Andolana originals

‘ಒಳಚರಂಡಿ ಸಮಸ್ಯೆ: ಸುಣ್ಣದ ಕೇರಿ ನಿವಾಸಿಗಳು ಹೈರಾಣ’

ನಿವಾಸಿಗಳ ದೂರಿಗೆ ಸ್ಪಂದಿಸದ ಮಹಾನಗರಪಾಲಿಕೆ ಅಧಿಕಾರಿಗಳು

ಮೈಸೂರು: ಮಹಾನಗರ ಪಾಲಿಕೆಯ ನಿರ್ಲಕ್ಷ್ಯದಿಂದ ನಗರದ ಕೆಲ ನಿವಾಸಿಗಳ ಮನೆಗಳಿಗೆ ಒಳಚರಂಡಿ ನೀರು ನುಗ್ಗುತಿದ್ದು, ಸಮಸ್ಯೆಯನ್ನು ಕೇಳವವರೇಇಲ್ಲದಂತಾಗಿದೆ. ಕೊಳಚೆ ನೀರು ಮನೆಗಳಿಗೆ ನುಗ್ಗುತ್ತಿರು ವುದರಿಂದ ಡೆಂಗ್ಯು, ಮಲೇರಿಯಾದಂಥ ಕಾಯಿಲೆಗಳಿಗೆ ತುತ್ತಾಗಿ ಪ್ರಾಣಾಪಾಯ ಎದುರಿಸುವಂತಾಗಿದೆ.

ಈ ಸಮಸ್ಯೆಯನ್ನು ನಿವಾಸಿಗಳು ಪಾಲಿಕೆ ಗಮನಕ್ಕೆ ತಂದು ಸರಿಪಡಿಸಲು ಮನವಿ ಮಾಡಿದ್ದರೂ ಅಧಿಕಾರಿಗಳು ಸ್ಪಂದಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ. ತಕ್ಷಣ ಪಾಲಿಕೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ನಿವಾಸಿಗಳೊಡಗೂಡಿ ಪಾಲಿಕೆ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಮೈಸೂರು ಕನ್ನಡ ವೇದಿಕೆ ಅಧ್ಯಕ್ಷ ಎಸ್. ಬಾಲಕೃಷ್ಣ ಎಚ್ಚರಿಕೆ ನೀಡಿದ್ದಾರೆ.

ನಗರದ ಹೃದಯ ಭಾಗದಲ್ಲಿರುವ ಸುಣ್ಣದಕೇರಿಯ ಎರಡು ಮತ್ತು ಮೂರನೇ ಅಡ್ಡ ರಸ್ತೆಗಳಲ್ಲಿ ಒಳಚರಂಡಿ ನೀರು ಮೇಲೆ ಉಕ್ಕಿ ಮನೆಗಳಿಗೆ ನುಗ್ಗುತ್ತಿದೆ. ಸಮಸ್ಯೆ ಬಗೆಹರಿಸಬೇಕೆಂದು ಪಾಲಿಕೆ ಅಽಕಾರಿಗಳಿಗೆ ದೂರು ನೀಡಿದರೆ ಸಹಾಯಕರನ್ನು ಸ್ಥಳಕ್ಕೆ ಕಳುಹಿಸಿ, ಸಮಸ್ಯೆಗೆ ತೇಪೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಸೂಕ್ತ ಪರಿಹಾರ ಕಲ್ಪಿಸದೇ ನಿರ್ಲಕ್ಷ್ಯವಹಿಸುತ್ತಿದ್ದಾರೆ. ಮಲಿನ ನೀರು ಮನೆಗಳ ಒಳಗೆ ನುಗ್ಗುವುದರಿಂದ ದುರ್ವಾಸನೆ ಹರಡಿ, ಮನೆಯ ಪರಿಸರವೇ ಹಾಳಾಗುತ್ತಿದೆ. ದುರ್ವಾಸನೆ ನಡುವೆ ಊಟ, ತಿಂಡಿ ಸೇವಿಸುವುದೂ ಕಷ್ಟವಾಗಿದೆ.

ನಿವಾಸಿಗಳಲ್ಲಿ ಅನಾರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದ್ದು, ನಗರಪಾಲಿಕೆ ಇಲ್ಲಿನ ಜನರಿಗೆ ಸಾಂಕ್ರಾಮಿಕ ರೋಗಗಳನ್ನು ದೀಪಾವಳಿ ಉಡುಗೊರೆಯಾಗಿ ನೀಡುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಕ್ಷೇತ್ರದ ಶಾಸಕರಿಗೆ ಕರೆ ಮಾಡಿ ಸಮಸ್ಯೆ ತಿಳಿಸಿದಾಗ ೨-೩ ತಿಂಗಳುಗಳಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಆಶ್ವಾಸನೆ ನೀಡಿದರು. ಆದರೆ ಇದುವರೆಗೂ ಯಾವ ಪ್ರಯೋಜನವೂ ಆಗಿಲ್ಲ. ಹೀಗಾದರೆ ಜನ ಸಾಮಾನ್ಯರ ಪರಿಸ್ಥಿತಿ ಏನು ಎಂದು ಪ್ರಶ್ನಿಸಿದ್ದಾರೆ.

ಒಳಚರಂಡಿ ನೀರು ಮನೆಯೊಳಗೆ ಬರುತ್ತಿರುವ ಕಾರಣ ಶೌಚಾಲಯಕ್ಕೆ ಹೋಗಲಾಗದೇ, ಸಾರ್ವಜನಿಕ ಶೌಚಾಲಯ ಬಳಸುವಂತಾಗಿದೆ. ಮಲಗುವ ವೇಳೆ ಮೂಗಿಗೆ ಬಟ್ಟೆ ಕಟ್ಟಿಕೊಂಡು ಮಲಗುವ ಪರಿಸ್ಥಿತಿಎದುರಾಗಿದೆ. ಹಲವರು ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿವಾಸಿಗಳ ಗೋಳು ಕೇಳುವರು ಯಾರು?. ಕೂಡಲೇ ಇದನ್ನು ಸರಿಪಡಿಸದಿದ್ದರೆ, ನಿವಾಸಿಗಳು ಕುಟುಂಬ ಸಮೇತರಾಗಿ ನಗರ ಪಾಲಿಕೆ ಮುಂದೆ ಧರಣಿ ನಡೆಸಬೇಕಾಗುತ್ತದೆ ಎಂದು ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ.

” ಮೈಸೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಬಡಾವಣೆಗಳ ಬಗ್ಗೆ ಅರಿವೇ ಇಲ್ಲ. ಯಾವುದೇ ರೀತಿಯ ಸಾರ್ವಜನಿಕ ಸಭೆಯನ್ನೂ ಕರೆದಿಲ್ಲ, ಅಧಿಕಾರಿಗಳು ಸಭೆ ಕರೆದು ಮಾತನಾಡಿಲ್ಲ. ಪಾಲಿಕೆ ಚುನಾಯಿತ ಪ್ರತಿನಿಽಗಳಿಲ್ಲದಿರುವುದೇ ಇದಕ್ಕೆಲ್ಲಾ ಕಾರಣವಾಗಿದೆ.ನಿವಾಸಿಗಳು ಕರೆ ಮಾಡಿದರೆ ಸಹಾಯಕ ಇಂಜಿನಿಯರ್‌ಗಳು ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಳ್ಳುತ್ತಾರೆ.”

-೨-೩ನೇ ಕ್ರಾಸ್ ನಿವಾಸಿಗಳು, ಸುಣ್ಣದಕೇರಿ

ಆಂದೋಲನ ಡೆಸ್ಕ್

Recent Posts

ಚಿರತೆ ದಾಳಿ: ಕೂಲಿ ಕಾರ್ಮಿಕನಿಗೆ ಗಾಯ

ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ…

37 mins ago

ಓದುಗರ ಪತ್ರ: ಡಾಂಬರು ಕಾಣದ ಕಾಳಿಹುಂಡಿ ರಸ್ತೆ

ಸರಗೂರು ತಾಲ್ಲೂಕಿನ ಕಾಳಿಹುಂಡಿ ಗ್ರಾಮದ ರಸ್ತೆ ಡಾಂಬರು ಕಾಣದೆ ಹಲವು ವರ್ಷಗಳೇ ಆಗಿವೆ. ಈ ರಸ್ತೆಯು ಹಳ್ಳಕೊಳ್ಳಗಳಿಂದ ಕೂಡಿದೆ. ಈ…

40 mins ago

ಓದುಗರ ಪತ್ರ: ಬಿರು ಬೇಸಿಗೆಯಲ್ಲಿ ಇರಲಿ ಎಚ್ಚರ

ಬೇಸಿಗೆ ಶುರುವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸುಮಾರು ೩೪ ಸೆಲ್ಸಿಯಸ್‌ಗೂ ಹೆಚ್ಚು ಪ್ರಮಾಣದಲ್ಲಿ ಬಿಸಿಲಿನ ತಾಪ ಮಾನ ಏರಿಕೆಯಾಗಿರುವ…

44 mins ago

ಜಾ.ದಳ ತಾಲ್ಲೂಕು ಅಧ್ಯಕ್ಷ ಸ್ಥಾನಕ್ಕೆ ಮುಖಂಡರ ಪೈಪೋಟಿ

ಮಂಜು ಕೋಟೆ ಕೋಟೆ: ರಾಜೇಂದ್ರ, ಸಿ.ವಿ.ನಾಗರಾಜು, ಯೋಗಾನರಸಿಂಹೇಗೌಡ, ಗುಂಡತ್ತೂರು ಪ್ರಕಾಶ್ ಪ್ರಬಲ ಆಕಾಂಕ್ಷಿಗಳು ಎಚ್.ಡಿ.ಕೋಟೆ: ಜಾ.ದಳ ತಾಲ್ಲೂಕು ಅಧ್ಯಕ್ಷರನ್ನು ನೇಮಕ…

50 mins ago

ಎಲ್ಲೆಂದರಲ್ಲಿ ಕಸ ಸುರಿದರೆ ಬೀಳಲಿದೆ ದಂಡ!

ಪುರಸಭೆಯಿಂದ ಹಲವು ಕಡೆಗಳಲ್ಲಿ ಸಿಸಿಟಿವಿ ಅಳವಡಿಕೆ; ಸ್ವಚ್ಛ ಪಟ್ಟಣಕ್ಕೆ ಸಹಕರಿಸಲು ಮನವಿ ಗುಂಡ್ಲುಪೇಟೆ: ಪಟ್ಟಣದ ಕೆಲವೆಡೆ ಕಸ ಸುರಿಯದಂತೆ ಎಚ್ಚರಿಕೆ…

54 mins ago

ಅನಿಲ ಬಿಕ್ಕಟ್ಟು: ಕೃಷಿ, ಪ್ರವಾಸೋದ್ಯಮಕ್ಕೆ ಇಕ್ಕಟ್ಟು

ಕೆ.ಬಿ.ರಮೇಶನಾಯಕ ಮೈಸೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಭಾರತದ ಮೇಲೆ ದಿನದಿಂದ ದಿನಕ್ಕೆ ಅನಿಲ ಬಿಕ್ಕಟ್ಟು ಬಿಗಡಾಯಿಸುತ್ತಿದ್ದು, ವಾಣಿಜ್ಯ ಬಳಕೆಯ…

1 hour ago