಮಾತ್ರವೇ. ಅದೊಂದೇ ಸತ್ಯ. ಉಳಿದದ್ದೆಲ್ಲ…

4 hours ago

ತಾಯಂದಿರ ದಿನ ವಿಶೇಷ | ನನ್ನ ಕರುಳ ಕುಡಿ ನನ್ನದೇ ಆಯ್ಕೆ

ಸಂಗಾತಿಯ ಹಂಗಿಲ್ಲದೆ ಅಮ್ಮನಾದ ಖ್ಯಾತ ಚಿತ್ರತಾರೆ ಭಾವನಾ ರಾಮಣ್ಣ ಜೊತೆ ಮಾತುಕತೆ      ನಿಮ್ಮ ವೃತ್ತಿಪರ ಒತ್ತಡಗಳ ನಡುವೆ…

4 hours ago