Andolana originals

‘ಮಧುಮೇಹಕ್ಕೆ ಮುಕ್ತಿ ನೀಡಿದ ಡಾ.ರೇಣುಕಾಪ್ರಸಾದ್’

ಚಂದ್ರಶೇಖರ್‌ 

ವಿಜಯನಗರದ ಐಟಿ ಉದ್ಯೋಗಿ ಚಂದ್ರಶೇಖರ್ ಸಂತಸ 

ಮೈಸೂರು: ಮಧುಮೇಹದಿಂದ ಬಳಲುತ್ತಿದ್ದ ನಾನು, ಕೆಲವು ವೈದ್ಯರ ಬಳಿ ಚಿಕಿತ್ಸೆ ಪಡೆದರೂಕಾಯಿಲೆ ನಿಯಂತ್ರಣಕ್ಕೆ ಬಾರದೆ ಆತಂಕದಲ್ಲಿದ್ದೆ. ಇಂತಹ ಸಂಕಷ್ಟದ ಸ್ಥಿತಿಯಲ್ಲಿ ಡಾ.ಎ.ಆರ್.ರೇಣುಕಾಪ್ರಸಾದ್ ಅವರ ಸಂಪರ್ಕ ಸಿಕ್ಕಿತು. ಚಿಕಿತ್ಸೆ ಪಡೆದು ಇದೀಗ ಸಂಪೂರ್ಣ ಮಧುಮೇಹ ಮುಕ್ತನಾಗಿ ಆರೋಗ್ಯವಾಗಿದ್ದೇನೆ ಎಂದು ನಗರದ ವಿಜಯನಗರದ ಐಟಿ ಉದ್ಯೋಗಿ ಚಂದ್ರಶೇಖರ್ ಸಂತಸ ವ್ಯಕ್ತಪಡಿಸಿದರು.

‘ಆಂದೋಲನ’ದೊಂದಿಗೆ ಮಾತನಾಡಿದ ಅವರು, ಡಾ.ಎ.ಆರ್. ರೇಣುಕಾಪ್ರಸಾದ್ ಮಧುಮೇಹ ಕಾಯಿಲೆಗೆ ಉತ್ತಮ ಚಿಕಿತ್ಸೆ ನೀಡುತ್ತಾರೆ. ಈ ಕಾಯಿಲೆ ಜೀವನ ಪೂರ್ತಿ ಬಾಧಿಸಲಿದೆ ಎಂಬ ಚಿಂತೆ ನನ್ನನ್ನು ಕಾಡಿತ್ತು. ಆದರೆ, ನಾಲ್ಕು ವರ್ಷಗಳಿಂದ ಮುಕ್ತನಾಗಿದ್ದೇನೆ ಎಂದರು.

ಕೆಲವು ವರ್ಷಗಳ ಹಿಂದೆ ಮಧುಮೇಹ ರೋಗಕ್ಕೆ ತುತ್ತಾದೆ. ಹಲವು ವೈದ್ಯರ ಬಳಿ ಚಿಕಿತ್ಸೆ ಪಡೆದೆ. ಆದರೆ, ಪ್ರಯೋಜನ ಆಗಲಿಲ್ಲ. ನನ್ನ ಸ್ನೇಹಿತರೊಬ್ಬರು ಡಾ.ಎ.ಆರ್.ರೇಣುಕಾ ಪ್ರಸಾದ್ ಅವರ ಬಳಿ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡಿದರು. ಚಿಕಿತ್ಸೆ ಪಡೆದ ಬಳಿಕ ನಿಧಾನವಾಗಿ ಮಧುಮೇಹ ನಿಯಂತ್ರಣಕ್ಕೆ ಬರಲಾರಂಭಿಸಿತು. ಇದಕ್ಕೆ ಪೂರಕವಾಗಿ ನಾನು ವ್ಯಾಯಾಮ ಆರಂಭಿಸಿದೆ. ಈಗ ಸಂಪೂರ್ಣ ಗುಣಮುಖನಾಗಿದ್ದೇನೆ. ಕಳೆದ ಮೂರೂವರೆ ವರ್ಷಗಳಿಂದ ಯಾವುದೇ ಔಷಧ, ಮಾತ್ರೆ ಸೇರಿದಂತೆ ಮಧುಮೇಹಕ್ಕೆ ಚಿಕಿತ್ಸೆ ಪಡೆಯುವು ದನ್ನೇ ನಿಲ್ಲಿಸಿದ್ದೇನೆ ಎಂದು ಹೇಳಿದರು.

ನಿತ್ಯ ವಾಕಿಂಗ್-ಜಾಗಿಂಗ್, ಜಿಮ್: ಮಧು ಮೇಹದ ನಿಯಂತ್ರಣಕ್ಕೆ ದೈಹಿಕ ವ್ಯಾಯಾಮ ಅತ್ಯವಶ್ಯ. ಹೀಗಾಗಿ ನಿತ್ಯ ೫-೬ ಕಿ.ಮೀ. ರನ್ನಿಂಗ್ ಅಥವಾ ವಾಕಿಂಗ್ ಮಾಡಬೇಕು ಅಥವಾ ಆಟೋಟಗಳಲ್ಲಿ ಭಾಗವಹಿಸಬೇಕು. ವಾಲಿಬಾಲ್, ಶಟಲ್ ಬ್ಯಾಡ್ಮಿಂಟನ್, ಕ್ರಿಕೆಟ್, ಫುಟ್‌ಬಾಲ್ ಯಾವುದೇ ಆಟ, ಜಿಮ್ ಅಥವಾ ಸಾಮಾನ್ಯ ವ್ಯಾಯಾಮಗಳನ್ನು ಮಾಡುವಮೂಲಕ ಮಧುಮೇಹಕ್ಕೆ ಕಡಿವಾಣ ಹಾಕಬಹುದು ಎಂದು ಹೇಳಿದರು.

ಸಿಹಿ ಪದಾರ್ಥಗಳಿಗೆ ಕಡಿವಾಣ: ಟೀ ಅಥವಾ ಕಾಫಿ ಸೇರಿದಂತೆ ನೇರವಾಗಿ ಸಕ್ಕರೆ ಬಳಸುವ ಪದಾರ್ಥಗಳ ಸೇವನೆಯನ್ನು ಸಾಕಷ್ಟು ಕಡಿಮೆಗೊಳಿಸಿದೆ. ಕುರುಕಲು ತಿಂಡಿಗಳನ್ನು ದೂರ ಮಾಡಿದೆ. ತರಕಾರಿಯಿಂದ ಸಿದ್ಧಪಡಿಸಿದ ಪದಾರ್ಥಗಳನ್ನು ಹೆಚ್ಚು ಬಳಸಲು ಆರಂಭಿಸಿದೆ ಎಂದು ಅವರು ತಿಳಿಸಿದರು.

ಹಣ್ಣು, ತರಕಾರಿ ಸೇವನೆ…: 

ಅನ್ನ ತಿಂದರೂ ಅದರ ಜತೆಗೆ ತರಕಾರಿ ಮತ್ತು ಹಣ್ಣಿನ ಪದಾರ್ಥಗಳನ್ನು ಸೇವನೆ ಮಾಡುತ್ತ ಬಂದೆ. ಇದೀಗ ನಾನು ಮಧುಮೇಹ ಮುಕ್ತನಾಗಿದ್ದೇನೆ. ಇದಕ್ಕೆಲ್ಲ ಡಾ.ಎ.ಆರ್.ರೇಣುಕಾಪ್ರಸಾದ್ರ ಚಿಕಿತ್ಸೆ, ಸಲಹೆ ಮತ್ತು ಸೂಚನೆಗಳೇ ಕಾರಣ ಎಂದು ಚಂದ್ರಶೇಖರ್ ಹರ್ಷದಿಂದ ಹೇಳಿದರು.

ಆಂದೋಲನ ಡೆಸ್ಕ್

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

11 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

11 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

11 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

11 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

11 hours ago